ಬುಲೆಟ್‌ ಟ್ಯಾಂಕರ್‌ನಿಂದ ಅನಿಲ ಸೋರಿಕೆ: ವ್ಯಾಪಕ ಕಾರ್ಯಾಚರಣೆ


Team Udayavani, Mar 31, 2017, 9:37 AM IST

31-REPORTER-10.jpg

ಸುರತ್ಕಲ್‌: ಇಲ್ಲಿನ ಬಾಳ ಗ್ರಾಮದಲ್ಲಿರುವ ಎಚ್‌ಪಿಸಿಎಲ್‌ ಸ್ಥಾವರದ ಮುಂಭಾಗ ಗುರುವಾರ ರಾತ್ರಿ ಅನಿಲ ತುಂಬಿಕೊಂಡು ನಿಂತಿದ್ದ ಬುಲೆಟ್‌ ಟ್ಯಾಂಕರ್‌ ಒಂದರಿಂದ ಅನಿಲ ಸೋರಿಕೆ ಉಂಟಾಗಿದ್ದು ತೈಲ ಕಂಪನಿಗಳ ಸಕಾಲಿಕ ಕಾರ್ಯಾಚರಣೆಯಿಂದ ಭಾರೀ ಅನಾಹುತ ತಪ್ಪಿದೆ.

ಎಚ್‌ಪಿಸಿಎಲ್‌ ಘಟಕದಿಂದ ಗ್ಯಾಸ್‌ ತುಂಬಿಕೊಂಡು ಬಂದ ಬುಲೆಟ್‌ ಟ್ಯಾಂಕರ್‌ ಕಾನಾ ಎಚ್‌ಪಿಸಿಎಲ್‌ ಸ್ಥಾವರದ ಹೊರ ಭಾಗದಲ್ಲಿ ಗುರುವಾರ ಸಂಜೆ ನಿಲ್ಲಿಸಲಾಗಿತ್ತು. ಸಂಜೆ 7.15ರ ಸುಮಾರಿಗೆ ಟ್ಯಾಂಕರ್‌ನಿಂದ ಗ್ಯಾಸ್‌ ಸೋರಿಕೆಯ ವಾಸನೆ ಗಮನಿಸಿದ ಚಾಲಕರು ತಪಾಸಣೆ ಆರಂಭಿಸಿದರು. ಈ ಹಂತದಲ್ಲಿ ಒಂದು ಟ್ಯಾಂಕರ್‌ನಿಂದ ಗ್ಯಾಸ್‌ ಸೋರಿಕೆಯಾಗುವುದು ಗೊತ್ತಾಯಿತು. ತತ್‌ಕ್ಷಣವೇ ಎಚ್ಚೆತ್ತುಕೊಂಡ ಚಾಲಕರು ಪೊಲೀಸರಿಗೆ ಮಾಹಿತಿ ನೀಡಿದರು. ಅಲ್ಲಿಂದ ಕೂಡಲೇ ಎಂಆರ್‌ಪಿಎಲ್‌, ಎಚ್‌ಪಿಸಿಎಲ್‌, ಟೋಟಲ್‌ ಗ್ಯಾಸ್‌ ಘಟಕಗಳಿಗೆ ತುರ್ತು ಸಂದೇಶ ನೀಡಿ ಕಾರ್ಯಾಚರಣೆಗೆ ಧಾವಿಸುವಂತೆ ಸೂಚಿಸಲಾಯಿತು.

ಎಚ್‌ಪಿಸಿಎಲ್‌ನ ಕ್ವಿಕ್‌ ರೆಸ್ಪಾನ್ಸ್‌ ವೆಹಿಕಲ್‌ ಗೋವಾಗೆ ತೆರಳಿರುವುದಧಿರಿಂದ ತೋಕೂರು ಪ್ರದೇಶದಲ್ಲಿರುವ ಟೋಟಲ್‌ ಗ್ಯಾಸ್‌ ಕಂಪೆನಿಯಿಂದ ವಾಹನ ತರಿಸಿ ಖಾಲಿ ಟ್ಯಾಂಕರ್‌ಗೆ ಅನಿಲ ವರ್ಗಾಯಿಸುವ ಕೆಲಸ ಆರಂಭಿಸಲಾಯಿತು. ರಾತ್ರಿ ವೇಳೆಗೆ ಬಹುತೇಕ ಗ್ಯಾಸ್‌ ಖಾಲಿ ಮಾಡಲಾಯಿತು. ಈ ವಾಹನ ಇದ್ದುದರಿಂದ ಸಂಭಾವ್ಯ ದೊಡ್ಡ ಅನಾಹುತ ತಪ್ಪಿತು.

