ಕಟ್ಟಡ ಪರವಾನಿಗೆ ತಡೆ: ಸ್ಪಷ್ಟನೆಗೆ ಆಗ್ರಹ


Team Udayavani, Jul 16, 2019, 5:13 AM IST

kattada-paravanagi

ವಿಟ್ಲ: ಮಂದಿರ ನಿರ್ಮಾಣದ ಉದ್ದೇಶದಿಂದ ಸರಕಾರದಿಂದ ಅನುದಾನ ಮಂಜೂರಾಗಿದ್ದು, ಸಮರ್ಪಕ ದಾಖಲೆ ನೀಡಿದರೂ ಗ್ರಾ.ಪಂ. ವತಿಯಿಂದ ಕಟ್ಟಡ ಪರವಾನಿಗೆ ನೀಡಲು ಸದಸ್ಯನೋರ್ವನ ಕುಮ್ಮಕ್ಕಿನಿಂದ ಉದ್ದೇಶಪೂರ್ವಕವಾಗಿ ತಡೆವೊಡುತ್ತಿರುವ ವಿಚಾರದ ಬಗ್ಗೆ ಸ್ಪಷ್ಟನೆ ನೀಡದೆ ಗ್ರಾಮಸಭೆ ನಡೆಸಲು ಬಿಡೆವು ವಿಟ್ಲಮುಟ್ನೂರು ಗ್ರಾಮಸ್ಥರು ಪಟ್ಟು ಹಿಡಿದ ಘಟನೆ ವಿಟ್ಲ ಮುಟ್ನೂರು ಗ್ರಾ.ಪಂ. ಗ್ರಾಮಸಭೆಯಲ್ಲಿ ಜರಗಿತು.

ವಿಟ್ಲ ಮುಟ್ನೂರು ಗ್ರಾ.ಪಂ. ಸಭಾಭವನದಲ್ಲಿ ಸೋಮವಾರ ಗ್ರಾ.ಪಂ. ಅಧ್ಯಕ್ಷೆ ಪ್ರೇಮಲತಾ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮಸಭೆಯಲ್ಲಿ ನೋಡಲ್‌ ಅಧಿಕಾರಿಯಾಗಿದ್ದ ತಾ| ಕಾರ್ಯ ನಿರ್ವ ಹಣಾಧಿಕಾರಿ ರಾಜಣ್ಣ, ಗ್ರಾಮಸಭೆ ನಡೆಸಲು ಸಹಕರಿಸಬೇಕೆಂದು ಹಲವು ಬಾರಿ ಮನವಿ ಮಾಡಿಕೊಂಡರು. ಬಳಿಕ ತಮ್ಮ ಪಟ್ಟನ್ನು ಸಡಿಲಗೊಳಿಸಿ ಸಭೆ ನಡೆಸಲು ಅನುವು ಮಾಡಿಕೊಟ್ಟರು.

ಆಡಳಿತ ಪಕ್ಷದ ಒಬ್ಬ ವಾರ್ಡ್‌ ಸದಸ್ಯರು ಪಿಡಿಒ, ಕಾರ್ಯದರ್ಶಿ, ಗ್ರಾಮ ಲೆಕ್ಕಿಗರನ್ನು ಹಾದಿ ತಪ್ಪಿಸುತ್ತಿದ್ದಾರೆ. ಪಂಚಾಯತ್‌ರಾಜ್‌ ಕಾನೂನಿನಂತೆ ಪೂರಕ ಭೂ ದಾಖಲೆಗಳನ್ನು ಸಲ್ಲಿಸಲಾಗಿದೆ. ಕಾನೂನು ಸಲಹೆಗಾರರ ಮೂಲಕ ಸ್ಪಷ್ಟ ಸೂಚನೆ ನೀಡ ಲಾಗಿದೆ. ಈ ಬಗ್ಗೆ ಎರಡು ಬಾರಿ ತುರ್ತು ಸಭೆ ಕರೆಯಲಾಗಿದ್ದರೂ ಸದಸ್ಯರು ಗೈರು ರಾಗಿ ಕೋರಂ ಕೊರತೆ ತಂದೊಡ್ಡಿದ್ದರು ಎಂದು ಆರೋಪಿಸಿದ ಗ್ರಾಮಸ್ಥರು, ಸದಸ್ಯನ ವಿರುದ್ಧ ಧಿಕ್ಕಾರ ಕೂಗಿ
ಆತನನ್ನು ಸದಸ್ಯತ್ವದಿಂದ ಅನರ್ಹಗೊಳಿಸಿ ಎಂದು ಆಗ್ರಹಿಸಿದರು.

