ಪುತ್ತೂರು: ಹೆಚ್ಚಿನ ಸಿಸಿ ಕೆಮರಾ ಕಾರ್ಯ ಸ್ಥಗಿತ

ದುರಸ್ತಿ ಮಾಡಲು ನಗರಸಭೆಗೆ ಪತ್ರ ಬರೆದ ಪೊಲೀಸ್‌ ಇಲಾಖೆ

Team Udayavani, Apr 12, 2022, 9:58 AM IST

cc-camera

ಪುತ್ತೂರು : ನಗರದ ಆಯಕಟ್ಟಿನ ಸ್ಥಳಗಳಲ್ಲಿ ಕಣ್ಗಾವಲಿಗಾಗಿ ಪೊಲೀಸ್‌ ಹಾಗೂ ನಗರಸಭೆ ಸಹಕಾರ ದಲ್ಲಿ ಅಳವಡಿಸಿರುವ ಸಿಸಿ ಕೆಮರಾಗಳ ಪೈಕಿ ಬಹುತೇಕ ಕೆಟ್ಟು ಹೋಗಿದ್ದು ದುರಸ್ತಿ ಮಾಡುವಂತೆ ಪೊಲೀಸ್‌ ಇಲಾಖೆಯು ನಗರಸಭೆಗೆ ಪತ್ರ ಬರೆದಿದೆ. ಬೊಳುವಾರು, ದರ್ಬೆ, ಕೆಎಸ್‌ ಆರ್‌ಟಿಸಿ ಬಸ್‌ ನಿಲ್ದಾಣ ಸಂಪರ್ಕ ರಸ್ತೆ ಸೇರಿದಂತೆ ವಿವಿಧ ಭಾಗಗಳಲ್ಲಿ ಸಿಸಿ ಕೆಮರಾ ಅಳವಡಿಸಿದ್ದು ಹೆಚ್ಚಿನವು ನಿರ್ವಹಣೆ ಇಲ್ಲದೆ ಕಾರ್ಯಾಚರಣೆ ಸ್ಥಗಿತಗೊಳಿಸಿದೆ.

ಕಳ್ಳರ ಕರಾಮತ್ತು

ಸಿಸಿ ಕೆಮರಾ ಇಲ್ಲದ ಕಾರಣ ಕಳ್ಳರ ಕುರುಹು ಪತ್ತೆ ಹಚ್ಚುವುದು ಪೊಲೀಸರಿಗೆ ಹರ ಸಾಹಸವಾಗಿ ಪರಿಣಮಿಸಿದೆ. ರಾಜ್ಯ ಹೆದ್ದಾರಿಗಳಲ್ಲಿಯೂ ರಾತ್ರಿ ಹೊತ್ತಿನಲ್ಲಿ ಕೆಲವು ಆಯಕಟ್ಟಿನ ಸ್ಥಳಗಳಲ್ಲಿ ಅಪರಿಚಿತ ವಾಹನಗಳು ದ್ವಿಚಕ್ರ ವಾಹನ ಹಾಗೂ ಲಘು ವಾಹನಗಳಿಗೆ ಹಿಟ್‌ಆ್ಯಂಡ್‌ ರನ್‌ ಮಾಡಿ ಪಲಾಯನ ಮಾಡುವ ಘಟನೆಗಳೂ ಹೆಚ್ಚಾಗುತ್ತಿವೆ. ಆದರೆ ಈ ಕಡೆಗಳಲ್ಲೂ ಸಿಸಿ ಕೆಮರಾಗಳು ಕಾರ್ಯಾಚರಿಸದ ಕಾರಣ ಇಂಥಹ ಪ್ರಕರಣಗಳನ್ನೂ ಪತ್ತೆಹಚ್ಚುವುದು ಕಷ್ಟ ಸಾಧ್ಯವಾಗುತ್ತಿದೆ. ಇದೀಗ ಪುತ್ತೂರು ಜಾತ್ರೆಯು ಆರಂಭಗೊಂಡಿದ್ದು ಸುರಕ್ಷತೆ ದೃಷ್ಟಿಯಿಂದ ಸಿಸಿ ಕೆಮರಾದ ಅಗತ್ಯ ಇರುವುದರಿಂದ ನಗರಾಡಳಿತ ತತ್‌ಕ್ಷಣ ದುರಸ್ತಿಗೆ ಕ್ರಮ ಕೈಗೊಳ್ಳಬೇಕಿದೆ.

ಸ್ವಚ್ಛ ಪರಿಸರಕ್ಕೂ ಅನುಕೂಲ ನಗರದಲ್ಲಿ ಸ್ವಚ್ಛತೆ ಕಾಪಾಡುವ ಉದ್ದೇಶಕ್ಕೂ ಸಿಸಿ ಕೆಮರಾಗಳನ್ನು ಬಳಸಲಾಗುತ್ತಿದ್ದು ಅಲ್ಲಲ್ಲಿ ಕಸ, ತ್ಯಾಜ್ಯ ಎಸೆಯುವ ಕಿಡಿ ಗೇಡಿಗಳನ್ನು ಪತ್ತೆ ಮಾಡಲು ಇದರ ದೃಶ್ಯಗಳು ಆಧಾರವಾಗಿದೆ. ಹಲವೆಡೆ ಕೈ ಕೊಟ್ಟಿರುವ ಕಾರಣ ಕಾರ್ಯಾಚರಣೆಗೂ ತೊಡಕು ಉಂಟಾಗಿದೆ.

ಶೀಘ್ರ ದುರಸ್ತಿ

ಸಾರ್ವಜನಿಕ ಸೇವೆಗೆ ಅನುಕೂಲವಾಗುವಂತೆ ನಗರಸಭೆ ವತಿಯಿಂದ ಅಳವಡಿಸಿರುವ ಸಿಸಿ ಕೆಮರಾಗಳ ದುರಸ್ತಿ, ನಿರ್ವಹಣೆ ಮತ್ತು ಹೊಸದಾಗಿ ಅಳವಡಿಸಿ ನಿರ್ವಹಿಸಲು ನಗರ ಠಾಣಾ ಪೊಲೀಸ್‌ ನಿರೀಕ್ಷಕರು ನಗರಸಭೆಗೆ ಪತ್ರ ಬರೆದಿದ್ದು ಅದರಂತೆ ದುರಸ್ತಿ ನಡೆಸಲು ನಿರ್ಧರಿಸಲಾಗಿದೆ. ಜೀವಂಧರ್‌ ಜೈನ್‌, ಅಧ್ಯಕ್ಷ, ನಗರಸಭೆ ಪುತ್ತೂರು

ಗಮನಕ್ಕೆ ತರಲಾಗಿದೆ

ನಗರದ 46 ಕಡೆಗಳಲ್ಲಿ ಸಿಸಿ ಕೆಮರಾ ಇದ್ದು ಅವುಗಳಲ್ಲಿ ಅಂದಾಜು 28 ಕೆಮರಾ ಹಾಳಾಗಿದೆ. ಇದರ ದುರಸ್ತಿಗಾಗಿ ನಗರಸಭೆಯ ಗಮನಕ್ಕೆ ತರಲಾಗಿದೆ. ರಾಜೇಶ್‌ ಕೆ.ವಿ., ಎಸ್‌ಐ, ನಗರ ಠಾಣೆ ಪುತ್ತೂರು

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.