ಬೆಂಜನಪದವು: ಸ್ಕೂಟರ್ ಗೆ ಕಾರು ಢಿಕ್ಕಿ – ಯುವತಿ ಸಾವು ; ಸವಾರೆ ಗಂಭೀರ
Team Udayavani, Jun 24, 2020, 10:23 PM IST
ಬಂಟ್ವಾಳ: ಇಲ್ಲಿನ ಬಂಟ್ವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಜನಪದವು ಎಂಬಲ್ಲಿ ಸ್ಕೂಟರ್ ಗೆ ಕಾರು ಡಿಕ್ಕಿಯಾಗಿ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಮೃತಪಟ್ಟಿರುವ ದಾರುಣ ಘಟನೆ ಇಂದು ರಾತ್ರಿ ನಡೆದಿದೆ.
ಘಟನೆಯಲ್ಲಿ ಸ್ಕೂಟರ್ ಚಲಾಯಿಸುತ್ತಿದ್ದ ಯುವತಿಗೂ ಗಂಭೀರ ಗಾಯಗಳಾಗಿದ್ದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಲ್ಲಿ ಮೃತಪಟ್ಟ ಯುವತಿಯನ್ನು ಕಡೆಗೋಳಿ ನಿವಾಸಿ ಶ್ಯಾಮಲಾ (23) ಎಂದು ಗುರುತಿಸಲಾಗಿದೆ ಹಾಗೂ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಯುವತಿಯನ್ನು ಈಕೆಯ ಸ್ನೇಹಿತೆ ಹರ್ಷಿತಾ ಎಂದು ಗುರುತಿಸಲಾಗಿದೆ.
ಇವರಿಬ್ಬರೂ ಬಿ.ಸಿ.ರೋಡ್ ನಿಂದ ಬೆಂಜನಪದವು ರಸ್ತೆಯ ಮೂಲಕ ಕಡೆಗೋಳಿ ಮನೆಗೆ ಹೋಗುತ್ತಿದ್ದ ವೇಳೆ ಬೆಂಜನಪದವು ಎಂಬಲ್ಲಿ ಎದುರಿನಿಂದ ಬಂದ ಕಾರು ಇವರ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ.
ಅಪಘಾತದ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದ ರು. ಕೂಡಲೇ ಸ್ಥಳೀಯರು ಅವರಿಬ್ಬರನ್ನು ಆಸ್ಪತ್ರೆಗೆ ದಾಖಲಿಸಿದರೂ ಗಂಭೀರವಾಗಿ ಗಾಯಗೊಂಡಿದ್ದ ಹಿಂಬದಿ ಸವಾರೆ ಶ್ಯಾಮಲಾ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಶ್ಯಾಮಲಾ ಹಾಗೂ ಹರ್ಷಿತಾ ಅವರು ಬಿ.ಸಿ.ರೋಡಿನಲ್ಲಿರುವ ಕ್ಷೇತ್ರ ಸಂಪನ್ಮೂಲ ಕಚೇರಿಯಲ್ಲಿ ಕೆಲಸ ನಿರ್ವಹಿಸಿ ಮನೆಗೆ ವಾಪಾಸಾಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಅಪಘಾತದ ರಭಸಕ್ಕೆ ದ್ವಿಚಕ್ರ ವಾಹನದ ಮುಂಭಾಗ ಸಮಪೂರ್ಣ ಕಳಚಿ ಬಿದ್ದಿದೆ. ಕಾರಿನ ಮುಂಭಾಗಕ್ಕೂ ಹಾನಿಯಾಗಿದ್ದು ಎರಡೂ ವಾಹನಗಳೂ ಈ ಅಪಘಾತದ ತೀವ್ರತೆಗೆ ಮೂಕಸಾಕ್ಷಿಯಾದಂತಿವೆ.
ಅಪಘಾತ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಠಾಣಾ ಎಸ್. ಐ.ರಾಜೇಶ್, ಎ.ಎಸ್.ಐ.ಬಾಲಕೃಷ್ಣ, ಸಿಬ್ಬಂದಿ ಮನೋಹರ ಬೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