ತನಿಖೆ ವೇಳೆ ಕೈ ಕೊಡುತ್ತಿರುವ ಸಿಸಿ ಕೆಮರಾಗಳು : ಕಾಯಿದೆ ಪ್ರಕಾರ ಸಿಸಿ ಕೆಮರಾ ಹೀಗಿರಬೇಕು 

ಸಾರ್ವಜನಿಕ ಸುರಕ್ಷೆ ಅಧಿನಿಯಮ ಕಟ್ಟುನಿಟ್ಟುಗೊಳಿಸಲು ನಿರ್ಧಾರ

Team Udayavani, Aug 7, 2022, 10:39 AM IST

thumb cctv 1

ಮಂಗಳೂರು : ಅಪರಾಧ ಕೃತ್ಯ ಗಳನ್ನು ಪತ್ತೆಹಚ್ಚಿ ಪ್ರಕರಣ ಭೇದಿಸಲು ನೆರವಾಗ ಬೇಕಾದ ಸಿಸಿ ಕೆಮರಾಗಳು ತನಿಖೆ ವೇಳೆ ಪೊಲೀಸರಿಗೆ ಕೈ ಕೊಡುತ್ತಿವೆ. ಇದಕ್ಕೆ ಕಾರಣ ಕಡಿಮೆ ಗುಣಮಟ್ಟದ ಕೆಮರಾಗಳು ಮತ್ತು ನಿರ್ವಹಣೆಯಲ್ಲಿ ನಿರ್ಲಕ್ಷ್ಯ.

ಸಾರ್ವಜನಿಕ ಸ್ಥಳ, ವಾಣಿಜ್ಯ ಕಟ್ಟಡಗಳಲ್ಲಿ ಅಳವಡಿಸಿರುವ ಕೆಮರಾಗಳ ಪೈಕಿ ಹೆಚ್ಚಿನವುಗಳಲ್ಲಿ ದೃಶ್ಯಗಳು ಸೆರೆಯಾಗುತ್ತಿಲ್ಲ. ಸೆರೆಯಾಗಿದ್ದರೂ ಅಸ್ಪಷ್ಟವಾಗಿರುತ್ತದೆ. ಹಾಗಾಗಿ ಪೊಲೀಸರು “ಕರ್ನಾಟಕ ಸಾರ್ವಜನಿಕ ಸುರಕ್ಷೆಯ (ಕ್ರಮಗಳ) ಜಾರಿ ಅಧಿನಿಯಮ 2017’ನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಂದಾಗಿದ್ದು, ಅಲ್ಲಿ ಸೂಚಿಸಿರುವ ಮಾದರಿಯಲ್ಲೇ ಸಿಸಿ ಕೆಮರಾ ಅಳವಡಿಕೆಯಾಗುವಂತೆ ಕ್ರಮ ಕೈಗೊಳ್ಳಲಿದ್ದಾರೆ.

30 ದಿನ ಮಾಹಿತಿ ಸಂಗ್ರಹವಿರಬೇಕು
ಅಧಿನಿಯಮದ ಪ್ರಕಾರ ದಿನಕ್ಕೆ ಸುಮಾರು 500ಕ್ಕಿಂತ ಹೆಚ್ಚು ಬಾರಿ ಜನರ ಓಡಾಟವಿರುವ ಅಥವಾ ಒಂದೇ ಬಾರಿಗೆ 100 ಮಂದಿಯ ಓಡಾಟವಿರುವ ಕಟ್ಟಡ/ಮಳಿಗೆಗಳಲ್ಲಿ ಹೈ ರೆಸೊಲ್ಯೂಷನ್‌ನ, 30 ದಿನಗಳವರೆಗೆ ದೃಶ್ಯಾವಳಿ ಸಂಗ್ರಹಿಸಿಟ್ಟುಕೊಳ್ಳಬಲ್ಲ ಸಿಸಿ ಕೆಮರಾ ಕಡ್ಡಾಯ.

