ನಗರದಲ್ಲೆಲ್ಲ ವ್ಯಾಪಾರ ಬಿರುಸು


Team Udayavani, Oct 18, 2018, 9:54 AM IST

18-october-1.gif

ಮಹಾನಗರ: ಆಯುಧ ಪೂಜೆ ಹಿನ್ನೆಲೆಯಲ್ಲಿ ನಗರದಲ್ಲಿ ವ್ಯಾಪಾರ ಚಟುವಟಿಕೆ ಬಿರುಸುಗೊಂಡಿದೆ. ಗುರುವಾರ ನಡೆಯುವ ಆಯುಧ ಪೂಜೆಗೆ ಬುಧವಾರ ಬೆಳಗ್ಗೆಯಿಂದಲೇ ಹೂ ಹಣ್ಣು ಖರೀದಿ ಆರಂಭವಾಗಿದ್ದು, ವ್ಯಾಪಾರಸ್ಥರಿಗೂ ಭರ್ಜರಿ ವ್ಯಾಪಾರ ಕುದುರಿದೆ. ನಗರದ ರಸ್ತೆ ಬದಿಗಳಲ್ಲೆಲ್ಲ ಸೇವಂತಿಗೆ, ಮಲ್ಲಿಗೆ, ಚೆಂಡು ಹೂವು ಘಮಿಸುತ್ತಿದೆ.

ಸ್ಥಳೀಯ ವ್ಯಾಪಾರಸ್ಥರೊಂದಿಗೆ, ಉತ್ತರ ಕರ್ನಾಟಕ ಭಾಗದ ವ್ಯಾಪಾರಸ್ಥರೂ ಈಗಾಗಲೇ ನಗರಕ್ಕೆ ಆಗಮಿಸಿದ್ದು, ಆಯುಧ ಪೂಜೆಗೆ ಬೇಕಾಗುವ ಹೂವುಗಳ ಮಾರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ನಗರದ ಮಣ್ಣಗುಡ್ಡೆ ರಸ್ತೆ, ಬಿಜೈ ಬಸ್‌ ನಿಲ್ದಾಣದ ಬಳಿ, ಕಂಕನಾಡಿ, ಪಂಪ್‌ ವೆಲ್‌, ಹಂಪನಕಟ್ಟೆ, ಸ್ಟೇಟ್‌ ಬ್ಯಾಂಕ್‌, ಬಲ್ಮಠ ಸೇರಿದಂತೆ ನಗರದ ವಿವಿಧೆಡೆ ರಸ್ತೆ ಬದಿಗಳಲ್ಲಿ ಹೂವು ವ್ಯಾಪಾರ ನಡೆಯುತ್ತಿದ್ದು, ಖರೀದಿಸುವವರ ಸಂಖ್ಯೆಯೂ ಹೆಚ್ಚಾಗಿದೆ.

ಮುಖ್ಯವಾಗಿ ಆಯುಧಪೂಜೆಯಂದು ಮನೆಯಲ್ಲೇ ಇರುವ ವಿವಿಧ ವಸ್ತುಗಳಿಗೆ ಪೂಜೆ ನಡೆಸುವ ಸಲುವಾಗಿ ಜನ ಹೂವು ಖರೀದಿಯಲ್ಲಿ ತೊಡಗಿದ್ದಾರೆ. ಅಲ್ಲದೆ, ವಾಹನಗಳ ಪೂಜೆಗಾಗಿಯೂ ಹೂ ಖರೀದಿಯಲ್ಲಿ ಸಾರ್ವಜನಿಕರು ತೊಡಗಿದ್ದಾರೆ.

