ಸವಣೂರು ಅಟ್ಟೋಳೆಯಲ್ಲಿ ಕಾರು ಪಲ್ಟಿ
Team Udayavani, May 26, 2019, 6:05 AM IST
ಸವಣೂರು: ಸುಬ್ರ ಹ್ಮಣ್ಯ – ಮಂಜೇಶ್ವರ ರಾಜ್ಯ ಹೆದ್ದಾರಿಯ ಸವಣೂರು ಸಮೀಪದ ಅಟ್ಟೋಳೆ ಯಲ್ಲಿ ಕೇರಳ ನೋಂದಣಿಯ ಮಾರುತಿ ಸೆಲೆರಿಯೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ.
ಕಾಣಿಯೂರು ಭಾಗದಿಂದ ಪುತ್ತೂರು ಕಡೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಬಲಬದಿಯ ಬರೆಗೆ ಢಿಕ್ಕಿಯಾಗಿದೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಕಾರಿನಲ್ಲಿ ಕನ್ಯಾನ ಮೂಲದ ಕುಟುಂ ಬವೊಂದರ ಐವರು ಪ್ರಯಾಣಿಸು ತ್ತಿದ್ದು, ಅದರಲ್ಲಿದ್ದ ಪುಟ್ಟ ಮಗುವಿನ ಕಾಲಿಗೆ ತೀವ್ರ ಸ್ವರೂಪದ ಗಾಯಗಳಾ ಗಿವೆ ಹಾಗೂ ಇತರ ನಾಲ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗಾಯಾಳುಗಳನ್ನು ಕಾಣಿಯೂರಿನ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತ ನಡೆದ ಕೂಡ ಲೇ ಆ ದಾರಿಯಲ್ಲಿ ತೆರಳುತ್ತಿದ್ದ ಹಸೈನಾರ್ ಮುಟ್ರ, ಇಬ್ರಾಹಿಂ ಕೂರ ಮತ್ತಿತರರು ತಮ್ಮ ಕಾರಿನಲ್ಲೇ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ. ಸ್ಥಳಕ್ಕೆ ಬೆಳ್ಳಾರೆ ಪೊಲೀ ಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