3,224 ಹೈ ರೆಸೊಲ್ಯುಷನ್‌ ಕೆಮರಾ
ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ 15 ಕಾನೂನು ಮತ್ತು ಸುವ್ಯವಸ್ಥೆಯ ಠಾಣೆಗಳು, 4 ಸಂಚಾರ ಠಾಣೆಗಳು ಮತ್ತು ಒಂದು ಮಹಿಳಾ ಠಾಣೆ ಇವೆ. ಈ ವ್ಯಾಪ್ತಿಯೊಳಗಿನ ವಿವಿಧ ಕಟ್ಟಡಗಳಲ್ಲಿ ಒಟ್ಟು 20,870 ಸಿಸಿ ಕೆಮರಾಗಳಿವೆ. ಆದರೆ ಇದರಲ್ಲಿ ಹೈ ರೆಸೊಲ್ಯೂಷನ್‌ ಹೊಂದಿರುವ ಸಿಸಿ ಕೆಮರಾಗಳು 3,224 ಮಾತ್ರ. ಒಂದು ತಿಂಗಳ ಸ್ಟೋರೇಜ್‌ ಸಾಮರ್ಥ್ಯ ಹೊಂದಿರುವ ಸಿಸಿ ಕೆಮರಾಗಳ ಸಂಖ್ಯೆ 1,074 ಮಾತ್ರ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇತ್ತೀಚಿನ ದಿನಗಳಲ್ಲಿ ನಡೆದಿರುವ ಕೆಲವು ಅಪರಾಧ ಕೃತ್ಯಗಳನ್ನು ಭೇದಿಸುವ ಸಂದರ್ಭ ಸಿಸಿ ಕೆಮರಾಗಳಿಂದ ನಿರೀಕ್ಷಿತ ಪ್ರಯೋಜನ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಸಿಸಿ ಕೆಮರಾಗಳ ಅಳವಡಿಕೆಯ ಬಗ್ಗೆಯೂ ಹೆಚ್ಚು ಆದ್ಯತೆ ನೀಡಲು ಪೊಲೀಸರು ಮುಂದಾಗಿದ್ದಾರೆ.

ಇದನ್ನೂ ಓದಿ : ಮೈಸೂರು ದಸರಾ: ಮಳೆಯ ನಡುವೆಯೇ ಗಜ ಪಯಣಕ್ಕೆ ಸಂಭ್ರಮದ ಚಾಲನೆ

ಠಾಣೆ ವ್ಯಾಪ್ತಿಯಲ್ಲಿ ಗುಣಮಟ್ಟದ ಕೆಮರಾ
ಜಿಲ್ಲೆಯ ಎಲ್ಲ ಪೊಲೀಸ್‌ ಠಾಣೆ, ಸುತ್ತಮುತ್ತ ಉತ್ತಮ ಗುಣಮಟ್ಟದ ಸಿಸಿ ಕೆಮರಾಗಳನ್ನು ಅಳವಡಿಸಲಾಗಿದ್ದು, ಅವುಗಳ ನಿರ್ವಹಣೆಯನ್ನು ಕೂಡ ಸಮರ್ಪಕವಾಗಿ ನಡೆಸುವಂತೆ ಸೂಚಿಸಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಕಾಯಿದೆ ಪ್ರಕಾರ ಸಿಸಿ ಕೆಮರಾ ಹೀಗಿರಬೇಕು
– ರೆಸೊಲ್ಯೂಷನ್‌ – ಫ‌ುಲ್‌ ಎಚ್‌ಡಿ 1920ಗಿ1080 ಅಥವಾ ಅದಕ್ಕಿಂತ ಹೆಚ್ಚು
– ಕನಿಷ್ಠ ಇಲ್ಯುಮಿನೇಷನ್‌- 0.01 ಎಲ್‌ಯುಎಕ್ಸ್‌ ಅಥವಾ ಅದಕ್ಕಿಂತ ಹೆಚ್ಚು
– ಲೆನ್ಸ್‌- ಫೋಕಲ್‌ ಲೆಂತ್‌ 3.6 ಎಂಎಂ ಅಥವಾ ಅದಕ್ಕಿಂತ ಹೆಚ್ಚು
– ವ್ಯಾಪ್ತಿ- ಐಆರ್‌ ಎಲ್‌ಇಡಿ (ಇನ್‌ಬಿಲ್ಟ್ ಐಆರ್‌)- 50 ಯಾರ್ಡ್ಸ್‌ ಅಥವಾ ಹೆಚ್ಚು
– ಪ್ಲಾಟ್‌ಫಾರ್ಮ್ ವೀಡಿಯೋ ಫಾಮ್ಯಾìಟ್‌- ಒಎನ್‌ವಿಐಎಫ್ ಕಂಪ್ಲ ಯಂಟ್‌ ಆರ್‌ ಈಕ್ವಲೆಂಟ್‌ (ಎಚ್‌. 264 ಕಂಪ್ರಶನ್‌)
– ಸ್ಟೋರೇಜ್‌ ಸಾಮರ್ಥ್ಯ (ಎನ್‌ವಿಆರ್‌)- ಕನಿಷ್ಠ 30 ದಿನಗಳು
– ಭದ್ರತೆಗಾಗಿ ಅಳವಡಿಸುವ ಸಿಸಿಟಿವಿ ಕೆಮರಾ ಅಥವಾ ಇತರ ಉಪಕರಣಗಳ ನಿರ್ವಹಣೆಗೆ ಪ್ರತೀ ಸಂಸ್ಥೆಯು ತಜ್ಞ ಸಿಬಂದಿ ಅಥವಾ ಏಜೆನ್ಸಿಯ ಸಿಬಂದಿ ಯನ್ನು ಇಟ್ಟುಕೊಂಡಿರಬೇಕು.

