Belthangady ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ: ಬಿಜೆಪಿ ಖಂಡನೆ
Team Udayavani, Oct 18, 2023, 8:15 PM IST
ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡಿಸಿದ್ದಾರೆ.
ಅರಣ್ಯ ಇಲಾಖೆಯ ಅಧಿಕಾರಿಗಳಿಂದ ದೌರ್ಜನ್ಯಕ್ಕೊಳಗಾದ ಬಡ ಕುಟುಂಬದ ಪರವಾಗಿ ನಿಂತಿರುವ ಶಾಸಕರ ಮೇಲೆ ಸರಕಾರ ಅರಣ್ಯ ಇಲಾಖೆಯ ಅಧಿಕಾರಿಗಳ ಮುಖಾಂತರ ಪ್ರಕರಣ ದಾಖಲಿಸಿದೆ. ಅರಣ್ಯ ಅಧಿಕಾರಿಗಳ ದೌರ್ಜನ್ಯವನ್ನು ಕಂಡಾಗ ನಾವು ಪ್ರಜಾಪ್ರಭುತ್ವ ರಾಜ್ಯದಲ್ಲಿದ್ದೇವಾ ಅಥವಾ ಗೂಂಡಾ ಪ್ರವೃತಿಯ ರಾಜ್ಯದಲ್ಲಿದ್ದೇವಾ ಎಂದು ಸಂಶಯ ಬರುತ್ತಿದೆ.
ಕ್ಷೇತ್ರದ ಬಡ ಕುಟುಂಬದ ಪರವಾಗಿ ನಿಂತು ಅರಣ್ಯ ಅಧಿಕಾರಿಗಳ ದೌರ್ಜನ್ಯವನ್ನು ನಿಲ್ಲಿಸಿದ ಶಾಸಕ ಹರೀಶ್ ಪೂಂಜಾರ ನಡೆ ಸರಿಯಾಗಿದೆ. ಜನರ ಮೇಲೆ ಸರಕಾರಿ ಅಧಿಕಾರಿಗಳು ದೌರ್ಜನ್ಯವೆಸಗಿದಾಗ ಶಾಸಕರು ಕೈಕಟ್ಟಿ ಕೂರಬೇಕಾ? ಸರಕಾರಿ ಅಧಿಕಾರಿಗಳು ಜನರ ಪರವಾಗಿ ಕೆಲಸ ಮಾಡುವುದನ್ನು ಬಿಟ್ಟು ಸರಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿರುವುದು ದುರಾದೃಷ್ಟ.
ಶಿವಮೊಗ್ಗದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಮೇಲೆ ಕಲ್ಲು ಎಸೆದ ಮತಾಂಧರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲು ರಾಜ್ಯ ಸರಕಾರ ಹಿಂದೇಟು ಹಾಕಿದ್ದರು. ಸರಕಾರಿ ಅಧಿಕಾರಿಗಳಿಗೆ ಜನರೇ ರಕ್ಷಣೆ ನೀಡುವುದು ಹೊರತು ಸರಕಾರ ರಕ್ಷಣೆ ನೀಡುವುದಿಲ್ಲ. ಆದುದರಿಂದ ಜನರ ಜೊತೆ ನಿಂತ ಶಾಸಕ ಹರೀಶ್ ಪೂಂಜಾರವರ ಮೇಲೆ ದಾಖಲಿಸಿದ ಕರ್ತವ್ಯಕ್ಕೆ ಅಡ್ಡಿ ಮಾಡಿದರೆಂಬ ಸುಳ್ಳು ಪ್ರಕರಣವನ್ನು ಸರಕಾರ ಕೂಡಲೇ ಕೈಬಿಡಬೇಕೆಂದು ಸುದರ್ಶನ ಮೂಡುಬಿದಿರೆ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ
Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್ ಗಾಂಧಿ
Hampankatta: ಪಾರ್ಕಿಂಗ್ ಸಮಸ್ಯೆಗೆ ‘ಮಲ್ಟಿ ಲೆವೆಲ್’ ಉತ್ತರ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.