ಈಗಾಗಲೇ ಸೇವಂತಿಗೆ, ಮಲ್ಲಿಗೆ, ಚೆಂಡು ಹೂವುಗಳು ನಗರದ ಅಲ್ಲಲ್ಲಿ ಕಂಡು ಬರುತ್ತಿದ್ದು, ಭರ್ಜರಿ ವ್ಯಾಪಾರ ನಡೆಯುತ್ತಿದೆ. ದೊಡ್ಡ ಸೇವಂತಿಗೆ ಮಾರಿಗೆ 70 ರೂ., ಸಣ್ಣ ಸೇವಂತಿಗೆ 60 ರೂ., ಚೆಂಡು ಹೂ 100 ರೂ., ಮಲ್ಲಿಗೆ 85 ರೂ.ಗಳಿಂದ 100 ರೂ.ಗೆ ಮಾರಾಟವಾಗುತ್ತಿದ್ದು, ಎಲ್ಲಿಯೂ ಏಕದರ ಇಲ್ಲ.

ಹಣ್ಣಿನ ಖರೀದಿ ಬಲು ಜೋರು
ಸೇಬು, ಕಿತ್ತಳೆ, ದಾಳಿಂಬೆ, ಬಾಳೆಹಣ್ಣು ಮುಂತಾದ ಹಣ್ಣುಗಳ ಖರೀದಿಯೂ ಬಿರುಸಾಗಿದೆ. ಸೇಬು ಕೆಜಿಗೆ 150 ರೂ. ಗಳಿಂದ 200 ರೂ.ಗಳು, ದಾಳಿಂಬೆ ಕೆಜಿಗೆ 60 ರೂ. ತನಕ ಕೆಲವು ವ್ಯಾಪಾರಸ್ಥರು ದರ ನಿಗದಿ ಮಾಡಿದ್ದಾರೆ. ಇದರೊಂದಿಗೆ ಆಯುಧ ಪೂಜೆಯ ದಿನದ ವಿಶೇಷ ಆಹಾರಕ್ಕಾಗಿ ತರಕಾರಿ ಖರೀದಿಯೂ ಬಿರುಸಾಗಿದೆ.

ದೇವಸ್ಥಾನಗಳಲ್ಲಿ ಸಿದ್ಧತೆ 
ಆಯುಧ ಪೂಜೆಯ ದಿನದಂದು ದೇವಸ್ಥಾನಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಿರುತ್ತದೆ. ವಾಹನ ಪೂಜೆ ಹಿನ್ನೆಲೆಯಲ್ಲಿ ದೇವಸ್ಥಾನಗಳಲ್ಲಿಯೂ ಸಿದ್ಧತೆಗಳು ನಡೆಯುತ್ತಿವೆ. ವಿಶೇಷ ವಾಗಿ ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನ, ಕದ್ರಿ ಶ್ರೀ ಮಂಜುನಾಥ ದೇವಸ್ಥಾನಗಳಲ್ಲಿ ಆಯುಧ ಪೂಜಾ ತಯಾರಿಗಳು ನಡೆಯುತ್ತಿವೆ.

ಲಿಂಬೆ, ಹಸಿಮೆಣಸಿನ ಖರೀದಿ
ಆಯುಧ ಪೂಜೆಯಂದು ಹೂವಿನ ಜತೆಗೆ ಬಹುಮುಖ್ಯವಾಗಿ ಬೇಕಾಗುವ ಲಿಂಬೆಹಣ್ಣು ಮತ್ತು ಹಸಿಮೆಣಸಿನ ಮಾಲೆಗೂ ಉತ್ತಮ ಬೇಡಿಕೆ ಕಂಡು ಬರುತ್ತಿದೆ. ಲಿಂಬೆ ಹಣ್ಣಿಗೆ ಐದು ರೂ.ಗಳಾದರೆ, ಲಿಂಬೆ ಮತ್ತು ಹಸಿ ಮೆಣಸಿನ ಮಾಲೆಗೆ 10 ರೂ.ಗಳನ್ನು ವ್ಯಾಪಾರಸ್ಥರು ನಿಗದಿಪಡಿಸಿದ್ದಾರೆ. ಸೀಯಾಳವು 35 ರೂ.ಗಳಿಂದ 40 ರೂ.ಗಳ ತನಕ ಮಾರಾಟವಾಗುತ್ತಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.