ಬೆಳ್ಳಾರೆಗೆ ಬೇಕು ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ
Team Udayavani, Sep 6, 2018, 10:15 AM IST
ಬೆಳ್ಳಾರೆ: ಸುಳ್ಯ ತಾಲೂಕಿನ ಎರಡನೇ ಅತೀ ದೊಡ್ಡ ಪೇಟೆಯಾದ ಬೆಳ್ಳಾರೆಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಅವೈಜ್ಞಾನಿಕವಾಗಿದ್ದು, ಜನರಿಗೆ ಸಮಸ್ಯೆಯಾಗುತ್ತಿದೆ. ಸುಳ್ಯ ಪೇಟೆಯಿಂದ ಸುಮಾರು 14 ಕಿ.ಮೀ. ದೂರದಲ್ಲಿರುವ ಬೆಳ್ಳಾರೆ ವಾಣಿಜ್ಯ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದುತ್ತಿರುವ ಪಟ್ಟಣ. ಸುಳ್ಯ ಹಾಗೂ ಪುತ್ತೂರಿನ ಗಡಿಭಾಗವೂ ಆಗಿರುವ ಬೆಳ್ಳಾರೆ ಯನ್ನು ಎರಡೂ ತಾಲೂಕುಗಳ ಜನ ಅವಲಂಬಿಸಿದ್ದಾರೆ. ಸುಬ್ರಹ್ಮಣ್ಯ ಹಾಗೂ ಪುತ್ತೂರಿಗೆ ಈ ಭಾಗದ ಅನೇಕ ಊರುಗಳಿಂದ ಬೆಳ್ಳಾರೆ ಮೂಲಕ ತೆರಳುವುದೇ ಅತೀ ಹತ್ತಿರದ ದಾರಿಯೂ ಆಗಿದೆ.
ಆಗಾಗ ರಸ್ತೆ ತಡೆ
ವಾಣಿಜ್ಯ ಹಾಗೂ ಶೈಕ್ಷಣಿಕವಾಗಿ ಬೆಳ್ಳಾರೆ ಪ್ರಗತಿ ಕಂಡಿದ್ದರೂ ಮೂಲಸೌಕರ್ಯಗಳ ಕೊರತೆ ಸಾಕಷ್ಟಿದೆ. ಬೆಳ್ಳಾರೆಯ ಮೂಲಕ ಅನೇಕ ವಿದ್ಯಾರ್ಥಿಗಳು, ನೌಕರರು, ಭಕ್ತರು ಹಾಗೂ ಸಾರ್ವಜನಿಕರು ಸಂಚರಿಸುತ್ತಾರೆ. ಅತಿ ಹೆಚ್ಚು ವಾಹನಗಳು ಸಂಚರಿಸುವುದರಿಂದ ಹಾಗೂ ಚಾಲಕರು ತಮ್ಮ ವಾಹನಗಳನ್ನು ರಸ್ತೆ ಪಕ್ಕದಲ್ಲೇ ಅಡ್ಡಾದಿಡ್ಡಿಯಾಗಿ ನಿಲ್ಲಿಸುವುದರಿಂದ ಆಗಾಗ ರಸ್ತೆತಡೆ ಉಂಟಾಗುತ್ತದೆ. ಜನನಿಬಿಡ ಪ್ರದೇಶವಾಗಿದ್ದು, ವಾಹನ ದಟ್ಟಣೆ ಇದ್ದರೂ ವ್ಯವಸ್ಥಿತ ಪಾರ್ಕಿಂಗ್ ಇಲ್ಲದೆ ಬೆಳ್ಳಾರೆಯಲ್ಲಿ ಆಗಾಗ ಸಮಸ್ಯೆಯಾಗುತ್ತಿದೆ. ಮೂರು ವರ್ಷಗಳ ಹಿಂದೆ ಬೆಳ್ಳಾರೆಯ ವರ್ತಕರ ಸಂಘದವರು ಪೊಲೀಸರ ನೇತೃತ್ವದಲ್ಲಿ ಸಭೆ ನಡೆಸಿ, ಈ ಕುರಿತು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ವ್ಯವಸ್ಥಿತ ಪಾರ್ಕಿಂಗ್ ಮಾಡುವ ನಿರ್ಧಾರವನ್ನು ಗ್ರಾಮ ಪಂಚಾಯತ್ ತಳೆದಿತ್ತು. ಆದರೆ, ಅದಿನ್ನೂ ಈಡೇರದೆ ಜನರ ಆಕ್ರೋಶಕ್ಕೆ ಕಾರಣವಾಗಿದೆ. ವ್ಯವಸ್ಥಿತ ಪಾರ್ಕಿಂಗ್ ಆಗಲೇಬೇಕೆಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.
ನಿರ್ಣಯ ಕಳುಹಿಸಿದ್ದಾರೆ
ಮಳೆ ಕಡಿಮೆಯಾದ ಕೂಡಲೇ ಯಾವ ರೀತಿಯ ಕ್ರಮ ಕೈಗೊಳ್ಳಬಹುದೆಂದು ಯೋಚಿಸಿ, ಕಾರ್ಯಪ್ರವೃತ್ತರಾಗುತ್ತೇವೆ.
– ಈರಯ್ಯ, ಪಿಎಸ್ಐ, ಬೆಳ್ಳಾರೆ ಠಾಣೆ
ಜಾಗ ಗುರುತಿಸಿದ್ದೇವೆ
ಬೆಳ್ಳಾರೆ ಪೇಟೆ ಅಭಿವೃದ್ಧಿ ಹೊಂದುತ್ತಿದೆ. ಇಲ್ಲಿ ವ್ಯವಸ್ಥಿತ ಪಾರ್ಕಿಂಗ್ ಅಗತ್ಯವಿದೆ. ಮೂರು ವರ್ಷಗಳಿಂದ ಪ್ರಯತ್ನ ನಡೆಯುತ್ತಿದೆ. ಬೆಳ್ಳಾರೆ ಪೇಟೆಯಲ್ಲಿ ಕೆಲವು ಸ್ಥಳಗಳನ್ನು ಗುರುತಿಸಿ, ಠಾಣೆಗೆ ಮಾಹಿತಿ ನೀಡಲಾಗಿದೆ.
– ಶಕುಂತಳಾ ನಾಗರಾಜ್,
ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