ಉಳ್ಳಾಲ ಸೇತುವೆಗೆ ಸಿಸಿ ಕೆಮರಾ, ತಂತಿ ಬೇಲಿ: ಮುಡಾ ಯೋಜನೆ

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ; ತಡೆಗೆ ಜಿಲ್ಲಾಡಳಿತ ಕ್ರಮ

Team Udayavani, Mar 5, 2020, 4:31 AM IST

netravati-river

ಮಹಾನಗರ: ಆತ್ಮಹತ್ಯೆಯ ತಾಣವಾಗುತ್ತಿರುವ ಉಳ್ಳಾಲ ಸೇತುವೆಗೆ ಕಬ್ಬಿಣದ ತಂತಿ ಬೇಲಿ ನಿರ್ಮಾಣ ಮತ್ತು ಸಿಸಿ ಕೆಮರಾ ಅಳವಡಿಸುವ ಯೋಜನೆ ಸಾಕಾರಗೊಳ್ಳುವ ಕಾಲ ಸನ್ನಿಹಿತವಾಗಿದ್ದು, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಮುಂದೆ ಬಂದಿದೆ.

ರಾ.ಹೆ. 66ರ ಉಳ್ಳಾಲ ಸೇತುವೆಗೆ ಎರಡೂ ಬದಿ ಕಬ್ಬಿಣದ ತಂತಿ (ತಡೆ) ಬೇಲಿಯನ್ನು ನಿರ್ಮಿಸುವ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಕಡೆ ಯಿಂದ ಪ್ರಯತ್ನ ನಡೆಯುತ್ತಿರುವಂತೆಯೇ ಇದನ್ನು ಲೋಕೋಪಯೋಗಿ ಇಲಾಖೆಯ ಮುಖಾಂತರ ಮಾಡಿಸಬ ಹುದೇ ಎಂದು ಶಾಸಕ ವೇದವ್ಯಾಸ ಕಾಮತ್‌ ಪರಿಶೀಲಿಸಿದ್ದರು. ಈ ಎರಡೂ ಸಂಸ್ಥೆಗಳಿಂದ ಶೀಘ್ರ ಆಗುವ ಸಾಧ್ಯತೆ ಇಲ್ಲದಿರುವುದನ್ನು ಮನಗಂಡ ಜಿಲ್ಲಾಡಳಿತ ಮುಡಾದ ಮೂಲಕ ಕೈಗೆತ್ತಿಕೊಳ್ಳಲು ತೀರ್ಮಾನಿಸಿದೆ.

ಶಾಸಕ ಕಾಮತ್‌, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌, ಮುಡಾ ಆಯುಕ್ತ ದಿನೇಶ್‌ ಕುಮಾರ್‌ ಮತ್ತು ಪೊಲೀಸ್‌ ಅಧಿಕಾರಿಗಳು ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಿ ಅಂದಾಜು 45 ಲಕ್ಷ ರೂ. ಗಳ ಪ್ರಸ್ತಾವನೆ ಸಿದ್ಧಪಡಿಸಿದ್ದಾರೆ.

ಇದನ್ನು ಶನಿವಾರ ಮಂಗಳೂರಿಗೆ ಭೇಟಿ ನೀಡಿದ್ದ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್‌ ಗಮನಕ್ಕೆ ತಂದು ಒಪ್ಪಿಗೆ ಪಡೆಯಲಾಗಿದೆ. ಶೀಘ್ರವೇ ನಡೆಯುವ ಮುಡಾ ಸಭೆಯಲ್ಲಿ ಅಂತಿಮಗೊಳಿಸಲು ತೀರ್ಮಾನಿಸಲಾಗಿದೆ.

ಕೆಫೆ ಕಾಫಿ ಡೇ ಸ್ಥಾಪಕ ಸಿದ್ಧಾರ್ಥ 2019ರ ಜು. 29ರಂದು ಉಳ್ಳಾಲ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಹಲ ವರು ಆತ್ಮಹತ್ಯೆಗೆ ಈ ತಾಣವನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಸೇತು ವೆಯ ಎರಡೂ ಬದಿ ತಡೆ ಬೇಲಿ ನಿರ್ಮಿಸುವಂತೆ ಮಂಗಳೂರು ಪೊಲೀಸ್‌ ಕಮಿಷನ ರೆ ಟ್‌ನಿಂದ ಎನ್‌ಎಚ್‌ಎಐಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

