ನಾಗರಿಕರ ಹೋರಾಟಕ್ಕೆ ಜಯ: ಕೇರಳ ಗಡಿಗೆ ಬಸ್‌


Team Udayavani, Mar 5, 2021, 7:27 AM IST

ನಾಗರಿಕರ ಹೋರಾಟಕ್ಕೆ ಜಯ: ಕೇರಳ ಗಡಿಗೆ ಬಸ್‌

Buses , KERALA Border,,kannada newspaper,online kannada news

ಉಳ್ಳಾಲ: ತಲಪಾಡಿ ನಾಗರಿಕರು ಬುಧವಾರ ಟೋಲ್‌ ಎದುರು ನಡೆಸಿದ ಪ್ರತಿಭಟನೆ ಮತ್ತು ಮಾನವ ಸರಪಳಿಯ ಸಾಂಕೇತಿಕ ಹೋರಾಟಕ್ಕೆ ಜಯ ಸಿಕ್ಕಿದ್ದು, ಗುರುವಾರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಬಸ್‌ ಮಾಲಕರು, ಹೆದ್ದಾರಿ ಪ್ರಾಧಿಕಾರ, ಟೋಲ್‌ ಅಧಿಕಾರಿಗಳು ಮತ್ತು ತಲಪಾಡಿ ನಾಗರಿಕರ ನಡುವೆ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚಿಸಿದ ಟೋಲ್‌ ಪಾವತಿಗೆ ಬಸ್‌ ಮಾಲಕರು ಒಪ್ಪಿದ್ದು ಶುಕ್ರವಾರದಿಂದ ತಲಪಾಡಿ ಟೋಲ್‌ ದಾಟಿ ಕೇರಳ ಗಡಿ ಭಾಗವಾದ ಮೇಲಿನ ತಲಪಾಡಿಗೆ ಖಾಸಗಿ ಬಸ್‌ ಸಂಚಾರ ಆರಂಭಗೊಳ್ಳಲಿದೆ.

ಮಂಗಳೂರಿನಿಂದ ತಲಪಾಡಿಗೆ ಸಂಚರಿಸುವ ಬಸ್‌ಗಳು ಟೋಲ್‌ ಗೇಟ್‌ ದಾಟಿ ತಲಪಾಡಿ – ಕೇರಳ ಗಡಿಯಲ್ಲಿರುವ ಮೇಲಿನ ತಲಪಾಡಿಯ ನಿಲ್ದಾಣಕ್ಕೆ ಸಂಚರಿಸಬೇಕು ಎಂದು ತಲಪಾಡಿ ನಾಗರಿಕ ಸಮಿತಿ ಆಶ್ರಯದಲ್ಲಿ ಟೋಲ್‌ ಎದುರು ಪ್ರತಿಭಟನೆ ಮತ್ತು ಬಸ್‌ಗಳನ್ನು ಟೋಲ್‌ ದಾಟಿಸಿ ಪ್ರತಿಭಟನೆ ನಡೆಸಿದ್ದರು.

ಈ ವಿಚಾರದಲ್ಲಿ ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ನೇತೃತ್ವದಲ್ಲಿ ಗುರುವಾರ ಮಂಗಳೂರಿನ ಕದ್ರಿಯಲ್ಲಿರುವ ಮನಪಾ ವಿಭಾಗೀಯ ಕಚೇರಿಯಲ್ಲಿ ಸಭೆ ಕರೆದಿದ್ದು, ಬಸ್‌ ಮಾಲಕರು, ಹೆದ್ದಾರಿ ಪ್ರಾಧಿಕಾರ, ಟೋಲ್‌ ಅಧಿಕಾರಿಗಳು ಮತ್ತು ತಲಪಾಡಿ ನಾಗರಿಕರು ಭಾಗವಹಿಸಿದ್ದರು. ಬಸ್‌ಗಳಿಗೆ ಮಾಸಿಕ 28 ಸಾವಿರ ರೂ. ಟೋಲ್‌ ಶುಲ್ಕ ಪಾವತಿಸುವಂತೆ ಪಟ್ಟು ಹಿಡಿದಿದ್ದು, ಖಾಸಗಿ ಬಸ್‌ ಮಾಲಕರು 6 ಸಾವಿರ ರೂ.

ಪಾವತಿಸಲು ಸಿದ್ಧರಿದ್ದರು. ಬಳಿಕ ಜಿಲ್ಲಾಧಿಕಾರಿ ಮಾತನಾಡಿ ಮಾಸಿಕ 14 ಸಾವಿರ ರೂ. ಪಾವತಿಸುವಂತೆ ಬಸ್‌ ಮಾಲಕರಿಗೆ ಸೂಚಿಸಿದ್ದು ಇದಕ್ಕೆ ಟೋಲ್‌ ಅಧಿಕಾರಿಗಳು ಮತ್ತು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಮ್ಮತಿ ಸೂಚಿಸಿದರು.

ನಾಗರಿಕರ ಪರವಾಗಿ ಜಿ.ಪಂ. ಮಾಜಿ ಸದಸ್ಯ ವಿನಯ ನಾಯ್ಕ ಮತ್ತು ಸಿದ್ಧಿಕ್‌ ತಲಪಾಡಿ ಆಹವಾಲು ಮಂಡಿಸಿದರು. ಹೆದ್ದಾರಿ ಯೋಜನಾ ಪ್ರಾಧಿಕಾರದ ನಿರ್ದೇಶಕ ಶಿಶುಮೋಹನ್‌, ಟೋಲ್‌ ಪ್ರಬಂಧಕ ಶಿವಪ್ರಸಾದ್‌ ಶೆಟ್ಟಿ, ಖಾಸಗಿ ಬಸ್‌ ಮಾಲಕರ ಸಂಘದ ಜಿಲ್ಲಾಧ್ಯಕ್ಷ ದಿಲ್‌ರಾಜ್‌ ಆಳ್ವ ಮೊದಲಾದವರಿದ್ದರು.

2 ರೂ. ಹೆಚ್ಚುವರಿ ಪ್ರಯಾಣ ದರ ;

ಟೋಲ್‌ ದಾಟಿ ಕೇರಳ ಗಡಿಗೆ ಸಂಚರಿಸುವ ಪ್ರಯಾಣಿಕರಿಗೆ ಶುಕ್ರವಾರದಿಂದ 2 ರೂ. ಹೆಚ್ಚು ಟಿಕೆಟ್‌ ದರ ನಿಗದಿಯಾಗಲಿದೆ. ತಲಪಾಡಿಯಿಂದ ತೊಕ್ಕೊಟ್ಟು ಮತ್ತು ಮಂಗಳೂರು ವರೆಗೆ ಸಂಚರಿಸುವವರಿಗೆ ಈ ದರ ಅನ್ವಯಿಸಲಿದ್ದು ಕನಿಷ್ಠ ದರದಲ್ಲಿ ಪ್ರಯಾಣಿಸುವರಿಂದ ಹೆಚ್ಚುವರಿ ದರ ವಸೂಲಿ ಮಾಡುವುದಿಲ್ಲ ಎಂದು ತಲಪಾಡಿ – ಮಂಗಳೂರು ಬಸ್‌ ಮಾಲಕರ ಸಂಘದ ಅಧ್ಯಕ್ಷ ಕರೀಂ ಉಚ್ಚಿಲ ತಿಳಿಸಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.