ಸಿಗಬಹುದೇ ಎಪಿಎಂಸಿ ಸೇತುವೆ ಸಮಸ್ಯೆಗೆ ಮುಕ್ತಿ ?


Team Udayavani, Sep 23, 2018, 11:54 AM IST

23-sepctember-8.jpg

ನಗರ: ನಗರಸಭೆ ಹಾಗೂ ಎಪಿಎಂಸಿ ನಡುವಿನ ಹೊಯ್ದಾಟಕ್ಕೆ ಕಾರಣವಾಗಿದ್ದ ಎಪಿಎಂಸಿ ರಸ್ತೆ ಸೇತುವೆಯ ಸಮಸ್ಯೆಗೆ ಕೊನೆಗೂ ಮುಕ್ತಿ ಸಿಗುವ ಲಕ್ಷಣಗಳು ಗೋಚರಿಸಿವೆ. ಸೇತುವೆಗೆ ತಡೆಗೋಡೆ ನಿರ್ಮಿಸಲು 3.90 ಲಕ್ಷ ರೂ. ಅನುದಾನ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಹಾಗೂ ಸಹಾಯಕ ಆಯುಕ್ತರಿಗೆ ಸಲ್ಲಿಸಿರುವ ಅಂದಾಜು ಪಟ್ಟಿಯಲ್ಲಿ ಉಲ್ಲೇಖೀಸಲಾಗಿದೆ. ಈ ಅಂದಾಜು ಪಟ್ಟಿ ಅನುಮೋದನೆಗೊಂಡ ಬಂದರೆ, ಕಾಮಗಾರಿಯ ಪ್ರಕ್ರಿಯೆಗಳು ಆರಂಭ ಆಗಬಹುದು. ಕೆಲಸ ಪೂರ್ಣಗೊಂಡರೆ ಹಲವು ದಿನಗಳಿಂದ ಜೀವಂತ ಆಗಿರುವ ಸಮಸ್ಯೆಯೊಂದಕ್ಕೆ ಮುಕ್ತಿ ನೀಡಿದಂತಾಗುತ್ತದೆ.

ಪುತ್ತೂರು ಮುಖ್ಯರಸ್ತೆಯಿಂದ ಎಪಿಎಂಸಿ ಸಂಪರ್ಕಿಸುವ ನಡುವೆ ರೈಲ್ವೇ ಹಳಿಯ ಕೆಳಭಾಗದಲ್ಲಿ ರಸ್ತೆ ಬದಿಯ ಸೇತುವೆ ತಡೆಗೋಡೆ ಕುಸಿದಿತ್ತು. ತಿರುವು ಇರುವುದರಿಂದ ಮೇಲ್ಭಾಗದಿಂದ ಬರುವ ಪ್ರಯಾಣಿಕರಿಗೆ ಸಮಸ್ಯೆಯ ಬಗ್ಗೆ ಅರಿವೇ ಇರುವುದಿಲ್ಲ. ಅಪಾಯ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ ಎಂದು ನಗರಸಭೆ, ಎಪಿಎಂಸಿ, ಸಹಾಯಕ ಆಯುಕ್ತ, ಜಿಲ್ಲಾಧಿಕಾರಿ ಗಮನ ಸೆಳೆಯಲಾಗಿತ್ತು. ಕಾಮಗಾರಿ ಆರಂಭಕ್ಕೆ ಅಧಿಕಾರಿಗಳ ನಡುವಿನ ಗೊಂದಲ ತಡೆಯಾಗಿತ್ತು.

ಎಪಿಎಂಸಿ ರಸ್ತೆಯ ಸೇತುವೆ ಇದಾಗಿರುವ ಕಾರಣ ಎಪಿಎಂಸಿಯೇ ಇದರ ಹೊಣೆ ಹೊರಬೇಕು ಎಂದು ನಗರಸಭೆ ವಾದಿಸಿತ್ತು. ಎಪಿಎಂಸಿಯೂ ಮುತುವರ್ಜಿ ವಹಿಸಿಕೊಳ್ಳುವ ಉಮೇದು ಮಾಡಲಿಲ್ಲ. ಈಗ ಮಳೆ ದೂರವಾಗಿದೆ. ಬಿರು ಬಿಸಿಲು ಮೈ ಸುಡುತ್ತಿದೆ. ಮಳೆ ಕಣ್ಮರೆ ಆಗುತ್ತಿದ್ದಂತೆ ಅಧಿಕಾರಿಗಳು ಸೇತುವೆ ವಿಷಯವನ್ನು ಮರೆತೇ ಬಿಟ್ಟರೇ ಎಂಬ ಗುಮಾನಿ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿ, ಶಾಸಕರ ಗಮನ ಸೆಳೆಯಲಾಗಿತ್ತು. ಇನ್ನೊಂದೆಡೆ ಪೊಲೀಸ್‌ ಇಲಾಖೆಯೂ ಸೇತುವೆ ಸಮಸ್ಯೆಯ ಗಂಭೀರತೆಯ ಬಗ್ಗೆ ವರದಿ ಮಾಡಿತ್ತು.

