‘ಕಮಿಲ ಬಳಿ ನಮಗೊಂದು ಸೇತುವೆ ನಿರ್ಮಿಸಿ ಕೊಡಿ’


Team Udayavani, Aug 16, 2018, 10:05 AM IST

16-agust-1.jpg

ಸುಬ್ರಹ್ಮಣ್ಯ: ಶಾಲೆಗೆ ತೆರಳುವ ದಾರಿ ಮಧ್ಯೆ ಹೊಳೆ ಇದೆ. ಅದಕ್ಕೊಂದು ಸೇತುವೆ ನಿರ್ಮಿಸಿ ಕೊಡಿ ಎಂದು ಶಾಲಾ ಬಾಲಕಿಯೋರ್ವಳು ರಾಜ್ಯದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಮೊರೆ ಇಟ್ಟಿದ್ದಾಳೆ. ಗುತ್ತಿಗಾರು ಗ್ರಾಮದ ಕಮಿಲದ ಮೊಗ್ರ ಸ.ಹಿ.ಪ್ರಾ. ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಸೃಷ್ಟಿ ಎನ್‌.ಎ. ಅವರು ಮುಖ್ಯ ಮಂತ್ರಿಗೆ ಮನವಿ ಪತ್ರ ನೀಡಿದ್ದಾರೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ಮಂಗಳವಾರ ಎಚ್‌ ಡಿಕೆ ಭೇಟಿ ಇತ್ತ ವೇಳೆ ಬಾಲಕಿ ಮುಖ್ಯ ಮಂತ್ರಿಗಳನ್ನು ಭೇಟಿ ಮಾಡಿ ಲಿಖಿತ ಮನವಿ ಮಾಡಿಕೊಂಡಿದ್ದಾಳೆ. ಮುಖ್ಯಮಂತ್ರಿಗಳ ಬಳಿ ಬಂದ ಆಕೆಯಲ್ಲಿ, ‘ಏನು ಪುಟ್ಟ ನಿನ್ನ ಸಮಸ್ಯೆ?’ ಎಂದು ಕೇಳಿದರು. ಆಕೆಯಲ್ಲಿದ್ದ ಸೇತುವೆ ಬೇಡಿಕೆಯ ಮನವಿ ಸ್ವೀಕರಿಸಿದ ಸಿಎಂ, ‘ಆಯಿತಮ್ಮ ನಿನ್ನ ಬೇಡಿಕೆಯನ್ನು ಈಡೇರಿಸಿಕೊಡುತ್ತೇನೆ. ಚೆನ್ನಾಗಿ ಓದು’ ಅಂತ ಬೆನ್ನು ತಟ್ಟಿದರು.

ಇಲ್ಲಿನವರದ್ದು ನಿತ್ಯ ಸಂಕಟ
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲ ಮೊಗ್ರದಲ್ಲಿ ಸರಕಾರಿ ಹಿ.ಪ್ರಾ. ಶಾಲೆಯಿದೆ. 1943ರಲ್ಲಿ ಈ ಶಾಲೆ ಇಲ್ಲಿ ಸ್ಥಾಪನೆಗೊಂಡಿದೆ. ಮಕ್ಕಳ ಕೊರತೆ ಈ ಶಾಲೆಯಲ್ಲಿ ವರ್ಷದಿಂದ ವರ್ಷಕ್ಕೆ ಕಾಡುತ್ತಲೇ ಇದೆ. ಶಾಲೆಗೆ ತೆರಳುವ ಮಾರ್ಗ ಮಧ್ಯೆ ಇರುವ ಹೊಳೆ ದಾಟಲು ಸಮಸ್ಯೆ ಇರುವ ಕಾರಣದಿಂದ ಹೆತ್ತವರು ತಮ್ಮ ಮಕ್ಕಳನ್ನು ಈ ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಕೆಲವರು ಅನಿವಾರ್ಯವಾಗಿ ಈ ಶಾಲೆಗೆ ತಮ್ಮ ಮಕ್ಕಳನ್ನು ಕಳುಹಿಸುತ್ತಿದ್ದಾರೆ. ಹೆತ್ತವರು ಮತ್ತು ಶಾಲಾ ಮಕ್ಕಳು ಮಳೆಗಾಲದ ಅವಧಿಯಲ್ಲಿ ದಿನನಿತ್ಯ ಸಂಕಷ್ಟ ಅನುಭವಿಸಬೇಕು. ಶಾಲೆ ಆರಂಭವಾಗುವ ಮತ್ತು ಬಿಡುವ ಅವಧಿಯಲ್ಲಿ ಹೆತ್ತವರು ತಮ್ಮ ಮಕ್ಕಳೊಂದಿಗೆ ಹೊಳೆ ತನಕ ಬಂದು ಹೊಳೆ ದಾಟಿಸಿ ಕಳಿಸಬೇಕು. ಸಂಜೆ ವೇಳೆ ನಿತ್ಯ ಇಲ್ಲಿ ಬಂದು ಕಾದು ಕುಳಿತುಕೊಳ್ಳಬೇಕು. ಹೀಗಾಗಿ ಇಲ್ಲೊಂದು ಸೇತುವೆ ಅತ್ಯವಶ್ಯಕವಾಗಿ ಆಗಬೇಕಿತ್ತು. ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಮನವಿ ನೀಡಿದ್ದರೂ ಪ್ರಯೋಜನವಾಗಿರಲಿಲ್ಲ.

ಭರವಸೆ ಇದೆ
ಸೇತುವೆ ಇಲ್ಲದೆ ಶಾಲೆಗೆ ಹೋಗಲು ಕಷ್ಟವಾಗುತ್ತಿತ್ತು. ಮುಖ್ಯಮಂತ್ರಿಗಳಿಗೆ ಹೇಳಿದರೆ ಮಾಡಿಕೊಡುತ್ತಾರೆ ಎಂದು ಗೊತ್ತಾಯಿತು. ತಂದೆಯೊಂದಿಗೆ ಅವರ ಬಳಿ ಹೋಗಿ ಮನವಿ ಪತ್ರ ಕೊಟ್ಟಿದ್ದೇನೆ. ಸೇತುವೆ ಮಾಡಿಕೊಡುತ್ತೇನೆ ಎಂದಿದ್ದಾರೆ. ಭರವಸೆ ಇಟ್ಟುಕೊಂಡಿದ್ದೇನೆ.
– ಸೃಷ್ಟಿ ಎನ್‌.ಎ. 
   ಪತ್ರ ಬರೆದ ವಿದ್ಯಾರ್ಥಿನಿ

 ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.