Polali ದ್ವಾರ ಬಳಿ ರಸ್ತೆಯಲ್ಲಿ ಅಡ್ಡಕ್ಕೆ ಬಿದ್ದ ಬಸ್: ಎಂಟು ಮಂದಿಗೆ ಗಾಯ
Team Udayavani, Jan 3, 2024, 12:45 AM IST
ಕೈಕಂಬ: ಗುರುಪುರ ಪೊಳಲಿ ದ್ವಾರದ ಬಳಿ ಮಂಗಳವಾರ ಸಂಜೆ ವೇಳೆ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಅಡ್ಡಕ್ಕೆ ಬಿದ್ದ ಪರಿಣಾಮ 8 ಮಂದಿ ಗಾಯಗೊಂಡಿದ್ದಾರೆ.
ಈ ಬಸ್ ಬಿಸಿರೋಡ್ಗೆ ಹೋಗುತ್ತಿತ್ತು. ಸಂಜೆ ವೇಳೆಯಾದ ಕಾರಣ ಈ ಬಸ್ನಲ್ಲಿ ಕಾರ್ಮಿಕರು ಮತ್ತು ಉದ್ಯೋಗಿಗಳು ಬಹಳಷ್ಟು ಮಂದಿ ಇದ್ದರು. ಬಸ್ ಪೊಳಲಿ ದ್ವಾರದಿಂದ ಸ್ವಲ್ಪ ದೂರ ಹೋಗುವಷ್ಟರಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಆಡ್ಡಕ್ಕೆ ಬಿತ್ತು. ಈ ಘಟನೆಯಲ್ಲಿ ಸುಮಾರು 8 ಮಂದಿ ಗಾಯಗೊಂಡಿದ್ದಾರೆ.
ಬಸ್ಸಿನ ಬಾಗಿಲಿನ ಭಾಗ ಅಡ್ಡಕ್ಕೆ ಬಿದ್ದ ಕಾರಣ ಪ್ರಯಾಣಿಕರು ಬಲಬದಿಯ ಕಿಟಕಿ ಹಾಗೂ ಎದುರಿನ ಹಾಗೂ ಹಿಂದಿನ ಕನ್ನಡಿ ಒಡೆದು ಹೊರಗೆ ಬಂದರು.
ಸ್ಥಳಕ್ಕೆ ಬಜಪೆ ಇನ್ಸ್ಪೆಕ್ಟರ್ ಸಂದೀಪ್ ಹಾಗೂ ಸಿಬಂದಿ ಆಗಮಿಸಿದ್ದು, ಗಾಯಾಳುಗಳನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲು ನೆರವಾದರು. ಈ ಘಟನೆಯಿಂದ ಸುಮಾರು ಒಂದೂವರೆ ಗಂಟೆಗಳ ಕಾಲ ಪೊಳಲಿ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು . ಕ್ರೇನ್ ಮೂಲಕ ಬಸ್ ಅನ್ನು ಪಕ್ಕಕ್ಕೆ ಸರಿಸಲಾಯಿತು. ರಸ್ತೆಯ ಎಡಬದಿಯಲ್ಲಿ ದೊಡ್ಡ ಕಂದಕ ಇರುವ ಕಾರಣ ಒಂದು ವೇಳೆ ಬಸ್ ಆ ಕಡೆಗೆ ಬಿದ್ದಿದ್ದರೆ ಭಾರೀ ಅನಾಹುತವಾಗುವ ಸಾಧ್ಯತೆಯಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!