ಅನಧಿಕೃತ ಮರಳುಗಾರಿಕೆ ವಿರುಧ್ಧ  ಕಟ್ಟು ನಿಟ್ಟಿನ ಕ್ರಮ: ತಹಶೀಲ್ದಾರ್‌


Team Udayavani, Nov 24, 2017, 11:36 AM IST

24-Nov-5.jpg

ಉರ್ವಸ್ಟೋರ್‌ : ಪರವಾನಿಗೆ ದುರುಪಯೋಗಿಸಿ ಅನಧಿಕೃತವಾಗಿ ಮರಳುಗಾರಿಕೆ ನಡೆಸುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಜರಗಿಸಲಾಗುವುದು. ಇದಕ್ಕಾಗಿ ಪೊಲೀಸ್‌, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಹಿತ ನಾಲ್ಕು ಇಲಾಖೆಗಳ ತಂಡ ರಚಿಸಲಾಗಿದೆ ಎಂದು ತಹಶೀಲ್ದಾರ್‌ ಗುರುಪ್ರಸಾದ್‌ ತಿಳಿಸಿದ್ದಾರೆ.

ಮಂಗಳೂರು ತಾ.ಪಂ. ಅಧ್ಯಕ್ಷ ಮಹಮ್ಮದ್‌ ಮೋನು ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಗುರುವಾರ ಜರಗಿದ ತಾ.ಪಂ. ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. ಮಳವೂರು ವೆಂಟೆಡ್‌ ಡ್ಯಾಂ ಬಳಿ ಅಕ್ರಮ ಮರಳುಗಾರಿಕೆ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಕೆಲವೆಡೆ ಲೈಸೆನ್ಸ್‌ ದುರುಪಯೋಗಿಸಿ ಮರಳುಗಾರಿಕೆ ನಡೆಸುತ್ತಿದ್ದು, ಅಂಥವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ತಾಲೂಕಿನಲ್ಲಿ ಮರಳಿನ ಕೊರತೆ ಇಲ್ಲದಿದ್ದರೂ, ಕೆಲವರು ಸಮಸ್ಯೆ ಇರುವಂತೆ ಬಿಂಬಿಸುತ್ತಿದ್ದಾರೆ. ಅಂತಹವರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಮರಳಿನ ಕೊರತೆ ಕಾರಣ ನೀಡಿ ಸರಕಾರಿ ಕಟ್ಟಡಗಳ ಕೆಲಸ ಸ್ಥಗಿತಗೊಳಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಿ
ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸುವಂತೆ 22 ಗ್ರಾ.ಪಂ.ಗಳಿಗೆ ಸೂಚಿಸಲಾಗಿತ್ತಾದರೂ, ಯಾರೂ ಗಂಭೀರ ವಾಗಿ ಪರಿಗಣಿಸಿದಂತಿಲ್ಲ. ಕೇವಲ 5 ಗ್ರಾ.ಪಂ.ಗಳಲ್ಲಿ ಘಟಕ ಆರಂಭವಾಗಿದೆ. ಉಳಿದ ಪಂಚಾಯತ್‌ಗಳು ವಿಳಂಬ ಧೋರಣೆ ಅನುಸರಿಸದೆ ತತ್‌ಕ್ಷಣ ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಅವರು ಸೂಚಿಸಿದರು. 

ಪಂಚಾಯತ್‌ ವ್ಯಾಪ್ತಿಯಲ್ಲಿ ಘಟಕ ಸ್ಥಾಪನೆಗೆ ಸ್ಥಳಾವಕಾಶದ ಸಮಸ್ಯೆ ಇದೆ ಎಂದು ಜೋಕಟ್ಟೆ ಪಂಚಾಯತ್‌ ಸದಸ್ಯರೋರ್ವರು ಹೇಳಿದಾಗ, ಘಟಕ ಸ್ಥಾಪನೆಗೆ ಜಾಗದ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು. ಎಲ್ಲ ಕಡೆ ಘನತ್ಯಾಜ್ಯ ವಿಲೇವಾರಿಗೆ ಜಾಗ ಕೊಡಲು ಬದ್ಧರಾಗಿದ್ದೇವೆ ಎಂದು ತಹಶೀಲ್ದಾರ್‌ ತಿಳಿಸಿದರು.

