ಬಂಟ್ವಾಳ: ಕೆಡವಿದ ತಾ.ಪಂ. ಕಟ್ಟಡದ ಉಳಿಕೆ ಭಾಗ ಕುಸಿಯುವ ಭೀತಿ


Team Udayavani, Jun 26, 2018, 2:15 AM IST

kattada-25-6.jpg

ಬಂಟ್ವಾಳ: ಬಿ.ಸಿ. ರೋಡ್‌ ಹೃದಯ ಭಾಗದಲ್ಲಿದ್ದ ತಾ.ಪಂ. ಹಳೆಯ ಕಟ್ಟಡವನ್ನು ಕೆಡವಿ ನಾಲ್ಕು ತಿಂಗಳುಗಳು ಕಳೆದಿವೆ. ಕಳೆದ ಮಾರ್ಚ್‌ನಲ್ಲಿ ಕಟ್ಟಡದ ಛಾವಣಿ ತೆಗೆಯಲಾಗಿದೆ. ಅನಂತರದ ದಿನಗಳಲ್ಲಿ ಕಟ್ಟಡದ ಗೋಡೆಗಳನ್ನು ಕೆಡವಲಾಗಿದೆ. ಆದರೆ ಕಟ್ಟಡದ ಮುಖದ್ವಾರವನ್ನು ಹಾಗೆಯೇ ಉಳಿಸಲಾಗಿದೆ. ಯಾವ ಸಂದರ್ಭದಲ್ಲೂ ಧರಾಶಾಯಿ ಆಗುವ ಭೀತಿ ಇದೆ.

ಸುಮಾರು ಇಪ್ಪತೈದು ಅಡಿಗಳಷ್ಟು ಎತ್ತರವಾಗಿರುವ ಮುಖ್ಯದ್ವಾರದ ಮುಂಬದಿ ಇರುವುದು ಬಿ.ಸಿ. ರೋಡ್‌ ನ‌ ಸರ್ವಿಸ್‌ ರಸ್ತೆ. ವಾಹನ, ಜನ ನಿಬಿಡ ಪ್ರದೇಶ. ಜನರು ವಿವಿಧ ಕಚೇರಿಗಳಿಗೆ ಹೋಗುವಾಗ ಇಲ್ಲಿಂದಲೇ ಹಾದು ಹೋಗುತ್ತಾರೆ. ದೂರದ ಊರುಗಳಿಗೆ ಹೋಗುವ ಮಂದಿ ಇಲ್ಲಿಯೇ ಬಸ್ಸಿಗಾಗಿ ಕಾಯುತ್ತಾರೆ. ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಭದ್ರತೆ ಇಲ್ಲದೆ ನಿಂತಿರುವ ದ್ವಾರವು ಮಳೆಯಿಂದ ಒದ್ದೆಯಾಗಿ ಧರಾಶಾಯಿ ಆದರೆ ಖಂಡಿತ ಜೀವಕ್ಕೆ ಅಪಾಯವಿದೆ.

ಟೆಂಡರ್‌ ಕರೆದು ಕ್ರಮಾಗತ ಗುತ್ತಿಗೆ ನೀಡಿ ಜೆಸಿಬಿ ಬಳಸಿ ಕಟ್ಟಡ ಕೆಡವಲಾಗಿತ್ತು. ವಾಣಿಜ್ಯ ಸಂಕೀರ್ಣ ನಿರ್ಮಿಸುವ ಉದ್ದೇಶದಿಂದ ಸದ್ರಿ ಸ್ಥಳದಲ್ಲಿ ಪಾಯ ತೋಡಲಾಗಿತ್ತು. ದ್ವಾರಕ್ಕೆ ಇದ್ದಂತಹ ಕಬ್ಬಿಣದ ಶಟರ್‌ ಅನ್ನು ತೆಗೆದುಕೊಂಡು ಹೋಗಲಾಗಿದೆ. ಕಟ್ಟಡವನ್ನು ಕೆಡವಿ ಅದರ ಕಲ್ಲು, ಹಂಚು, ಮರದ ತೊಲೆಗಳನ್ನು ಕೊಂಡು ಹೋಗಿದ್ದು, ಈ ಭಾಗವನ್ನು ಹಾಗೇ ಉಳಿಸಲಾಗಿದೆ. ಉಳಿಸಿಕೊಂಡಿರುವ ದ್ವಾರದ ಉಳಿಕೆ ಭಾಗದಲ್ಲಿ ಮರವೊಂದು ಬೆಳೆದು ದಿನದಿಂದ ದಿನಕ್ಕೆ ಅದರ ಭಾರ ಹೆಚ್ಚುತ್ತಿದೆ. ಮರದ ತುದಿ ಇಲ್ಲಿನ ಹೈಟೆನ್ಶನ್‌ ವಿದ್ಯುತ್‌ ತಂತಿಗೆ ತಾಗುವಂತಿದ್ದು, ನೆಲದಲ್ಲಿ ಇದ್ದವರಿಗೆ ವಿದ್ಯುತ್‌ ಆಘಾತ ಭೀತಿ ಕಾಡುತ್ತಿದೆ.

ತೆರವಿಗೆ ಕ್ರಮ
ಕಟ್ಟಡ ಕೆಡಹುವ ಸಂದರ್ಭ ಜೆಸಿಬಿಯವರಿಗೆ ಅದನ್ನು ತೆಗೆಯಲು ಸಾಧ್ಯವಾಗಿಲ್ಲ. ಅದು ತುಂಬ ಸ್ಟ್ರಾಂಗ್‌ ಆಗಿದೆ, ಹಿಟಾಚಿ ತಂದು ಇನ್ನೊಮ್ಮೆ ಪ್ರಯತ್ನಿಸುವ ಎಂದು ಬಿಟ್ಟಿದ್ದರು. ಬಳಿಕ ಅದರ ಕೆಲಸ ಮಾಡಲಾಗದೆ ಉಳಿದು ಬಂದಿದೆ. ಅದು ಬೀಳುವ ಸಾಧ್ಯತೆ ಇಲ್ಲ. ಆದರೂ ಅದನ್ನು ತೆರವು ಮಾಡಲು ತಾ.ಪಂ. ಕ್ರಮ ಕೈಗೊಳ್ಳುವುದು.
– ಚಂದ್ರಹಾಸ ಕರ್ಕೇರ, ಅಧ್ಯಕ್ಷರು, ತಾ.ಪಂ. ಬಂಟ್ವಾಳ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.