ಸಾರ್ವಜನಿಕ ಸುರಕ್ಷ ಕ್ರಮಗಳ ಬಗ್ಗೆ ಈಗಾಗಲೇ ಕಟ್ಟಡ ಮಾಲಕರಿಗೆ ಸೂಚನೆ ನೀಡಲಾಗಿದೆ. ಉಲ್ಲಂಘನೆ ಮಾಡಿದವರಿಗೆ ನೋಟಿಸ್‌ ನೀಡಿ ಅಗತ್ಯ ಕ್ರಮ ಕೈಗೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ.
– ದಿನೇಶ್‌ ಕುಮಾರ್‌, ಡಿಸಿಪಿ, ಮಂಗಳೂರು

ಸಾರ್ವಜನಿಕ ಸುರಕ್ಷಾ ಕಾಯಿದೆ ಪಾಲಿಕೆ ಹಾಗೂ ಇತರ ನಗರ ಸ್ಥಳೀಯ ಸಂಸ್ಥೆಗಳಿಗೆ ಅನ್ವಯ ವಾಗುತ್ತದೆ. ಆದರೂ ಜಿಲ್ಲಾ ಪೊಲೀಸ್‌ ವ್ಯಾಪ್ತಿಯ ಇತರ ಕಡೆಗಳಲ್ಲಿಯೂ ಕಟ್ಟಡ ಮತ್ತಿತರ ಆಯಕಟ್ಟಿನ ಸ್ಥಳಗಳಲ್ಲಿ ಉತ್ತಮ ಗುಣಮಟ್ಟದ ಸಿಸಿ ಕೆಮರಾ ಅಳವಡಿಸಲು ಸಾರ್ವಜನಿಕರಿಗೆ ಮನವಿ ಮಾಡಿದ್ದೇವೆ.
-ಹೃಷಿಕೇಶ್‌ ಸೋನಾವಣೆ, ಎಸ್‌ಪಿ, ದ.ಕ.

ಮಂಗಳೂರು ನಗರದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆಯಡಿ 14 ಸ್ಮಾರ್ಟ್‌ಪೋಲ್‌ಗ‌ಳಲ್ಲಿ ತಲಾ 5ರಂತೆ ಒಟ್ಟು 70 ಹೈ ರೆಸೊಲ್ಯೂಷನ್‌ ಕೆಮರಾಗಳಿವೆ. ಇದರಲ್ಲಿ ಪಿಟಿಝೆಡ್‌ ಕೆಮರಾ ಕೂಡ ಇದೆ. ಅಲ್ಲದೆ ಮುಂದಿನ ಹಂತದಲ್ಲಿ ಎಎನ್‌ಪಿಆರ್‌ (ಆಟೋಮ್ಯಾಟಿಕ್‌ ನಂಬರ್‌ಪ್ಲೇಟ್‌ ರೆಕಾರ್ಡರ್‌) ಕೆಮರಾ, ಆರ್‌ಎಲ್‌ವಿಡಿ (ರೆಡ್‌ಲೈಟ್‌ ವಯಲೇಶನ್‌ ಡಿಟೆಕ್ಟರ್‌) ಮೊದಲಾದವುಗಳನ್ನು ಅಳವಡಿಸಲಾಗುವುದು. ಇದಕ್ಕಾಗಿ 12 ಸ್ಥಳಗಳನ್ನು ಗುರುತಿಸಲಾಗಿದೆ. ಹೆಚ್ಚಿನ ಕೆಮರಾ ಅಳವಡಿಕೆಗೆ ಪೊಲೀಸರು ಕೂಡ ಮನವಿ ಮಾಡಿದ್ದಾರೆ.
– ಅರುಣ್‌ ಪ್ರಭಾ, ಮಂಗಳೂರು ಸ್ಮಾರ್ಟ್‌ ಸಿಟಿ ಜನರಲ್‌ ಮ್ಯಾನೇಜರ್‌

– ಸಂತೋಷ್‌ ಬೆಳ್ಳಿಬೆಟ್ಟು

ಟಾಪ್ ನ್ಯೂಸ್

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.