ವಿದ್ಯುತ್‌ ಕಡಿತ, ಸಾರ್ವಜನಿಕರಿಗೆ ಎಚ್ಚರಿಕೆ
ಗ್ಯಾಸ್‌ ಸೋರಿಕೆ ಸಂದರ್ಭ ಪರಿಸರದಲ್ಲಿ  ವಿದ್ಯುತ್‌ ನಿಲುಗಡೆ ಮಾಡಲಾಯಿತಲ್ಲದೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಯಿತು ಮಾತ್ರವಲ್ಲ ಮೊಬೈಲ್‌ಗ‌ಳನ್ನು ಸ್ವಿಚ್‌ ಆಫ್‌ ಮಾಡಲು ಮನವಿ ಮಾಡಲಾಯಿತು. ಹತ್ತಿರದ ಮನೆಗಳಲ್ಲಿ ಬೆಂಕಿ ಉರಿಸದಂತೆಯೂ ಸೂಚಿಸಲಾಯಿತು. 

ಇಕ್ಕಟ್ಟಿನ ಪ್ರದೇಶ
ಟ್ಯಾಂಕರ್‌ಗಳಿಗೆ ರಾತ್ರಿ ಸಂಚಾರ ನಿಷೇಧ ಇರುವುದರಿಂದ ಸಾಮಾನ್ಯವಾಗಿ ಇಲ್ಲಿನ ಟ್ಯಾಂಕರ್‌ ಯಾರ್ಡ್‌ಗಳಲ್ಲಿ ಅನಿಲ ತುಂಬಿಸಿಕೊಂಡ ವಾಹನಗಳು ನಿಲ್ಲುತ್ತವೆ. ಆದರೆ ಕೆಲವು ಕಡೆ ಅಗ್ನಿ ಶಾಮಕ ವಾಹನ ಹೋಗಲು ಸರಿಯಾದ ದಾರಿಯಿಲ್ಲದ ಯಾರ್ಡ್‌ಗಳಿದ್ದು ಗುರುವಾರ ಇದು ಹಿರಿಯ ಅಧಿಕಾರಿಗಳ ಗಮನಕ್ಕೂ ಬಂತು. 

18 ಟನ್‌, 13 ಟ್ಯಾಂಕರ್‌
ಗುರುವಾರ ಸೋರಿಕೆಯಾದ ಟ್ಯಾಂಕರ್‌ನಲ್ಲಿ 18 ಟನ್‌ ಅನಿಲವಿತ್ತು. ಅದಕ್ಕಿಂತಲೂ ಹೆಚ್ಚಾಗಿ ಈ ಟ್ಯಾಂಕರ್‌ನ ಹತ್ತಿರದಲ್ಲಿಯೇ ಗ್ಯಾಸ್‌ ತುಂಬಿದ್ದ 13 ಟ್ಯಾಂಕರ್‌ಗಳಿದ್ದವು. ಆದುದರಿಂದ ತುರ್ತು ಕಾರ್ಯಾಚರಣೆ ಅನಿವಾರ್ಯವಾಗಿತ್ತು. ಇದರಿಂದ ಊಹಿಸಲು ಅಸಾಧ್ಯವಾದ ಅನಾಹುತವನ್ನು ತಪ್ಪಿಸಿದಂತಾಗಿದೆ. ನಿರಂತರ ಕಾರ್ಯಾಚರಣೆಯಲ್ಲಿ 5 ಅಗ್ನಿಶಾಮಕ ವಾಹನಗಳು ಹಾಗೂ ಸಿಬಂದಿ ಭಾಗವಹಿಸಿದ್ದರು. ರಾತ್ರಿ 8 ಗಂಟೆಯಿಂದ ಆರಂಭಗೊಂಡ ಕಾರ್ಯಾಚರಣೆ ತಡರಾತ್ರಿವರೆಗೂ ಮುಂದುವರಿಯಿತು. ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಣದಲ್ಲಿಡಲು ಸಹಕರಿಸಿದರು.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.