“ಉದ್ಯೋಗವಿದ್ದರೆ ಜೀವನ ಸುಧಾರಣೆ’


Team Udayavani, Jul 16, 2019, 5:09 AM IST

udyoga

ಪುತ್ತೂರು: ನಾವು ಪಡೆಯುವ ಶಿಕ್ಷಣವೇ ನಮ್ಮ ನಿಜವಾದ ಆಸ್ತಿ. ಉತ್ತಮ ಶಿಕ್ಷಣ ಪಡೆದು ಜೀವನವನ್ನು ಸರಿಯಾದ ಕ್ರಮದಲ್ಲಿ ನಡೆಸಲು ನಿರ್ದಿಷ್ಟ ಉದ್ಯೋಗ ಬೇಕು ಎಂದು ಪುತ್ತೂರು ಸಹಾಯಕ ಕಮಿಷನರ್‌ ಎಚ್‌. ಕೆ. ಕೃಷ್ಣಮೂರ್ತಿ ಅವರು ಹೇಳಿದರು.

ವಿಶ್ವ ಯುವ ಕೌಶಲ ದಿನದ ಪ್ರಯುಕ್ತ ದೀನ್‌ ದಯಾಳ್‌ ಗ್ರಾಮೀಣ ಕೌಶಲ ಯೋಜನೆಯಡಿ ಸೋಮವಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ಸಭಾ ಭವನದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಉದ್ಘಾ ಟಿಸಿ ಅವರು ಮಾತನಾಡಿದರು.

ಪುತ್ತೂರು ತಾ.ಪಂ., ಈಶ ವಿದ್ಯಾ ಲಯ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಯುವ ಉದ್ಯೋ ಗಾಕಾಂಕ್ಷಿಗಳ ಸೇವಾ ಕೇಂದ್ರ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯ, ರೋಟರಿ ಕ್ಲಬ್‌ ಪುತ್ತೂರು ಯುವ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ವಾಣಿಯನ್‌ ಗಾಣಿಗ ಸಮಾಜ ಸೇವಾ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಯಿತು.

ತೆರೆದುಕೊಂಡಿದೆ ಹೊಸ ಸಾಧ್ಯತೆ
ತಾ.ಪಂ. ನೇತೃತ್ವದಲ್ಲಿ ಹಮ್ಮಿಕೊಂಡಿ ರುವ ಈ ಮೇಳಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಓದುವುದು ಜ್ಞಾನ ಮತ್ತು ಜೀವನ ನಿರ್ವಹಣೆಗಾಗಿ. ಹಿಂದೆ ಸರಕಾರಿ ನೌಕರಿ ಪಡೆದರೆ ಮಾತ್ರ ಉದ್ಯೋಗಸ್ಥ ಎನ್ನುವ ಕಲ್ಪನೆ ಇತ್ತು. ಆದರೆ ಜಾಗತೀಕರಣದ ಬಳಿಕ ಉದ್ಯೋಗಾವಕಾಶಗಳ ಹೊಸ ಸಾಧ್ಯತೆ ತೆರೆದುಕೊಂಡಿದೆ ಎಂದರು.