ಮಾಹಿತಿ ಹಕ್ಕು
ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಚಿಕ್ಕಮುಟ್ನೂರು ಕಲಿಯುಗ ಸೇವಾ ಸಮಿತಿ ಮಾಹಿತಿ ಹಕ್ಕಿನಡಿ ಅರ್ಜಿ ಸಲ್ಲಿಸಿತ್ತು. ಇದಕ್ಕೆ ಉತ್ತರಿಸಿದ ಪುತ್ತೂರು ನಗರಸಭೆ ಅಧಿಕಾರಿಗಳು, ಸೇತುವೆ ಕಾಮಗಾರಿಯನ್ನು ಪ್ರಕೃತಿ ವಿಕೋಪದಡಿ ಸೇರಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ನಗರಸಭೆ 3.90 ಲಕ್ಷ ರೂ. ಅಂದಾಜು ಪಟ್ಟಿ ಸಲ್ಲಿಸಿರುವ ಬಗ್ಗೆ ಮಾಹಿತಿ ನೀಡಲಾಗಿದೆ.

ಜಿಲ್ಲಾಧಿಕಾರಿ ಖಡಕ್‌ ಸೂಚನೆ
ಮಳೆಗಾಲದ ಭಾರೀ ಮಳೆಗೆ ನೀರು ಉಕ್ಕೇರಿ ಹರಿಯಿತು. ಆ ಸಂದರ್ಭ ದೇವರಮಾರು ಗದ್ದೆಯ ಆಸುಪಾಸಿನ ಮನೆಗಳಿಗೆ ನೀರು ನುಗ್ಗಿತು. ಅಧಿಕಾರಿಗಳು ಸಮಾರೋಪಾದಿಯಲ್ಲಿ ಕಾರ್ಯ ಪ್ರವೃತ್ತರಾದರು. ಘಟನೆ ಬಗ್ಗೆ ಮಾಹಿತಿ ಕಲೆ ಹಾಕಿದ ಜಿಲ್ಲಾಧಿಕಾರಿ, ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡರು. ಪ್ರಕೃತಿ ವಿಕೋಪ ಸಂಭವಿಸಿದ ಬಳಿಕ ಯಾರೇನೂ ಮಾಡಲು ಸಾಧ್ಯವಿಲ್ಲ. ದುರಂತ ಸಂಭವಿಸುವ ಮೊದಲೇ ಮುಂಜಾಗ್ರತೆ ಕೈಗೊಳ್ಳಬೇಕು. ನಗರಸಭೆ- ಎಪಿಎಂಸಿ ಎಂಬ ಬಿಗುಮಾನ ಬೇಡ. ನಗರಸಭೆ ವ್ಯಾಪ್ತಿಯಲ್ಲಿ ಯಾವುದೇ ಘಟನೆ ನಡೆದರೂ ಅದಕ್ಕೆ ಸ್ಥಳೀಯಾಡಳಿತವೇ ಜವಾಬ್ದಾರಿ. ಈ ಸೇತುವೆಯನ್ನು ಪ್ರಕೃತಿ ವಿಕೋಪದಡಿ ಸೇರಿಸಿ, ಪ್ರಸ್ತಾವನೆ ಕಳುಹಿಸುವಂತೆ ಸೂಚಿಸಿದ್ದರು. ಅವರ ಸೂಚನೆ ಹಿನ್ನೆಲೆಯಲ್ಲಿ ಇದೀಗ ಪುತ್ತೂರು ನಗರಸಭೆ, ಅಂದಾಜು ಪಟ್ಟಿ ಸಿದ್ಧಪಡಿಸಿದೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.