ಕ್ಯಾಬ್‌ ‘ಚೈಲ್ಡ್‌ ಲಾಕ್‌’ ತೆರವು ಆರಂಭ


Team Udayavani, Jan 21, 2019, 5:01 AM IST

21-january-2.jpg

ಮಹಾನಗರ: ಮಂಗಳೂರು ನಗರ ಸಹಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೋಟಾರು ಕ್ಯಾಬ್‌ (ಸಾರಿಗೆ ವಾಹನಗಳು)ಗಳೆಂದು ನೋಂದಣಿಯಾಗಿರುವ ವಾಹನಗಳಲ್ಲಿ ಅಳವಡಿಸಲಾಗಿರುವ ‘ಚೈಲ್ಡ್‌ ಲಾಕ್‌’ ಸಿಸ್ಟಮ್‌ ಅನ್ನು ತೆರವುಗೊಳಿಸಲು ಸಾರಿಗೆ ಇಲಾಖೆ ಮುಂದಾಗಿದೆ. ಅದರಂತೆ, ಮಂಗಳೂರು, ಬಂಟ್ವಾಳ, ಪುತ್ತೂರು ವಿಭಾಗದ ಸಾರಿಗೆ ಅಧಿಕಾರಿಗಳು ಈ ನಿಟ್ಟಿನಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ.

1988ನೇ ಮೋಟಾರು ವಾಹನ ಕಾಯ್ದೆ ಕಲಂ 2 (25)ರಲ್ಲಿ ತಿಳಿಸಿರುವಂತೆ ಮೋಟಾರು ಕ್ಯಾಬ್‌ (ಸಾರಿಗೆ ವಾಹನಗಳು)ಗಳಾಗಿ ನೋಂದಣಿಯಾಗಿರುವ ವಾಹನಗಳಲ್ಲಿ ಅಳವಡಿಸಿ ರುವ ಚೈಲ್ಡ್‌ ಲಾಕ್‌ ಸಿಸ್ಟಮ್‌ ನಿಷ್ಕ್ರಿಯ ಗೊಳಿಸುವಂತೆ ಮತ್ತು ಚೈಲ್ಡ್‌ ಲಾಕ್‌ ಸಿಸ್ಟಮ್‌ ಅಳವಡಿಸಿಕೊಂಡಂತಹ ವಾಹನಗಳಿಗೆ ರಹದಾರಿ (ಪರ್ಮಿಟ್) ನೀಡಬಾರದು ಎಂದು ತಿಳಿಸಿ ಕರ್ನಾಟಕ ಮೋಟಾರು ವಾಹನ ನಿಯಮಾವಳಿ ಗಳು ನಿಯಮ 130 ಎ ಗೆ ತಿದ್ದುಪಡಿ ಮಾಡಿ ಕರ್ನಾಟಕ ಸರಕಾರ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಇದರಂತೆ ಮೋಟಾರ್‌ ಕ್ಯಾಬ್‌ಗಳಲ್ಲಿ ಈಗಾಗಲೇ ಅಳವಡಿಸಿರುವ ಚೈಲ್ಡ್‌ ಲಾಕ್‌ ಸಿಸ್ಟಮ್‌ ತೆಗೆಯಬೇಕಾಗುತ್ತದೆ. ಹೊಸದಾಗಿ ನೋಂದಣಿಯಾಗಿ ಪರ್ಮಿಟ್ ಪಡೆಯುವ ಮೋಟಾರು ಕ್ಯಾಬ್‌ ವಾಹನಗಳಿಗೂ ಸಹ ಚೈಲ್ಡ್‌ ಲಾಕ್‌ ಸಿಸ್ಟಮ್‌ ತೆಗೆಯಬೇಕಾಗಿದೆ.