ನೋಡಲ್‌ ಅಧಿಕಾರಿಯವರು, ಈ ಬಗ್ಗೆ ಪಂಚಾಯತ್‌ರಾಜ್‌ ಕಾನೂನಿನಂತೆ ಎಲ್ಲ ಸಮರ್ಪಕ ದಾಖಲೆ ನೀಡಿದರೂ ಕಟ್ಟಡ ಪರವಾನಿಗೆ ಕೊಡದೇ ಇರಲಾಗದು. ನಿಗದಿಪಡಿಸಿದಂತೆ ಮಂಗಳವಾರವೇ ಸಾಮಾನ್ಯಸಭೆ ಕರೆದು ಪರವಾನಿಗೆ ನೀಡುವ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. ಪಿಡಿಒ ಸಭೆಯಲ್ಲಿಯೇ ಈ ಬಗ್ಗೆ ನಿರ್ಣಯ ಕೈಗೊಂಡರು.

ಲೈನ್‌ಮ್ಯಾನ್‌ ನಿರ್ಲಕ್ಷ  ಆರೋಪ
ಮೆಸ್ಕಾಂ ಅಧಿಕಾರಿ ಸಭೆಯಲ್ಲಿ ಮಾಹಿತಿ ನೀಡುತ್ತಿದ್ದಂತೆ ಆಕ್ರೋಶಿತರಾದ ಗ್ರಾಮಸ್ಥರು, ಮೆಸ್ಕಾಂ ಲೈನ್‌ಮ್ಯಾನ್‌ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಅಪಾಯದ ಸಂದರ್ಭ ಪೋನ್‌ ಮಾಡಿ ದರೂ ಪೋನ್‌ ಸ್ವೀಕರಿಸುವುದಿಲ್ಲ. ವಿದ್ಯುತ್‌ ಬಳಕೆದಾರರ ಯಾವುದೇ ಸಮಸ್ಯೆಗಳಿಗೆ ವಿಭಾಗಾಧಿಕಾರಿಯೂ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು. ಸಮಸ್ಯೆ ಯಿರುವ ಪ್ರದೇಶಗಳ ಬಗ್ಗೆ ತುರ್ತಾಗಿ ಪರಿಶೀಲನೆ ನಡೆಸಿ, ಕ್ರಮಕೈಗೊಳ್ಳುವುದಾಗಿ ಅಧಿಕಾರಿ ಭರವಸೆ ನೀಡಿದರು.

ಮದ್ಯ ಅಕ್ರಮ ಮಾರಾಟ
ಗ್ರಾಮ ವ್ಯಾಪ್ತಿಯಲ್ಲಿ ಮದ್ಯ ಅಕ್ರಮ ಮಾರಾಟವನ್ನು ನಿಲ್ಲಿಸಲು ಅಬಕಾರಿ ಇಲಾಖೆಗೆ ಸೂಚಿಸಬೇಕೆಂದು ನಿರ್ಣಯ ಕೈಗೊಳ್ಳಲಾಯಿತು. ಆಧಾರ್‌ಕಾರ್ಡ್‌ ತಿದ್ದುಪಡಿಯನ್ನು ಗ್ರಾ.ಪಂ. ಮಟ್ಟದಲ್ಲಿ ನಿಗದಿತ ದಿನದಂದು ಮಾಡಬೇಕೆಂಬ ಗ್ರಾಮಸ್ಥರ ಬೇಡಿಕೆಯನ್ನು ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು. ವಿವಿಧ ಇಲಾಖೆ ಗಳ ಅಧಿಕಾರಿಗಳು ಮಾಹಿತಿ ನೀಡಿದರು. ತಾ.ಪಂ. ಸದಸ್ಯೆ ವನಜಾಕ್ಷಿ ಭಟ್‌, ಉಪಾಧ್ಯಕ್ಷ ದಯಾನಂದ ಶೆಟ್ಟಿ ಅಬೀರಿ, ಗ್ರಾ.ಪಂ. ಸದಸ್ಯರು ಭಾಗವಹಿಸಿದ್ದರು. ಪಿಡಿಒ ರಾಘವೇಂದ್ರ ಹೊರಪೇಟೆ ಸ್ವಾಗತಿಸಿ, ಪಂ. ಕಾರ್ಯದರ್ಶಿ ಅಬ್ದುಲ್‌ ಕರೀಂ ವಂದಿಸಿದರು. ದೇವಕಿ ವರದಿ ಮಂಡಿಸಿದರು.

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.