ಕುಕ್ಕೆ: ಪ್ರಮುಖ ಸಂಪರ್ಕ ಕಡಿತ, ವ್ಯಾಪಾರಸ್ಥರಲ್ಲಿ ಆತಂಕ


Team Udayavani, Aug 23, 2018, 1:20 AM IST

kukke-shop-22-8.jpg

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಂಪರ್ಕಿಸುವ ಬಹುತೇಕ ರಸ್ತೆಗಳು ಕಡಿತಗೊಂಡ ಪರಿಣಾಮ ನಗರ ಪ್ರವಾಸಿಗರ ಕೊರತೆ ಎದುರಿಸುತ್ತಿದೆ. ಇದರ ಬಿಸಿ ಇಲ್ಲಿನ ವ್ಯಾಪಾರಿಗಳು ಹಾಗೂ ಹೊಟೇಲ್‌ ಉದ್ಯಮಿಗಳಿಗೆ ತಟ್ಟಿದೆ. ನಾಗಾರಾಧನೆಗೆ ಹೆಸರಾದ ಪಟ್ಟಣ ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ. ಹಲವು ಅಂಗಡಿಗಳು ವ್ಯಾಪಾರವಿಲ್ಲದೆ ಬಂದ್‌ ಆಗಿವೆ. ಬಾಡಿಗೆ ಭರಿಸಲೂ ಹಣವಿಲ್ಲದೆ ಪರದಾಡುತ್ತಿದ್ದಾರೆ. ದೇಗುಲ ಹಾಗೂ ವಸತಿ ಗೃಹಗಳು ಖಾಲಿಯಾಗಿದ್ದು, ನಷ್ಟದ ಭೀತಿ ಎದುರಿಸುತ್ತಿವೆ. ಕ್ಷೇತ್ರವನ್ನು ಸಂಪರ್ಕಿಸುವ ಪ್ರಮುಖ ರಸ್ತೆಗಳು ಸದ್ಯಕ್ಕೆ ಸಂಚಾರಕ್ಕೆ ಮುಕ್ತ ವಾಗುವ ಲಕ್ಷಣ ಗೋಚರಿಸುತ್ತಿಲ್ಲ, ಇದು ವ್ಯಾಪಾರಿಗಳ ಆತಂಕವನ್ನು ಹೆಚ್ಚಿಸಿದೆ.

ಕಡಮಕಲ್ಲು – ಗಾಳಿಬೀಡು ರಸ್ತೆ ತೆರೆದುಕೊಳ್ಳಲಿ
ರಸ್ತೆ, ಸೇತುವೆಗಳು ಸಂಚಾರಕ್ಕೆ ಮುಕ್ತವಾಗಲು ಇನ್ನೂ ತುಂಬ ಸಮಯ ಹಿಡಿಯಬಹುದು. ಹೀಗಾಗಿ, ಸುಬ್ರಹ್ಮಣ್ಯವನ್ನು ಮಡಿಕೇರಿ ಭಾಗದಿಂದ ಸಂಪರ್ಕಿಸುವ ಅತಿ ಹತ್ತಿರದ ದಾರಿ ಮಡಿಕೇರಿ-ಗಾಳಿಬೀಡು-ಕಡಮಕಲ್ಲು-ಸುಬ್ರಹ್ಮಣ್ಯ ರಸ್ತೆಯನ್ನು ತುರ್ತಾಗಿ ಅಭಿವೃದ್ಧಿಗೊಳಿಸಿದಲ್ಲಿ ಇತರೆ ರಸ್ತೆಗಳ ಮೇಲಿನ ಒತ್ತಡವನ್ನು ತುಸು ಮಟ್ಟಿಗಾದರೂ ತಗ್ಗಿಸಬಹುದು ಎಂಬ ಅಭಿಪ್ರಾಯ ಈ ಭಾಗದವರಿಂದ ವ್ಯಕ್ತವಾಗುತ್ತಿದೆ.

ಸಾಧಾರಣ ಮಳೆ
ಸುಬ್ರಹ್ಮಣ್ಯ ಆಸುಪಾಸಿನ ಪ್ರದೇಶಗಳಲ್ಲಿ ಬುಧವಾರವೂ ಸಾಧಾರಣ ಮಳೆಯಾಗಿದೆ. ಮಂಗಳವಾರ ರಾತ್ರಿಯಿಂದ ಬೆಳಗ್ಗೆ ತನಕ ನಿರಂತರ ಜಿಟಿಜಿಟಿ ಮಳೆಯಾಗಿತ್ತು. ಬುಧವಾರ ಬೆಳಗ್ಗೆ ಕೆಲ ಹೊತ್ತು ಭಾರೀ ಮಳೆ ಸುರಿಯಿತು. ಹಲವು ದಿನಗಳ ಬಳಿಕ ಇದೇ ಮೊದಲ ಬಾರಿಗೆ ತುಸು ಹೊತ್ತು ಬಿಸಿಲಿನ ದರ್ಶನವಾಯಿತು. ಮಧ್ಯಾಹ್ನದ ತನಕ ಮಳೆ-ಬಿಸಿಲಿನಾಟ ಕಂಡು ಬಂತು. ಸಂಜೆ ವೇಳೆಗೆ ಮಳೆ ಮತ್ತೆ ಬಿರುಸು ಪಡೆದುಕೊಂಡಿದೆ. ಬುಧವಾರ ಈ ಭಾಗದಲ್ಲಿ ಭೂಕುಸಿತ  ಸಂಭವಿಸಿಲ್ಲ.

ಹೊಳೆ ಬದಿ ತ್ಯಾಜ್ಯದ ರಾಶಿ
ಇತ್ತೀಚೆಗೆ ಈ ಭಾಗದಲ್ಲಿ ಭಾರೀ ಪ್ರಮಾಣದ ಮಳೆಯಯಾಗಿದೆ. ಕುಮಾರಧಾರಾ ನದಿ ಸಹಿತ ಆಸುಪಾಸಿನ ಎಲ್ಲ ನದಿ, ಹಳ್ಳ, ಕೊಳ್ಳಗಳಲ್ಲಿ ನೆರೆ ಹರಿದು ಬಂದಿತ್ತು. ವ್ಯಾಪಕ ಮಳೆ ಹಾಗೂ ಭೂಕುಸಿತ ಘಟನೆಗಳು ಸಂಭವಿಸಿ ಅಪಾರ ಪ್ರಮಾಣದ ಮರ, ಮಣ್ಣು, ತ್ಯಾಜ್ಯಗಳು ನೆರೆಯೊಂದಿಗೆ ಹರಿದು ಬಂದಿವೆ. ಇವೆಲ್ಲವೂ ಕ್ಷೇತ್ರದ ಪರಿಸರದಲ್ಲಿ ನದಿಯ ಬದಿಯಲ್ಲಿ ಸಂಗ್ರಹಗೊಂಡು ತ್ಯಾಜ್ಯಮಯವಾಗಿದೆ. ಅವುಗಳನ್ನು ತುರ್ತಾಗಿ ತೆರವುಗೊಳಿಸದಿದ್ದರೆ ಸಾಂಕ್ರಾಮಿಕ ರೋಗ ಹರಡುವ ಭೀತಿ ಆವರಿಸಿದೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.