ಬಾಯತ್ತಾರು: ಗ್ರಾಮಸ್ಥರಿಂದಲೇ ಕಾಲುಸಂಕ ನಿರ್ಮಾಣ
Team Udayavani, Jul 22, 2019, 5:32 AM IST
ಉಪ್ಪಿನಂಗಡಿ: ಸರಕಾರಿ ಸವಲತ್ತಿಗಾಗಿ ಕಾದು ಸುಸ್ತಾಗಿ ಗ್ರಾಮಸ್ಥರೇ ಹಣ ಒಟ್ಟುಗೂಡಿಸಿ ಕಾಲುಸಂಕ ನಿರ್ಮಿಸಿದ ಘಟನೆ ಕುಪ್ಪೆಟ್ಟಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾಮದ ಕುಪ್ಪೆಟ್ಟಿ ಸಮೀಪ ರಾಜ್ಯ ಹೆದ್ದಾರಿಯ ಸನಿಹದಲ್ಲೇ ಬಾಯಿತ್ತಾರು ಎಂಬಲ್ಲಿ ತೋಡು ದಾಟಲು ಕಾಲುಸಂಕ ನಿರ್ಮಾಣ ಮಾಡುವಂತೆ ಸ್ಥಳೀಯರು ಸಾಕಷ್ಟು ಮನವಿ ಮಾಡಿದ್ದರೂ ಸ್ಪಂದನೆ ಸಿಕ್ಕಿರಲಿಲ್ಲ. ಮಳೆಗಾಲದಲ್ಲಿ ಈ ತೋಡು ದಾಟುವುದೇ ದೊಡ್ಡ ಸಾಹಸದ ಕೆಲಸ.
ದೇವರೇ ಗತಿ!
ಸುಮಾರು 50ಕ್ಕೂ ಮಿಕ್ಕ ಕುಟುಂಬಗಳು ವಾಸವಾಗಿದ್ದು, ಶಾಲೆಗೆ ಹೋಗುವ ಮಕ್ಕಳೂ ಇಲ್ಲಿದ್ದಾರೆ. ರಾತ್ರಿ ವೇಳೆ ದಿಢೀರ್ ಅನಾರೋಗ್ಯ ಉಂಟಾದರೆ ದೇವರೇ ಗತಿ ಎನ್ನುವ ಸ್ಥಿತಿ ಇತ್ತು. ಪ್ರತಿ ವರ್ಷವೂ ಸ್ಥಳೀಯರು ತಮ್ಮ ತೋಟಗಳಲ್ಲಿ ಸಿಗುವ ಅಡಿಕೆ ದಬ್ಬೆ ಇತ್ಯಾದಿಗಳನ್ನು ಬಳಸಿಕೊಂಡು ಕಾಲುಸಂಕ ನಿರ್ಮಿಸುತ್ತಿದ್ದರು. ಜೋರು ಮಳೆಯಾದರೆ ಅದು ಕೊಚ್ಚಿಕೊಂಡು ಹೋಗುತ್ತಿತ್ತು. ಹೀಗಾಗಿ, ಇಲ್ಲೊಂದು ಕಾಲುಸಂಕ ನಿರ್ಮಿಸುವಂತೆ ಕ್ಷೇತ್ರದ ಶಾಸಕರು ಹಾಗೂ ಜನಪ್ರತಿನಿಧಿಗಳಿಗೆ ಸ್ಥಳೀಯರು ಮನವಿ ಮಾಡಿದ್ದರು. ಮತ ಯಾಚನೆಗೆ ಬಂದಾಗಲೂ ಬೇಡಿಕೆ ಸಲ್ಲಿಸಿದ್ದರು. ಆದರೆ, ಅವರು ನೀಡಿರುವ ಭರವಸೆ ಈಡೇರಿಲ್ಲ.
ಹಲವು ಅವಘಡಗಳು
ಈ ಬಾರಿಯ ಮಳೆಗಾಲದಲ್ಲಿ ಶಾಲೆಯಿಂದ ಮನೆಗೆ ಮರಳುತ್ತಿದ್ದ ಪುಟ್ಟ ಮಗುವೊಂದು ತೋಡಿನ ನೀರಿನಲ್ಲಿ ಮೃತಪಟ್ಟಿದೆ. ಮಹಿಳೆಯೊಬ್ಬರು ತೋಡು ದಾಟುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಅಪಾಯದಲ್ಲಿದ್ದರು. ದಾರಿಹೋಕರ ಸಮಯಪ್ರಜ್ಞೆಯಿಂದ ಅವರು ಬಚಾವಾದರು. ಇಂತಹ ಹಲವು ಘಟನೆಗಳು ನಡೆದಿವೆ. ಹತ್ತು ವರ್ಷಗಳ ಹಿಂದೆ ಆಗಿನ ಶಾಸಕ ವಸಂತ ಬಂಗೇರ ಅವರು ಈ ಕಾಲು ಸಂಕಕ್ಕೆ 4 ಲಕ್ಷ ರೂ. ಮಂಜೂರು ಮಾಡಿದ್ದರು. ಆದರೆ, ಕೆಲವರು ಶಾಸಕರ ಮೇಲೆ ಒತ್ತಡ ಹೇರಿ, ಇಲ್ಲಿಂದ ಸುಮಾರು 100 ಮೀ. ದೂರದಲ್ಲಿರುವ ಕಾಲು ಸಂಕದ ವಿಸ್ತರಣೆಗೆ ಈ ಅನುದಾನವನ್ನು ಬಳಸಿಕೊಂಡರು. ಇದರಿಂದ ಆಗುವ ಸಮಸ್ಯೆಗಳನ್ನೂ ಅವರಿಂದ ಮರೆ ಮಾಚಿದರು ಎಂಬ ಆರೋಪವಿದೆ.
ಬಾಯತ್ತಾರು ಪರಿಸರದಲ್ಲಿ ಬಹು ತೇಕರು ಕೃಷಿಕರಾಗಿದ್ದು, ಚುನಾವಣೆ ಬಹಿಷ್ಕರಿಸಲು ಮುಂದಾಗಿದ್ದರೂ ಕೊನೆ ಗಳಿಗೆಯಲ್ಲಿ ಅವರ ಮನವೊಲಿಸಲಾಗಿತ್ತು.
ಆತಂಕದ ಛಾಯೆ
ಅನುದಾನ ಬರಲಿಲ್ಲ
– ಎಂ.ಎಸ್. ಭಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್