‘ಸವಾಲು ಎದುರಿಸಿ ಸದೃಢ ಭಾರತ ಕಟ್ಟೋಣ’


Team Udayavani, Aug 16, 2018, 11:00 AM IST

16-agust-5.jpg

ಪುತ್ತೂರು: ದೇಶದಲ್ಲಿ ಉಳಿದು ಕೊಂಡಿರುವ ಸಮಸ್ಯೆ, ಸವಾಲುಗಳನ್ನು ಎದುರಿಸಿ ಸದೃಢ ಭಾರತವನ್ನು ಕಟ್ಟುವ ಕಡೆಗೆ ನಮ್ಮ ಚಿತ್ತವಿರಬೇಕು. ಆರ್ಥಿಕ, ಸಾಮಾಜಿಕ, ಭೌತಿಕ ಮಟ್ಟದಲ್ಲಿ ದೇಶವನ್ನು ಬಲಿಷ್ಠವಾಗಿ ಮುನ್ನಡೆಸಲು ಯುವ ಸಮುದಾಯ ಮುಂದೆ ಬರಬೇಕು ಎಂದು ಪುತ್ತೂರು ಸಹಾಯಕ ಕಮಿಷನರ್‌ ಎಚ್‌.ಕೆ. ಕೃಷ್ಣಮೂರ್ತಿ ಆಶಯ ವ್ಯಕ್ತಪಡಿಸಿದ್ದಾರೆ. ಅವರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ವತಿಯಿಂದ ಮಂಗಲ್‌ ಪಾಂಡೆ ಚೌಕದಲ್ಲಿ ನಡೆದ 72ನೇ ಸ್ವಾತಂತ್ರ್ಯೋತ್ಸವದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು.

ಸಮಾನತೆ, ಸಾರ್ವಭೌಮತ್ವ ಸಾರಿದ, ವಿಭಿನ್ನತೆಯಲ್ಲಿ ಏಕತೆ ಸಾಧಿಸಿದ ದೇಶ ನಮ್ಮದು. ಇಂತಹ ಹೆಮ್ಮೆ ಅನುಭವಿಸುವ ಅವಕಾಶ ನಮ್ಮೆಲ್ಲರ ಪುಣ್ಯ. ಈ ಘನತೆಯ ವೈಭವವನ್ನು ಮತ್ತಷ್ಟು ಉನ್ನತಿಗೆ ಏರಿಸುವ ಕೆಲಸ ಪ್ರತಿಯೊಬ್ಬ ಪ್ರಜೆಯಿಂದ ಆಗಬೇಕು. 21ನೇ ಶತಮಾನ ಭಾರತದ ಶತಮಾನ ಎನ್ನುವುದಕ್ಕೆ ಪೂರಕವಾಗಿ ನಮ್ಮ ಪಾಲಿನ ಸೇವೆಯನ್ನೂ ನೀಡಬೇಕು ಎಂದರು.

ಸೈನಿಕ ಪ್ರಜ್ಞೆಯಿರಲಿ
ಪ್ರತಿ ವ್ಯಕ್ತಿಯಲ್ಲಿ ಸೈನಿಕ ಪ್ರಜ್ಞೆ ಜಾಗೃತವಾಗಿರಬೇಕು. ಸ್ವತ್ಛ ಭಾರತ, ಸ್ವಚ್ಛ  ಪರಿಸರ ಮೊದಲಾದ ಜಾಗೃತ ಮನಸ್ಥಿತಿ ಪ್ರತಿಯೊಬ್ಬರಲ್ಲೂ ಮೂಡಬೇಕು. ಮಾತಿನ ಮೂಲಕ ಮಾತ್ರವಾಗಿರದೆ ಕೃತಿಯ ಮೂಲಕವೂ ದೇಶಪ್ರೇಮ ಕಾರ್ಯ ರೂಪಕ್ಕೆ ಬರಬೇಕು. ಸರಕಾರಗಳು ಮಾಡುವುದಕ್ಕಿಂತ ನಾವು ಮಾಡೋಣ ಎಂಬ ಸಂಕಲ್ಪ ತೊಡಬೇಕು ಎಂದು ಉಪ ವಿಭಾಗಾಧಿಕಾರಿ ಎಚ್‌.ಕೆ. ಕೃಷ್ಣಮೂರ್ತಿ ಹೇಳಿದರು.

