ನಿರ್ವಾಹಕನನ್ನು ಮರೆತ ಬಸ್ ಚಾಲಕ!
ಬೈಕ್ನಲ್ಲಿ ಹಿಂಬಾಲಿಸಿ ಸೀಟಿ ಊದಿದಾಗಲೇ ಅರಿವು
Team Udayavani, Jun 25, 2019, 9:57 AM IST
ಸಾಂದರ್ಭಿಕ ಚಿತ್ರ
ಬೆಳ್ಳಾರೆ: ಕೆಎಸ್ಸಾರ್ಟಿಸಿ ಬಸ್ ಒಂದರ ಚಾಲಕ ನಿರ್ವಾಹಕನನ್ನೇ ಮರೆತು ಮುಂದಕ್ಕೆ ಚಲಾಯಿಸಿದ ಪ್ರಸಂಗವೊಂದು ಸೋಮವಾರ ಬೆಳಗ್ಗೆ ಪಟ್ಟಣದಲ್ಲಿ ನಡೆದಿದೆ.
ಬೆಳ್ಳಾರೆ-ನಿಂತಿಕಲ್ಲು ಮಾರ್ಗವಾಗಿ ಬೆಳ್ಳಾರೆ ಬಸ್ ನಿಲ್ದಾಣದಿಂದ ಬೆಳಗ್ಗೆ 9.30ಕ್ಕೆ ಹೊರಟಿದ್ದ ಬಸ್ಸಿನ ಚಾಲಕ ತನ್ನ ನಿರ್ವಾಹಕ ಏರುವ ಮೊದಲೇ ಮುಂದಕ್ಕೆ ಚಲಾಯಿಸಿದ್ದ. ನಿರ್ವಾಹಕ ನಿಲ್ದಾಣದಿಂದ ಹೊರಹೋಗುತ್ತಿದ್ದ ಬಸ್ ಬೆಂಬತ್ತಿದರೂ ಬಸ್ ದೂರ ಸಾಗಿಯಾಗಿತ್ತು. ಬೆಳ್ಳಾರೆ ಕೆಳಗಿನ ಪೇಟೆಯಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಚಾಲಕ ಬಸ್ ನಿಲ್ಲಿಸಿದ್ದರೂ ನಿರ್ವಾಹಕ ಇಲ್ಲ ಎಂಬ ಅಂಶ ಗಮನಕ್ಕೆ ಬಂದಿರಲಿಲ್ಲ.
ನಿರ್ವಾಹಕ ಕೊನೆಗೆ ಬೈಕ್ ಸವಾರರೊಬ್ಬರ ಸಹಾಯದಿಂದ ಲಕ್ಷ್ಮೀ ನಾರಾಯಣ ದೇವಸ್ಥಾನದ ಬಳಿ ಸೀಟಿ ಊದಿದರು. ಸೀಟಿ ಸದ್ದಿಗೆ ಎಚ್ಚೆತ್ತ ಚಾಲಕ, ನಿರ್ವಾಹಕ ಬಸ್ನಲ್ಲಿಲ್ಲ; ಬೈಕ್ನಲ್ಲಿ ಹಿಂಬಾಲಿಸುತ್ತಿದ್ದಾರೆ ಎಂದು ಅರಿತು ಬಸ್ ನಿಲ್ಲಿಸಿ ಹತ್ತಿಸಿಕೊಂಡರು. ಮೇ 8ರಂದು ಧರ್ಮಸ್ಥಳ-ಮಂಗಳೂರು ಬಸ್ನಲ್ಲಿಯೂ ಇದೇ ತರಹದ ಪ್ರಸಂಗ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