6 ಮಂದಿ ಆತ್ಮಹತ್ಯೆ, ಇಬ್ಬರಿಂದ ಪ್ರಯತ್ನ
ಸಿದ್ಧಾರ್ಥ ಆತ್ಮಹತ್ಯೆ ಬಳಿಕ 7 ತಿಂಗಳ ಅವಧಿಯಲ್ಲಿ ಉಳ್ಳಾಲ ಸೇತುವೆಯಿಂದ ನದಿಗೆ ಹಾರಿ ಓರ್ವ ಯುವತಿ ಸೇರಿದಂತೆ 6 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರಲ್ಲಿ ಫೆ. 16ರಂದು ಬಂಟ್ವಾಳದ ಶಂಭೂರಿನ ಗೋಪಾಲಕೃಷ್ಣ ರೈ (45) ಅವರು ಪುತ್ರ ನಮೀಶ್‌ ರೈ ಜತೆ ಆತ್ಮಹತ್ಯೆ ಮಾಡಿರುವುದೂ ಸೇರಿದೆ. ಇಬ್ಬರನ್ನು ರಕ್ಷಿಸಲಾಗಿದೆ.

ಯೋಜನೆಯಲ್ಲಿ ಏನೇನಿದೆ?
ಉಳ್ಳಾಲ ಸೇತುವೆ 840 ಮೀ. ಉದ್ದವಿದ್ದು, ಎರಡೂ ದಿಕ್ಕುಗಳಲ್ಲಿ (ಉತ್ತರ ಮತ್ತು ದಕ್ಷಿಣ) 400 ಮೀ. ದೂರದ ವರೆಗಿನ ಚಿತ್ರವನ್ನು ಸೆರೆ ಹಿಡಿಯುವ ಸಾಮರ್ಥ್ಯ ಇರುವ ಹೈ ರೆಸೊಲ್ಯೂಶನ್‌ ಸಿಸಿ ಕೆಮರಾ, ಸೇತುವೆಯ ಎರಡೂ ಬದಿ ಎಲ್‌ ಶೇಪ್‌ನಲ್ಲಿ ಎತ್ತರಕ್ಕೆ ಕಬ್ಬಿಣದ ಗ್ರಿಲ್‌ಗ‌ಳನ್ನು ಅಳವಡಿಸಿ ಬೇಲಿ ನಿರ್ಮಾಣ ಈ ಯೋಜನೆಯಲ್ಲಿ ಸೇರಿದೆ. ಈ ಬೇಲಿ ಸೇತುವೆಯ ಎರಡೂ ದಿಕ್ಕುಗಳಲ್ಲಿ 100 ಮೀ. ಗಳಷ್ಟು ವಿಸ್ತರಿಸಿರುತ್ತದೆ. ಪೊಲೀಸರ ಸೂಚನೆಯಂತೆ ಹೈ ರೆಸೊಲ್ಯೂಶನ್‌ ಸಿ.ಸಿ. ಕೆಮರಾ ಅಳವಡಿಸಲು ನಿರ್ಧರಿಸಲಾಗಿದೆ.

ಬೇಲಿ ನಿರ್ಮಾಣ ತುರ್ತಾಗಿ ಆಗಬೇಕಿದೆ
ಸೇತುವೆಗೆ ಸಿಸಿ ಕೆಮರಾ ಮತ್ತು ಬೇಲಿ ನಿರ್ಮಾಣ ತುರ್ತಾಗಿ ಆಗಬೇಕಾಗಿದೆ. ಎನ್‌ಎಚ್‌ಎಐ ಮತ್ತು ಪಿಡಬ್ಲ್ಯುಡಿ ಮೂಲಕ ಶೀಘ್ರ ಇದನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗದ ಕಾರಣ ಮುಡಾದಿಂದ ನಡೆಸಲು ನಿರ್ಧರಿಸಲಾಗಿದೆ. ಮುಂದಿನ ಮುಡಾ ಸಭೆಯಲ್ಲಿ ಮಂಜೂರಾತಿ ನೀಡಿ ಬಳಿಕ ಟೆಂಡರ್‌ ಕರೆದು ಕಾಮಗಾರಿ ವಹಿಸಲಾಗುವುದು.
 - ವೇದವ್ಯಾಸ ಕಾಮತ್‌, ಶಾಸಕರು

-  ಹಿಲರಿ ಕ್ರಾಸ್ತಾ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.