ಸುಳ್ಯದಲ್ಲಿ ಮರಕ್ಕೆ ಗುದ್ದಿ ಕಮರಿಗೆ ಉರುಳಿದ ಕಾರು
ಪವಾಡಸದೃಶವಾಗಿ ಪಾರಾದ ಪ್ರಯಾಣಿಕರು
Team Udayavani, May 4, 2019, 4:54 PM IST
ಸುಳ್ಯ: ಇಲ್ಲಿನ ಆರಂಬೂರು ಎಂಬಲ್ಲಿ ಶನಿವಾರ ಮುಂಜಾನೆ ಕಾರೊಂದು ಕಮರಿಗೆ ಉರುಳಿಬಿದ್ದ ಘಟನೆ ವರದಿಯಾಗಿದೆ. ಅಪಘಾತಕ್ಕೀಡಾದ ಈ ಕಾರಿನಲ್ಲಿ ಆರು ಜನ ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಕಾರಿನಲ್ಲಿದ್ದವರೆಲ್ಲರೂ ಯಾವುದೇ ಅಪಾಯಗಳಿಲ್ಲದೇ ಪಾರಾಗಿದ್ದಾರೆ.
ನಝೀರ್ ಎಂಬವರ ಕುಟುಂಬ ಶುಕ್ರವಾರ ರಾತ್ರಿ ಬೆಂಗಳೂರಿನಿಂದ ಹೊರಟು ಮಡಿಕೇರಿ ಮಾರ್ಗವಾಗಿ ಊರಿಗೆ ತೆರಳುತ್ತಿದ್ದಾಗ ಸುಳ್ಯದ ಬಳಿ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಕಲ್ಲುಗಳಿಗೆ ಮತ್ತು ಮರವೊಂದಕ್ಕೆ ಢಿಕ್ಕಿ ಹೊಡೆದು ಬಳಿಕ ಕಮರಿಗೆ ಉರುಳಿದೆ.
ಕಮರಿಗೆ ಉರುಳಿಬಿದ್ದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರನ್ನು ಚಲಾಯಿಸುತ್ತಿದ್ದ ನಝೀರ್ ಅವರ ಹಣೆಯ ಭಾಗಕ್ಕೆ ಗಾಯಗಳಾಗಿದ್ದು ಉಳಿದವರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು