ಸುಳ್ಯದ “ಸುಧಾಮ’ನಿಗೆ ಒಲಿದ 4 ಕೋ.ರೂ. ​​​​​​​


Team Udayavani, Mar 23, 2019, 12:30 AM IST

2203slkp1a.jpg

ಸುಳ್ಯ: ಶ್ರೀಕೃಷ್ಣನನ್ನು ಕಾಣಲು ಮಥುರೆಗೆ ಹೋದ ಅವನ ಬಾಲ್ಯಕಾಲದ ಬಡ ಗೆಳೆಯ ಸುಧಾಮ ಹಿಂದಿರುಗಿ ಬರುವಾಗ ದೇವಕೃಪೆಯಿಂದ ಅಷ್ಟೆ„ಶ್ವರ್ಯ ಒದಗಿತ್ತಂತೆ. ಸುಳ್ಯದ ಪುಟ್ಟ ಹೊಟೇಲ್‌ ಮಾಲಕರೊಬ್ಬರ ಕತೆಯೂ ಇಂಥದ್ದೇ. ಇವರ ಹೆಸರು ಕೂಡ ಸುಧಾಮ!

ಕೇರಳ ರಾಜ್ಯ ಲಾಟರಿ ಸಮ್ಮರ್‌ ಬಂಪರ್‌ ಡ್ರಾದಲ್ಲಿ ಸುಳ್ಯದ “ನಿತೀಶ್‌’ ಹೊಟೇಲ್‌ ಮಾಲಕ ಸುಧಾಮ ಬಿ. ಅವರಿಗೆ ಬರೋಬ್ಬರಿ 4 ಕೋ.ರೂ. ಒಲಿದು ಬಂದಿದೆ!ಲಾಟರಿಯಲ್ಲಿ ಸುಳ್ಯ ಮೂಲದ ವ್ಯಕ್ತಿಗೆ ಬಂಪರ್‌ ಬಹುಮಾನ ಲಭಿಸಿದೆ ಎಂಬ ಸುದ್ದಿ ಟಿಕೆಟ್‌ ವಿತರಿಸಿದ ಏಜೆನ್ಸಿ ಮೂಲಕ ದೊರೆತು, ಆ ವ್ಯಕ್ತಿ ಯಾರು ಎಂಬ ಬಗ್ಗೆ ಸಾಮಾಜಿಕ ಜಾಲ ತಾಣ ದಲ್ಲಿ ಪ್ರಚಾರ ಆರಂಭಗೊಂಡಿತ್ತು. ಟಿಕೆಟ್‌ ಖರೀದಿಸಿದ್ದ ಬಿ. ಸುಧಾಮ ಮಣಿಯಾಣಿ ಇದನ್ನು ತಿಳಿದು ಇಂಟರ್‌ನೆಟ್‌ ಮೂಲಕ ತನ್ನ ನಂಬರ್‌ ಪರಿಶೀಲಿಸಿದರು. ಆಗ ಬಹುಮಾನ ಒಲಿದಿ ರುವುದು ಖಚಿತವಾಯಿತು.

ದೇಗುಲಕ್ಕೆ ಹೋಗಿದ್ದಾಗ ಖರೀದಿ!
ಮಾ.1ರಂದು ಸುಧಾಮ ಅವರು ಮಲ್ಲ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿಂದ ಮರಳುವಾಗ ಕಾಸರಗೋಡಿನ ಮಧು ಲಾಟರಿ ಏಜೆನ್ಸಿಯ ಸಬ್‌ ಏಜೆಂಟ್‌ ಆಗಿರುವ ಮುಳ್ಳೇರಿಯಾ ಕುಂಞಿಕಣ್ಣನ್‌ ಅವರಿಂದ 150 ರೂ. ಬೆಲೆಯ 3 ಟಿಕೆಟ್‌ ಖರೀದಿಸಿದ್ದರು. ಅವುಗಳಲ್ಲಿ ಕೇರಳ ರಾಜ್ಯ ಲಾಟರಿ ಸಮ್ಮರ್‌ ಬಂಪರ್‌ ಡ್ರಾದಲ್ಲಿ ಖಆ 131399 ನಂಬರ್‌ 4 ಕೋ.ರೂ. ಬಹುಮಾನಕ್ಕೆ ಆಯ್ಕೆಯಾಗಿದೆ.

“ನಾಲ್ಕು ವರ್ಷಗಳಿಂದ ಅಪರೂಪ ಕ್ಕೊಮ್ಮೆ ಲಾಟರಿ ಟಿಕೆಟ್‌ ಖರೀದಿಸುತ್ತಿದ್ದೆ. ಈ ತನಕ ಬಹುಮಾನ ಸಿಕ್ಕಿರಲಿಲ್ಲ. ಈ ಬಾರಿಯೂ ಬಹುಮಾನದ ನಿರೀಕ್ಷೆ ಇಲ್ಲದೆ ಫಲಿತಾಂಶ ನೋಡಿರಲಿಲ್ಲ. ಸುಳ್ಯ ಮೂಲದ ವ್ಯಕ್ತಿಯ ಟಿಕೆಟಿಗೆ ಬಹುಮಾನ ಸಿಕ್ಕಿದೆ ಎಂಬ ಮಾಹಿತಿ ಸಿಕ್ಕಿದಾಗ ಅನುಮಾನಗೊಂಡು ಪರಿಶೀ ಲಿಸಿದರೆ ನಾನು ಖರೀದಿಸಿದ ಲಾಟರಿ ಟಿಕೆಟ್‌ಗೆ ಅದೃಷ್ಟ ಒಲಿದಿರುವ ಶುಭ ಸುದ್ದಿ ಕಾದಿತ್ತು ಅನ್ನುತ್ತಾರೆ ಸುಧಾಮ.

ಹೊಟೇಲ್‌ ಮಾಲಕ  ಕೋಟಿಪತಿ!
24 ವರ್ಷಗಳಿಂದ ಸಣ್ಣ ಹೊಟೇಲ್‌ ನಡೆಸುತ್ತಿರುವ ಸುಧಾಮ ಅವರು ಸುಳ್ಯ ನಗರದ ಕಾಂತಮಂಗಲ ಸಮೀಪದ ಬೂಡುಮಕ್ಕಿ ನಿವಾಸಿ. 1995ರಿಂದ 2000ನೇ ಇಸವಿಯ ತನಕ ಅಡ್ಯನಡ್ಕದಲ್ಲಿ ಹೊಟೇಲ್‌ ವ್ಯವಹಾರ ನಡೆಸಿದ್ದರು. 2001ರಿಂದ ಸುಳ್ಯ ನಗರದ ಮುಖ್ಯ ರಸ್ತೆಯ ಶ್ರೀ ಕೃಷ್ಣ ಬಿಲ್ಡಿಂಗ್‌ನಲ್ಲಿ “ನಿತೀಶ್‌ ಹೊಟೇಲ್‌’ ನಡೆಸುತ್ತಿದ್ದಾರೆ. ಇದು ಸಣ್ಣ ಹೊಟೇಲ್‌; ಆದರೆ ಈಗ ಒದಗಿ ರುವ ಅದೃಷ್ಟ ದೊಡ್ಡದು. 

ಪತ್ನಿ ಪ್ರಭಾವತಿ, ಮೂವರು ಪುತ್ರರಾದ ನಿತೀಶ್‌, ಶರತ್‌, ಮನ್ವಿತ್‌ ಅವರನ್ನೊಳಗೊಂಡ ಸಂಸಾರ. ಪುತ್ರರು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮನೆಯಲ್ಲಿ ಸಣ್ಣ ಮಟ್ಟಿನ ಕೃಷಿಯೂ ಅವರಿಗಿದೆ. 

“ನಾಲ್ಕು ಕೋ. ರೂ. ಬಹುಮಾನ ಬಂದಿರುವುದು ಅನಿರೀಕ್ಷಿತ. ಈ ಹಣವನ್ನು ನಿರ್ದಿಷ್ಟವಾಗಿ ಇಂತಹುದಕ್ಕೇ ಬಳಸಬೇಕು ಎಂಬ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಮಕ್ಕಳ ವಿದ್ಯಾಭ್ಯಾಸವೂ ನಮ್ಮ ಮುಂದಿರುವುದರಿಂದ ದೊರೆತ ಹಣವನ್ನು ಸದ್ಬಳಕೆ ಮಾಡಿಕೊಳ್ಳುತ್ತೇನೆ’ ಅಂದಿದ್ದಾರೆ ಸುಧಾಮ.

– ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.