ಯಶಸ್ವೀ ಚಾಲಕರಿಗೆ ನಗದು ಪುರಸ್ಕಾರ

ನವೆಂಬರ್‌ನಲ್ಲಿ ಚಾಲಕರ ದಿನಾಚರಣೆ ಸಂದರ್ಭ ಗೌರವಿಸಲು ತೀರ್ಮಾನ

Team Udayavani, Oct 21, 2019, 5:04 AM IST

AUTO-A

ಸಾಂದರ್ಭಿಕ ಚಿತ್ರ.

ಮಂಗಳೂರು: ಕರಾವಳಿಯ ಎರಡು ಜಿಲ್ಲೆಗಳಲ್ಲಿ ಪ್ರಾಮಾಣಿಕತೆ ಮತ್ತು ಅಪಘಾತರಹಿತವಾಗಿ ವಾಹನ ಚಲಾಯಿಸುತ್ತಿರುವ ಅರ್ಹ 20 ವೃತ್ತಿಪರ ಚಾಲಕರಿಗೆ ತಲಾ 25 ಸಾವಿರ ರೂ. ಪುರಸ್ಕಾರ ನೀಡಿ ಪ್ರೋತ್ಸಾಹಿಸಲು ಸಾರಿಗೆ ಇಲಾಖೆಯು ಹೊಸ ಯೋಜನೆ ರೂಪಿಸಿದೆ.

ರಾಜ್ಯದ ವಿವಿಧ ವಲಯಗಳ ಚಾಲಕರ ಉತ್ತಮ ಸೇವೆಯನ್ನು ಗುರುತಿಸುವುದಕ್ಕಾಗಿ ರಾಜ್ಯ ಸರಕಾರವು ನವೆಂಬರ್‌ನಲ್ಲಿ ಚಾಲಕರ ದಿನ ಆಚರಿಸಲು ಸರಕಾರ ನಿರ್ಧರಿಸಿದೆ. ಮ್ಯಾಕ್ಸಿಕ್ಯಾಬ್‌, ಬಸ್‌, ಸರಕು ಸಾಗಣೆ ವಾಹನ, ಟ್ಯಾಕ್ಸಿ ಮತ್ತು ಅಟೋರಿಕ್ಷಾ- ಈ ಐದು ವಿಧದ ವಾಹನಗಳಲ್ಲಿ ವೃತ್ತಿಪರವಾಗಿ ದುಡಿಯುತ್ತಿರುವ ಅರ್ಹ ಚಾಲಕರು ಈ ಪುರಸ್ಕಾರ ಪಡೆಯಲಿದ್ದಾರೆ. ಒಂದು ವಿಧದ ವಾಹನದಲ್ಲಿ ತಲಾ ಇಬ್ಬರಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಟ್ಟು 20 ಪ್ರಾಮಾಣಿಕ ಮತ್ತು ಅಪಘಾತ ರಹಿತ ಚಾಲಕರನ್ನು ತಲಾ 25 ಸಾವಿರ ರೂ. ನಗದು ಬಹುಮಾನ ದೊಂದಿಗೆ ಗೌರವಿಸಲು ಉದ್ದೇಶಿಸಲಾಗಿದೆ.

ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯು ಈ ಆಯ್ಕೆ ನಡೆಸಲಿದೆ. ಎರಡು ಜಿಲ್ಲೆಗಳಲ್ಲಿ ಸುಮಾರು 2 ಸಾವಿರ ಮಂದಿ ಬಸ್‌ ಚಾಲಕರು ಸೇರಿದಂತೆ 5 ಸಾವಿರಕ್ಕೂ ಅಧಿಕ ವೃತ್ತಿಪರ ಚಾಲಕರು ವಿವಿಧ ವಲಯಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಪ್ರಶಸ್ತಿಗೆ ಮಾನದಂಡಗಳೇನು?
ಚಾಲನಾ ಪರವಾನಿಗೆ ಹೊಂದಿರುವುದು, 45 ವರ್ಷ ವಯಸ್ಸಿನ ಮಿತಿ, ಚಾಲನಾ ಪರವಾನಿಗೆ 20 ವರ್ಷಗಳಿಂದ ಸಿಂಧುವಾಗಿರುವುದು, ಅಮಾನತು ಗೊಂಡಿರದೇ ಇರುವುದು, ರಸ್ತೆ ಅಪಘಾತ ನಡೆಸದೆ ಇರುವುದು ಮತ್ತು ಪೊಲೀಸ್‌ ಪ್ರಕರಣ ದಾಖಲಾಗದೆ ಇರುವುದು ಪ್ರಶಸ್ತಿಗೆ ಅರ್ಹರಾಗಲು ಮಾನದಂಡಗಳು.

ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯಿಂದ ಆಯ್ಕೆ
ಎರಡೂ ಜಿಲ್ಲೆಗಳ ಮಾನ್ಯತೆ ಹೊಂದಿದ ಮ್ಯಾಕ್ಸಿಕ್ಯಾಬ್‌, ಬಸ್‌, ಸರಕು ಸಾಗಣೆ ವಾಹನ, ಟ್ಯಾಕ್ಸಿ ಮತ್ತು ರಿಕ್ಷಾ ಯೂನಿಯನ್‌ಗಳ ಮೂಲಕ ಸಾರಿಗೆ ಇಲಾಖೆಯು ಆಯ್ಕೆ ನಡೆಸಲಿದೆ. ಇದಕ್ಕಾಗಿ ನಿಗದಿತ ಸಂಘಟನೆಯವರು ಆಯ್ದ ಅಭ್ಯರ್ಥಿಗಳ ವಿವರಗಳನ್ನು ಇಲಾಖೆಗೆ ನೀಡಬೇಕು; ಬಳಿಕ ಅಭ್ಯರ್ಥಿಯ ವಿವರ-ದಾಖಲೆಗಳನ್ನು ಆರ್‌ಟಿಒ ಪರಿಶೀಲಿಸುತ್ತದೆ. ಅನಂತರ ಜಿಲ್ಲಾಧಿಕಾರಿ ಅಧ್ಯಕ್ಷತೆಯ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಒಂದು ವಾಹನ ವರ್ಗದಿಂದ ತಲಾ ಇಬ್ಬರನ್ನು ಪ್ರಶಸ್ತಿಗೆ ಆಯ್ಕೆ ಮಾಡುತ್ತದೆ.

ಸೂಕ್ತ ಮಾಹಿತಿ ಪಡೆದು ಕ್ರಮ
ಪ್ರಾಮಾಣಿಕ ಮತ್ತು ಅಪಘಾತರಹಿತವಾಗಿ ಸೇವೆ ಸಲ್ಲಿಸಿರುವ ವಿವಿಧ ವಲಯಗಳ ಚಾಲಕರನ್ನು ಆಯ್ಕೆ ಮಾಡಿ ನಗದು ಬಹುಮಾನ ಜತೆಗೆ ಮುಂದಿನ ತಿಂಗಳು ಪುರಸ್ಕರಿಸುವ ಸರಕಾರದ ಯೋಜನೆಯ ಬಗ್ಗೆ ಸೂಕ್ತ ಮಾಹಿತಿಯನ್ನು ಸಾರಿಗೆ ಇಲಾಖೆಯಿಂದ ಪಡೆಯಲಾಗುವುದು. ಸ್ಥಳೀಯ ವಾಹನಗಳ ಸಂಘಟನೆಗಳಿಂದ ಆಯ್ದ ಅಭ್ಯರ್ಥಿಗಳ ವಿವರ ಪಡೆದು ಅರ್ಹ ಅಭ್ಯರ್ಥಿಗಳನ್ನು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಆಯ್ಕೆ ಮಾಡಲಿದೆ.
– ರಾಮಕೃಷ್ಣ ರೈ,ಆರ್‌ಟಿಒ
ಉಡುಪಿ, ಹೆಚ್ಚುವರಿ ಪ್ರಭಾರ ಆರ್‌ಟಿಒ, ಮಂಗಳೂರು.

-ದಿನೇಶ್‌ ಇರಾ

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.