ಪರ್ಮಿಟ್ ಪಡೆಯಲು, ಪರ್ಮಿಟ್ ನವೀಕರಣ ಸಂದರ್ಭದಲ್ಲಿ ಆರ್‌ಟಿಒ ಅಧಿಕಾರಿಗಳು ಚೈಲ್ಡ್‌ ಲಾಕ್‌ ಸಿಸ್ಟಮ್‌ ಇದೆಯೋ? ಇಲ್ಲವೋ? ಎಂಬುದನ್ನು ಪರಿಶೀಲಿಸಿ ಪರ್ಮಿಟ್ ನೀಡಲಾಗುತ್ತದೆ. ಒಂದು ವೇಳೆ ಚೈಲ್ಡ್‌ ಲಾಕ್‌ ಕಾರಿನಲ್ಲಿ ಇದ್ದರೆ ಅದನ್ನು ತೆಗೆದ ಬಳಿಕವಷ್ಟೇ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.

ಏನಿದು ಚೈಲ್ಡ್‌ ಲಾಕ್‌?
ಕಾರಿನಲ್ಲಿ ‘ಸೆಂಟ್ರಲ್‌ ಲಾಕ್‌’ ಸಿಸ್ಟಮ್‌ ಬಳಕೆಯಲ್ಲಿದೆ. ಅಂದರೆ, ವಾಹನದ ನಾಲ್ಕು ಬಾಗಿಲು ಒಮ್ಮೆಗೆ ಡ್ರೈವರ್‌ ಲಾಕ್‌ ಮಾಡುವ ಕ್ರಮವಿದು. ಇದರ ಜತೆಗೆ ಪ್ರಯಾಣಿಕರ ಭದ್ರತೆಯ ದೃಷ್ಟಿಯಿಂದ ‘ಚೈಲ್ಡ್‌ ಲಾಕ್‌’ ಸಿಸ್ಟಮ್‌ ಜಾರಿಯಲ್ಲಿದೆ. ಇದರಲ್ಲಿ ಕಾರಿನ ಹಿಂಭಾಗದ ಎರಡು ಡೋರ್‌ಗಳ ಲಾಕ್‌ನ ಬದಿಯಲ್ಲಿ ‘ಚೈಲ್ಡ್‌ ಲಾಕ್‌’ ಇರುತ್ತದೆ. ಬಹುತೇಕ ಎಲ್ಲ ಕಾರುಗಳಲ್ಲಿ ಈ ಸಿಸ್ಟಮ್‌ ಇದೆ. ಹಿಂಬದಿಯ ಸೀಟಿನಲ್ಲಿ ಮಕ್ಕಳು ಕುಳಿತಿದ್ದರೆ ಅವರು ಲಾಕ್‌ ತೆಗೆಯುವ ಅಪಾಯ ಇರುವ ಕಾರಣದಿಂದ ಬಹುತೇಕ ಜನ ಭದ್ರತೆಯ ಕಾರಣಕ್ಕಾಗಿ ಚೈಲ್ಡ್‌ ಲಾಕ್‌ ಹಾಕಿರುತ್ತಾರೆ. ಇದರಿಂದಾಗಿ ಹಿಂಬದಿಯ ಸೀಟನ್ನು ಒಳಗಿನಿಂದ ತೆಗೆಯಲು ಸಾಧ್ಯವಾಗುವುದಿಲ್ಲ.

ಚೈಲ್ಡ್‌ ಲಾಕ್‌ ಯಾಕೆ ಬೇಡ?
ವಿವಿಧ ಭಾಗಗಳಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ದೌರ್ಜನ್ಯ ಹೆಚ್ಚುತ್ತಿರುವ ಕಾರಣದಿಂದ ಚೈಲ್ಡ್‌ ಲಾಕ್‌ ತೆಗೆಸುವಂತೆ ಹೈಕೋರ್ಟ್‌ ರಾಜ್ಯ ಸರಕಾರಕ್ಕೆ ಇತ್ತೀಚೆಗೆ ಸೂಚಿಸಿತ್ತು. ಬೆಂಗಳೂರಿನ ಕ್ಯಾಬ್‌ಗಳಲ್ಲಿ ಸಂಚರಿಸುವ ಮಹಿಳಾ ಪ್ರಯಾಣಿಕರ ಮೇಲೆ ದೌರ್ಜನ್ಯ ಪ್ರಕರಣ ಹೆಚ್ಚುತ್ತಿದ್ದು, ಬಹುತೇಕ ಪ್ರಕರಣದಲ್ಲಿ ಚಾಲಕರು ಚೈಲ್ಡ್‌ ಲಾಕ್‌ ವ್ಯವಸ್ಥೆಯನ್ನು ದುರುಪ ಯೋಗಿಸಿರುವುದು ಕಂಡುಬಂದಿದೆ. ಹೀಗಾಗಿ ಇದನ್ನು ತೆಗೆಯಲು ನಿಯಮದಲ್ಲಿ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿ ಬಿಎಸ್‌ಒಜಿ ಸಂಘಟನೆ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಇದರಂತೆ ರಾಜ್ಯ ಸರಕಾರ ಮೋಟಾರ್‌ ವಾಹನಗಳಲ್ಲಿ ಚೈಲ್ಡ್‌ ಲಾಕ್‌ ತೆಗೆಯುವ ಬಗ್ಗೆ ಹೈಕೋರ್ಟ್‌ಗೆ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಕಾರ್ಯಾಚರಣೆಗೆ ಮುಂದಾಗಿದೆ.