ಏಕತೆಗೆ ಎಲ್ಲರ ಸಹಭಾಗಿತ್ವ  ಅತ್ಯಗತ್ಯ: ಅಂಗಾರ
ಸುಳ್ಯ : ಸಮಾಜದಲ್ಲಿ ಏಕತೆ ಮೂಡಿಸಲು ಒಬ್ಬರಿಂದ ಸಾಧ್ಯವಿಲ್ಲ. ಅದು ಸರ್ವರ ಪ್ರಯತ್ನದ ಫಲ. ಇದರಲ್ಲಿ ಎಲ್ಲರ ಹೊಣೆಗಾರಿಕೆ ಇದೆ ಎಂದು ಶಾಸಕ ಎಸ್‌. ಅಂಗಾರ ಹೇಳಿದರು.

ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ ಆಶ್ರಯದಲ್ಲಿ ಬುಧವಾರ ಸ.ಪ.ಪೂ. ಕಾಲೇಜಿನ ಮೈದಾನದಲ್ಲಿ ನಡೆದ 72ನೇ ಸ್ವಾತಂತ್ರ್ಯ ದಿನಾಚರಣೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಪ್ರಕೃತಿ ವಿರೋಧಿ ಧೋರಣೆ ಸಲ್ಲದು
ಪ್ರಾಕೃತಿಕ ವಿಕೋಪದಿಂದ ಆಗುತ್ತಿರುವ ತಲ್ಲಣಗಳನ್ನು ಗಮನಿಸುತ್ತಿದ್ದೇವೆ. ಇದಕ್ಕೆ ಅನೇಕ ಬಾರಿ ಜನರೂ ಕಾರಣಕರ್ತರು. ಪ್ರಕೃತಿ ವಿರೋಧಿ ನಡೆಯಿಂದ ಪ್ರಕೃತಿಯೇ ನಮ್ಮ ವಿರುದ್ಧ ತಿರುಗಿ ಬೀಳುವ ಸ್ಥಿತಿ ಸೃಷ್ಟಿಯಾಗಿದೆ. ಹಾಗಾಗಿ ಪ್ರಕೃತಿ ವಿರೋಧಿ ಧೋರಣೆ ಸಲ್ಲದು. ನದಿ, ಕೆರೆಗಳನ್ನು ಒತ್ತುವರಿ ಮಾಡಿದ ಪರಿಣಾಮ ಮಳೆ ನೀರು ಹರಿದು ಹೋಗದ ಸ್ಥಿತಿ ಇದೆ. ಇದನ್ನು ನಿಯಂತ್ರಿಸುವ ಆಡಳಿತ ಯಂತ್ರ ಎಚ್ಚರ ಮರೆತರೆ ಇಂತಹ ಅನಾಹುತಗಳು ಪದೇ-ಪದೇ ಮರುಕಳಿಸುತ್ತವೆ ಎಂದರು. ಧ್ವಜಾರೋಹಣ ನೆರವೇರಿಸಿ ಗೌರವವಂದನೆ ಸ್ವೀಕರಿಸಿ ಸಂದೇಶ ನೀಡಿದ ತಹಸೀಲ್ದಾರ್‌ ಕುಂಞಮ್ಮ, ಸಂಕುಚಿತ ಮನೋಭಾವ ಒಂದು ರಾಷ್ಟ್ರದ ಬೆಳವಣಿಗೆಗೆ ಮಾರಕ. ದೇಶ ಎಷ್ಟೇ ಅಭಿವೃದ್ದಿ ಕಂಡಿದ್ದರೂ ಶಾಂತಿ ಮತ್ತು ನೆಮ್ಮದಿ ಕಾಣಬೇಕಾದರೆ ದೇಶಕ್ಕೆ ಸರ್ವರಲ್ಲಿ ಸಮಾನತೆ, ಪ್ರೀತಿ, ಗೌರವ ಕಾಣುವ ಪ್ರಜೆಗಳ ನಿರ್ಮಾಣ ಆಗಬೇಕಿದೆ ಎಂದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.