ಖರೀದಿದಾರರೇ ಗಮನಿಸಿ…ನಂಬರ್‌ ಅಳವಡಿಸದೆ ವಾಹನ ಡೆಲಿವರಿ ಇಲ್ಲ


Team Udayavani, Mar 21, 2023, 7:10 AM IST

ಖರೀದಿದಾರರೇ ಗಮನಿಸಿ…ನಂಬರ್‌ ಅಳವಡಿಸದೆ ವಾಹನ ಡೆಲಿವರಿ ಇಲ್ಲ

ಮಂಗಳೂರು: ಹೊಸ ವಾಹನ ಖರೀದಿಸುವವರೇ ಗಮನಿಸಿ, ಇನ್ನು ಮುಂದೆ ನೀವು ವಾಹನ ಡೆಲಿವರಿ ಪಡೆಯುವಾಗ ನೋಂದಣಿ ಸಂಖ್ಯೆ ಅಳವಡಿಸಿರಲೇಬೇಕು.

ಸಾಮಾನ್ಯವಾಗಿ ಹೊಸ ವಾಹನ ಖರೀದಿಸು ವವರು ಹಣ ಪಾವತಿಯಾದ ಕೂಡಲೇ ನೋಂದಣಿ ಮಾಡಿಸಿ, ನಂಬರ್‌ ಪ್ಲೇಟ್‌ ಬರುವ ಮುಂಚೆಯೇ ಡೆಲಿವರಿ ಪಡೆದುಕೊಳ್ಳುವುದು ವಾಡಿಕೆ. ಆದರೆ ಈಗ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಹೊರಡಿಸಿರುವ ಅಂತಿಮ ಅಧಿಸೂಚನೆಯ ಪ್ರಕಾರ ಮೋಟಾರು ವಾಹನಗಳ ಕಾಯಿದೆ 1988ರ ಕಲಂ 41(6)ರ ಅನ್ವಯ ಇದೇ ಮಾ. 3ರಿಂದ ಅನ್ವಯವಾಗುವಂತೆ ಅತೀ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಸದೆ ಹೊಸ ವಾಹನಗಳನ್ನು ಮಾಲಕರಿಗೆ ನೀಡುವಂತಿಲ್ಲ. ಇದಕ್ಕಾಗಿ ಕೇಂದ್ರ ಮೋಟಾರು ವಾಹನಗಳ 1989ರ ನಿಯಮ 50ಕ್ಕೆ ತಿದ್ದುಪಡಿ ಮಾಡಲಾಗಿದ್ದು, 1-4- 2019ರಿಂದ ಜಾರಿಗೆ ಬರಬೇಕಿತ್ತು. ಈಗ ಕಡ್ಡಾಯಗೊಳಿಸಲಾಗಿದೆ.

ಗ್ರಾಹಕರಿಗೆ ಹೊಸ ನಿಯಮದ ಮಾಹಿತಿ ಇಲ್ಲ. ಹಣ ಪಾವತಿಸಿ, ನೋಂದಣಿಯಾದ ಕೂಡಲೇ ವಾಹನ ಹಸ್ತಾಂತರ ಮಾಡುವಂತೆ ಆಗ್ರಹಿಸುತ್ತಾರೆ. ಹೊಸ ನಿಯಮದ ಬಗ್ಗೆ ತಿಳಿಸಿದರೆ “ಇದುವರೆಗೆ ಇಲ್ಲದ ನಿಯಮ, ನೀವೇ ಮಾಡಿದ್ದಾ’ ಎಂದು ಪ್ರಶ್ನಿಸು ತ್ತಾರೆ ಎನ್ನುವುದು ವಾಹನ ಡೀಲರ್‌ ಒಬ್ಬರ ಮಾತು.

ಈಗ ಹಿಂದಿನಂತೆ ಹೊಸ ವಾಹನ ಗಳನ್ನು ನೋಂದಣಿಗಾಗಿ ಆರ್‌ಟಿಒ ಕಚೇರಿಗೆ ಕೊಂಡು ಹೋಗಬೇಕಾಗಿಲ್ಲ, ಎಲ್ಲವೂ ಆನ್‌ಲೈನ್‌ ಮೂಲಕವೇ ನಡೆಯುತ್ತದೆ. ಗ್ರಾಹಕರು ಹಣ ಪಾವತಿಸಿದ ಕೂಡಲೇ ಸ್ವಯಂ ಆಗಿ ನೋಂದಣಿ ಸಂಖ್ಯೆ ಜನರೇಟ್‌ ಆಗುತ್ತದೆ. ಒಂದು ವೇಳೆ ವಿಶಿಷ್ಟ ಸಂಖ್ಯೆಯೇ ಬೇಕಿದ್ದರೆ ಆರ್‌ಟಿಒಗೆ ತೆರಳಿ ಹೆಚ್ಚು ಮೊತ್ತ ಪಾವತಿಸಿ ಪಡೆಯಬೇಕು. ನೋಂದಣಿ ಸಂಖ್ಯೆಯನ್ನು ಬಳಿಕ ನಂಬರ್‌ ಪ್ಲೇಟ್‌ ಮಾಡುವವರಿಗೆ ಕಳುಹಿಸಲಾಗುತ್ತದೆ.

ಬದಲಾದ ನಿಯಮದಂತೆ ವಾಹನದ ನೋಂದಣಿ ಯಾದರೂ ನಂಬರ್‌ ಪ್ಲೇಟನ್ನು ಅಳವಡಿಸದೆ ಹೊಸ ವಾಹನವನ್ನು ಗ್ರಾಹಕರ ಕೈಗೆ ನೀಡುವಂತಿಲ್ಲ. ಗ್ರಾಹಕರು ಇದನ್ನು ಗಮನಿಸಿ ಸಹಕರಿಸಬೇಕು.
– ಭೀಮನಗೌಡ ಪಾಟೀಲ್‌,
ಪ್ರಾದೇಶಿಕ ಸಾರಿಗೆ ಅಧಿಕಾರಿ, ಮಂಗಳೂರು

 

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.