ಗುರಿ, ಕನಸು ಇರಲಿ
ಕೆಲಸ ಯಾವುದಾದರೂ ಪ್ರಾಮಾಣಿಕವಾಗಿ ದುಡಿಯುವ ಮನಸ್ಸು ಇರಬೇಕು. ಗುರಿ, ಕನಸು ಇದ್ದರೆ ಜೀವನದಲ್ಲಿ ಗೆಲ್ಲಬಹುದು. ಅದಕ್ಕಾಗಿ ಅಂಜಿಕೆ, ಅವಮಾನಗಳನ್ನು ದೂರವಿಟ್ಟು ನಾವು ಮಾಡುವ ಕೆಲಸವನ್ನು ಗೌರವಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಪುತ್ತೂರು ತಾ.ಪಂ. ಅಧ್ಯಕ್ಷ ಕೆ. ರಾಧಾಕೃಷ್ಣ ಬೋರ್ಕರ್‌, ತಾ.ಪಂ. ತನ್ನ ಪರಿಧಿಯೊಳಗೆ ಮಾತ್ರ ಕೆಲಸ ಮಾಡದೆ ಸಾರ್ವಜನಿಕರಿಗೂ ಪ್ರಯೋಜನವಾಗು ವಂತಹ ಕಾರ್ಯ ಕ್ರಮ ಆಯೋಜಿಸುವ ಉದ್ದೇಶ ಇದರ ಹಿಂದಿದೆ. ಮಕ್ಕಳು ಉತ್ತಮ ಉದ್ಯೋಗ ಪಡೆದು ತಂದೆ -ತಾಯಿ ಇಟ್ಟಿರುವ ಭರವಸೆಯನ್ನು ಈಡೇರಿಸ ಬೇಕು ಎಂದರು. ಮುಂದಿನ ವರ್ಷ ಹಲವರನ್ನು ಸೇರಿಸಿಕೊಂಡು ಇನ್ನಷ್ಟು ದೊಡ್ಡ ಮಟ್ಟದಲ್ಲಿ ಉದ್ಯೋಗ ಮೇಳ ಹಮ್ಮಿ ಕೊಳ್ಳಲು ಪ್ರಯತ್ನ ನಡೆಸಲಾಗುವುದು ಎಂದರು.

ತಾ.ಪಂ. ಸದಸ್ಯ ಸಾಜ ರಾಧಾಕೃಷ್ಣ ಆಳ್ವ, ರೋಟರಿ ಕ್ಲಬ್‌ ಪುತ್ತೂರು ಯುವ ಇದರ ಅಧ್ಯಕ್ಷ ಚೇತನ್‌ ಪ್ರಕಾಶ್‌, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಜಗದೀಶ್‌ ಎಸ್‌. ಶುಭಹಾರೈಸಿದರು. ವಾಣಿಯನ್‌/ಗಾಣಿಗ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ. ತಿಮ್ಮಪ್ಪ ಪಾಟಾಳಿ ಉಪಸ್ಥಿತರಿದ್ದರು.

ಈಶ ವಿದ್ಯಾಲಯದ ಪ್ರಾಂಶುಪಾಲ ಎಂ. ಗೋಪಾಲಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾ.ಪಂ. ಇಒ ಜಗದೀಶ್‌ ಎಸ್‌. ಸ್ವಾಗತಿಸಿ, ತಾ.ಪಂ. ಪ್ರಭಾರ ವ್ಯವಸ್ಥಾಪಕ ಶಿವಪ್ರಕಾಶ್‌ ವಂದಿಸಿ,ಜೆಸಿಐ ತರಬೇತುದಾರ ಪಶುಪತಿ ಶರ್ಮ ಕಾರ್ಯಕ್ರಮ ನಿರ್ವಹಿಸಿದರು.

37 ಕಂಪೆನಿಗಳು ಭಾಗಿ
ಉದ್ಯೋಗ ಮೇಳದಲ್ಲಿ ಬೆಂಗಳೂರು, ಮಂಗಳೂರು, ಪುತ್ತೂರಿನ 37 ಕಂಪೆನಿಗಳು ಭಾಗವಹಿಸಿದವು. ಎಸೆಸೆಲ್ಸಿ ಪೂರ್ವದ ಅಭ್ಯರ್ಥಿಗಳಿಂದ ಹಿಡಿದು ಸ್ನಾತಕೋತ್ತರ ಪದವೀಧರರವರೆಗೆ, ಡಿಪ್ಲೊಮಾ, ಎಂಜಿನಿಯರಿಂಗ್‌ ಅಭ್ಯರ್ಥಿಗಳಿಗೂ ಮೇಳದಲ್ಲಿ ಅವಕಾಶ ಕಲ್ಪಿಸಲಾಗಿತ್ತು. ನೂರಾರು ಉದ್ಯೋಗಾಕಾಂಕ್ಷಿಗಳು ಪಾಲ್ಗೊಂಡರು. ಉದ್ಯೋಗಕಾಂಕ್ಷಿಗಳಿಗೆ ಉಪಾಹಾರ, ಊಟದ ವ್ಯವಸ್ಥೆಯನ್ನೂ ಮಾಡಲಾಗಿತ್ತು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.