ಕಾರ್ಯಾಚರಣೆ ಆರಂಭ
ತುರ್ತು ಸಂದರ್ಭದಲ್ಲಿ ಪ್ರಯಾಣಿಕರ ಹಿತದೃಷ್ಟಿಯಿಂದ ಸಾರಿಗೆ ವಾಹನಗಳಲ್ಲಿರುವ ಚೈಲ್ಡ್‌ ಲಾಕ್‌ ಸಿಸ್ಟಮ್‌ ಅನ್ನು ತೆಗೆಯುವಂತೆ ಸರಕಾರದ ಸೂಚನೆಯ ಮೇರೆಗೆ ದ.ಕ. ವ್ಯಾಪ್ತಿಯಲ್ಲಿ ಅರಿವು ಮೂಡಿಸುವ ಪ್ರಯತ್ನ ನಡೆಸಲಾಗುತ್ತಿದೆ. ಜತೆಗೆ ನಿಲ್ದಾಣಗಳಿಗೆ ತೆರಳಿ ಚೈಲ್ಡ್‌ ಲಾಕ್‌ ತೆರವು ಮಾಡಲಾಗುತ್ತಿದೆ. ಇದು ನಿರಂತರವಾಗಿ ಮುಂದುವರಿಯಲಿದೆ.
– ಜಿ.ಎಸ್‌. ಹೆಗಡೆ,
ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಬಂಟ್ವಾಳ

ಚೈಲ್ಡ್‌ ಲಾಕ್‌ ಅಗತ್ಯ
ಸಾರಿಗೆ ವಾಹನಗಳು ಚೈಲ್ಡ್‌ ಲಾಕ್‌ ತೆಗೆಯಬೇಕೆಂಬ ನಿಯಮ ಸ್ವಾಗತಾರ್ಹ. ಆದರೆ, ಸಾರಿಗೇತರ ವಾಹನದಲ್ಲಿ ಇಂತಹ ಲಾಕ್‌ ವ್ಯವಸ್ಥೆ ಇದೆ. ಹಾಗಾದರೆ, ಅದರಿಂದಾಗಿ ಯಾವುದೇ ಸಮಸ್ಯೆ ಆಗುವುದಿಲ್ಲವೇ ಎಂಬ ಪ್ರಶ್ನೆ ಮೂಡುತ್ತದೆ. ಪ್ರಯಾಣಿಕರ ಭದ್ರತೆ ದೃಷ್ಟಿಯಿಂದ ಚೈಲ್ಡ್‌ ಲಾಕ್‌ ಬಹಳ ಉಪಯುಕ್ತ. ಸಾರಿಗೆ ನಿಯಮಗಳಿಗೆ ಅನ್ವಯವಾಗುವ ಎಲ್ಲ ವ್ಯವಸ್ಥೆಗಳನ್ನು ವಾಹನ ತಯಾರಿ ವೇಳೆ ಕಂಪೆನಿಯಿಂದಲೇ ಮಾಡಿದರೆ ಉತ್ತಮ. 
ಶುಭಕರ ಶೆಟ್ಟಿ,
ಟ್ಯಾಕ್ಸಿ ಚಾಲಕರು ಕಂಕನಾಡಿ

•ವಿಶೇಷ ವರದಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.