ಕಾರು ಢಿಕ್ಕಿ: ದ್ವಿಚಕ್ರ ವಾಹನ ಸವಾರರಿಗೆ ಗಾಯ
Team Udayavani, May 29, 2018, 10:28 AM IST
ಬಂಟ್ವಾಳ: ಫರಂಗಿಪೇಟೆಯಲ್ಲಿ ಮೇ 28ರಂದು ಬೆಳಗ್ಗೆ ನಿಯಂತ್ರಣ ತಪ್ಪಿದ ಕಾರು ಎರಡು ದ್ವಿಚಕ್ರವಾಹನಗಳಿಗೆ ಢಿಕ್ಕಿ ಹೊಡೆದು ಸವಾರರು ಗಾಯಗೊಂಡಿದ್ದಾರೆ.
ಗಾಯಾಳುಗಳಾದ ವಾಮಂಜೂರು ನಿವಾಸಿ ತಿಲಕ್ ಹಾಗೂ ಸಾಲೆತ್ತೂರು ನಿವಾಸಿ ಉಮರ್ ಫಾರೂಕ್ ಅವರನ್ನು ತುಂಬೆ ಮತ್ತು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರಿಬ್ಬರು ಪ್ರತ್ಯೇಕ ದ್ವಿಚಕ್ರ ವಾಹನಗಳಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ದುರ್ಘಟನೆ ನಡೆದಿತ್ತು.
ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದ್ವಿಚಕ್ರ ವಾಹನಗಳು ನಜ್ಜುಗುಜ್ಜಾಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ
Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್
Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