ಮರ ಕಡಿಯಲು ಅಡ್ಡಿ
ಬೊಂಡಂತಿಲ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ನಿವೇಶನ ಒದಗಿಸಲು ಈಗಾಗಲೇ ಜಾಗ ಗುರುತಿಸಲಾಗಿದ್ದು, ಅಲ್ಲಿ ಮರಗಿಡಗಳಿರುವ ಕಾರಣ ಅದನ್ನು ಕಡಿದು ಸಮತಟ್ಟು ಮಾಡುವ ಬಗ್ಗೆ ಪಂಚಾಯತ್‌ ಸಭೆಯಲ್ಲಿ ನಿರ್ಣಯಿಸಲಾಗಿದೆ. ಆದರೆ ಅರಣ್ಯ ಇಲಾಖೆಯವರು ಇದಕ್ಕೆ ತಡೆ ಒಡ್ಡುತ್ತಿದ್ದಾರೆ. ಗಡಿ ಗುರುತು ತೋರಿಸಿದರೂ, ಮರಗಿಡಗಳನ್ನು ಕಡಿಯಲು ಬಿಡುತ್ತಿಲ್ಲ ಎಂದು ಗ್ರಾ.ಪಂ. ಸದಸ್ಯರೋರ್ವರು ದೂರಿದರು. ಅದಕ್ಕೆ ಪ್ರತಿಕ್ರಿಯಿಸಿದ ಅರಣ್ಯ ಇಲಾಖೆ ಅಧಿಕಾರಿ, ಇಲ್ಲಿ ಗುರುತಿಸಿರುವ ಜಾಗದ ಒಂದು ಭಾಗದಲ್ಲಿ ಸಮಸ್ಯೆ ಇದೆ. ಅದನ್ನು ನಿವಾರಿಸದೆ ಅನುಮತಿ ನೀಡಲು ಸಾಧ್ಯವಾಗುತ್ತಿಲ್ಲ ಎಂದರು. ಆಗ, ಸಮಸ್ಯೆ ಇಲ್ಲದ ಜಾಗದಲ್ಲಿ ಗಿಡ ಕಡಿಯಲು ಅವಕಾಶ ನೀಡಿ ಎಂದು ಅಧ್ಯಕ್ಷ ಮಹಮ್ಮದ್‌ ಮೋನು ತಿಳಿಸಿದರು.

ಡಿ. 31ರೊಳಗೆ ಅರ್ಜಿ ವಿಲೇ
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 94 ಸಿಸಿಯಲ್ಲಿ ಎಷ್ಟು ಅರ್ಜಿಗಳು ಪ್ರಗತಿಯಲ್ಲಿವೆ ಮತ್ತು ಹಕ್ಕು ಪತ್ರ ವಿತರಣೆ ಯಾವಾಗ ನಡೆಯಲಿದೆ ಎಂದು ಸದಸ್ಯರು ಪ್ರಶ್ನಿಸಿದರು. 94ಸಿಸಿ ಅಡಿ 6632 ಅರ್ಜಿಗಳು ಬಂದಿದ್ದು, ಈ ಪೈಕಿ 837ಕ್ಕೆ ಮಂಜೂರು ಮಾಡಲಾಗಿದೆ. ಉಳಿದವುಗಳನ್ನು ಡಿ. 31ರೊಳಗೆ ವಿಲೇವಾರಿ ಮಾಡಲಾಗುವುದು ಎಂದು ತಹಶೀಲ್ದಾರ್‌ ತಿಳಿಸಿದರು. 

ಮೊಬೈಲ್‌ ಅಪ್‌ಲೋಡ್‌ ತರಬೇತಿ
ರೈತರ ಬೆಳೆಯ ಬಗ್ಗೆ ನಡೆಸುತ್ತಿರುವ ಬೆಳೆ ಸಮೀಕ್ಷಾ ಕಾರ್ಯ ಶೇ. 60ರಷ್ಟು ಪೂರ್ಣಗೊಂಡಿದೆ. ಈಗಾಗಲೇ ರೈತರೇ ತಮ್ಮ ಬೆಳೆಗಳ ಬಗ್ಗೆ ಮೊಬೈಲ್‌ ಮೂಲಕ ಅಪ್‌ಲೋಡ್‌ ಮಾಡಬೇಕು ಎಂದು ಸರಕಾರ ಸೂಚಿಸಿದೆ. ಕೃಷಿಕರು ಹೆಚ್ಚಿರುವ ಕಡೆ ಈ ಬಗ್ಗೆ ಪ್ರಚಾರ ಕೈಗೊಂಡು ತರಬೇತಿ ನೀಡಲಾಗುವುದು. ಬೆಳೆನಷ್ಟ ಪರಿಹಾರ, ಬೆಳೆವಿಮೆಗೆ ಇದು ಅನುಕೂಲವಾಗಲಿದೆ ಎಂದು ತಹಶೀಲ್ದಾರ್‌ ತಿಳಿಸಿದರು. 

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.