ಇಚ್ಲಂಪಾಡಿಯ ಕರ್ತಡ್ಕಕ್ಕೆ ಕೂಡಿಬಂತು ಸೇತುವೆ ಭಾಗ್ಯ
ಭರದಿಂದ ನಡೆಯುತ್ತಿದೆ ಕಾಮಗಾರಿ
Team Udayavani, Apr 27, 2022, 9:13 AM IST
ಸುಬ್ರಹ್ಮಣ್ಯ: ಹಲವು ವರ್ಷ ಗಳಿಂದ ಅಡಿಕೆ ಮರದ ಪಾಲದಲ್ಲಿ ಸಂಚರಿಸುವ ಇಚ್ಲಂಪಾಡಿಯ ಕರ್ತಡ್ಕ ಎಂಬಲ್ಲಿಯ ತೋಡಿಗೆ ಸೇತುವೆ ನಿರ್ಮಾಣ ಭರದಿಂದ ಸಾಗುತ್ತಿದ್ದು, ಹಲವು ವರ್ಷಗಳ ಬಳಿಕ ಇಲ್ಲಿನ ನಿವಾಸಿಗಳ ಮರದ ಪಾಲದ ಮೇಲಿನ ನಡಿಗೆಗೆ ಮುಕ್ತಿ ಸಿಗಲಿದೆ.
ಕಡಬ ತಾಲೂಕಿನ ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯ ಇಚ್ಲಂಪಾಡಿ ಗ್ರಾಮದ 2ನೇ ವಾರ್ಡಿನ ಕರ್ತಡ್ಕ ಎಂಬಲ್ಲಿ ತೋಡಿಗೆ ಸೇತುವೆ ಇಲ್ಲದೆ ಸ್ಥಳೀಯರೇ ಅಡಿಕೆ ಮರದ ಪಾಲ ನಿರ್ಮಿಸಿ ಅದರ ಮೇಲೆ ಸಂಚರಿಸುತ್ತಿದ್ದರು. ಮಕ್ಕಳು, ವೃದ್ಧರು, ಅನಾರೋಗ್ಯ ಪೀಡಿತರು ಮಳೆಗಾಲದಲ್ಲಿ ಅಪಾಯಕಾರಿ ಪಾಲದಲ್ಲಿ ಸಂಚರಿಸಬೇಕಿತ್ತು. ಬೇಸಗೆಯಲ್ಲಿ ತೋಡಿಗೆ ಪೈಪ್ ಅಳವಡಿಸಿ ರಸ್ತೆ ನಿರ್ಮಿಸುತ್ತಿದ್ದರು.
ಸೇತುವೆ ಮಂಜೂರು
ಇಲ್ಲಿಗೆ ಸರ್ವಋತು ಸೇತುವೆ ನಿರ್ಮಿಸುವಂತೆ ಹಲವಾರು ವರ್ಷಗಳ ಬೇಡಿಕೆ ಇತ್ತು. ಫಲಾನುಭವಿಗಳ ಮನವಿಗೆ ಇದೀಗ ಸ್ಪಂದನೆ ದೊರೆತಿದೆ. ಲೋಕೋಪಯೋಗಿ ಇಲಾಖೆಯ ಗ್ರಾಮ ಬಂಧ ಸೇತು ಯೋಜನೆಯಡಿ ಇಲ್ಲಿ ಸೇತುವೆ ನಿರ್ಮಾಣವಾಗಲಿದ್ದು, ಸುಮಾರು 18 ಲಕ್ಷ ರೂ. ಅನುದಾನದಲ್ಲಿ ಕಾಮಗಾರಿ ನಡೆಯಲಿದೆ.
ಕಾಮಗಾರಿ ಆರಂಭ
ಸೇತುವೆ ನಿರ್ಮಿಸುವ ಕಾಮಗಾರಿ ಈಗ ಆರಂಭಗೊಂಡಿದೆ. ಮೊದಲ ಹಂತದ ಪಿಲ್ಲರ್ ನಿರ್ಮಾಣ ಕಾಮಗಾರಿ ನಡೆಯು ತ್ತಿದೆ. ನವನೀತ್ ಎಂಬವರು ಕಾಮಗಾರಿ ನಿರ್ವಹಿಸುತ್ತಿದ್ದಾರೆ. ಮಳೆಗಾಲಕ್ಕೆ ಮೊದಲು ಕಾಮಗಾರಿ ಮುಗಿಸುವ ಸೂಚನೆ ನೀಡಲಾಗಿದೆ. ಇಲ್ಲಿನ ಸಮಸ್ಯೆ ಬಗ್ಗೆ ಉದಯವಾಣಿ ಸುದಿನದಲ್ಲೂ ವರದಿಯಾಗಿತ್ತು. ಇದೀಗ ಕಾಮಗಾರಿ ಆರಂಭಿಸುವ ಮೂಲಕ ಈ ಭಾಗದ ಜನತೆಯ ಸಮಸ್ಯೆಗೆ ಮುಕ್ತಿ ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