ಗ್ರಾಮಾಂತರದ ವಿವಿಧೆಡೆ ಸಂಭ್ರಮದ ಮೊಸರು ಕುಡಿಕೆ ಉತ್ಸವ


Team Udayavani, Aug 25, 2019, 5:05 AM IST

r-8

ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶನಿವಾರ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಸಂಭ್ರಮವೂ ಅದ್ದೂರಿ, ಸಾಂಪ್ರದಾಯಿಕವಾಗಿ ಜರಗಿತು. ವಿವಿಧ ವೇಷಗಳೊಂದಿಗೆ ಕೃಷ್ಣ ದೇವರನ್ನು ರಥದಲ್ಲಿ ಅಜಾರು ಕೃಷ್ಣಕಟ್ಟೆಯವರೆಗೆ ಕರೆದೊಯ್ದು ಅನಂತರ ರಥಬೀದಿಯಲ್ಲಿ ವಿವಿಧ ವೇಷಧಾರಿಗಳಿಂದ ಸೇವೆ ನಡೆಯಿತು. ಪರಿಸರದ ಗ್ರಾಮಸ್ಥರಿಗೆ ವಿವಿಧ ಸ್ಫರ್ಧೆ ಗಳನ್ನು ಏರ್ಪಡಿಸಲಾಯಿತು.

ಮೂಲ್ಕಿ ಶ್ರೀ ವೆಂಕಟರಮಣ ದೇಗುಲ

ಮೂಲ್ಕಿ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮೂಲ್ಕಿ ಶ್ರೀ ವೆಂಕಟರಮಣ ದೇಗುಲದಲ್ಲಿ ಶನಿವಾರ ಮೊಸರು ಕುಡಿಕೆ ಉತ್ಸವ ಸಂಭ್ರಮದಿಂದ ನಡೆಯಿತು.

ದೇಗುಲದ ಸಂಪ್ರದಾಯದಂತೆ ನೂರಾರು ವರ್ಷಗಳಿಂದ ನಡೆಯುತ್ತಿರುವ ಈ ಉತ್ಸವದಲ್ಲಿ ದೇವರ ವಿಶೇಷ ಉತ್ಸವ ಮೆರವಣಿಗೆ ಪಲ್ಲಕ್ಕಿಯಲ್ಲಿ ನಡೆಯುವುದಲ್ಲದೆ ಬಾಲಕೃಷ್ಣ ವೇಷಧಾರಿಗಳು ಮಡಕೆ ಒಡೆಯುವ ಕಾರ್ಯಕ್ರಮವೂ ನಡೆಯಿತು.

ಕೊನೆಯಲ್ಲಿ ನಯವಾಗಿ ಪಾಲಿಷ್‌ ಮಾಡಿ ಗ್ರೀಸ್‌ ಹಚ್ಚಲಾದ ಅಡಿಕೆ ಮರಕ್ಕೆ ಸಾಹಸದಿಂದ ಏರಿ ಮರದ ತುದಿಯಲ್ಲಿ ಇರಿಸಲಾದ ನಿಧಿಯನ್ನು ತೆಗೆಯುವ ಸ್ಪರ್ಧೆಯಲ್ಲಿ ಹಲವಾರು ಯುವಕರು ಭಾಗವಹಿಸಿದರು.

ಪುನರೂರು: ಮೊಸರು ಕುಡಿಕೆ

ಪುನರೂರು: ಇಲ್ಲಿನ ನಂದಿ ಫ್ರೆಂಡ್ಸ್‌ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆಯ ಮೆರವಣಿಗೆಯ ಶನಿವಾರ ಮಧ್ಯಾಹ್ನ ಎಸ್‌. ಕೋಡಿಯಿಂದ ಪ್ರಾರಂಭವಾಗಿ ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದವರೆಗೆ ಮಡಕೆ ಒಡೆಯುವ ಕಾರ್ಯಕ್ರಮ ನಡೆಯಿತು.

ಸುಂಕದಕಟ್ಟೆ: ದೇವಸ್ಥಾನ

ಬಜಪೆ: ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರೀ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಶನಿವಾರ ಜರಗಿತು.

ಮಧ್ಯಾಹ್ನ ದೇವಸ್ಥಾನದಿಂದ ವಿವಿಧ ವೇಷದೊಂದಿಗೆ ಸಮೀಪದ ದೇವರುಕಟ್ಟೆಗೆ ಆಗಮಿಸಿ, ಅನಂತರ ಕೃಷ್ಣರಾಧೆ ಯಕ್ಷಗಾನ ವೇಷಧಾರಿ ಉಪಸ್ಥಿತಿಯೊಂದಿಗೆ ಮೊಸರು ಕುಡಿಕೆಯನ್ನು ಒಡೆಯಲಾಯಿತು. ದೇವಸ್ಥಾನದ ವಠಾರದಲ್ಲಿ ಯಕ್ಷಗಾನ ಬಯಲಾಟ, ಅಡಿಕೆ ಮರ ಹತ್ತುವುದು, ಕೃಷ್ಣ ವೇಷ ಸ್ಪರ್ಧೆ, ವಿವಿಧ ಆಟೋಟ ಸ್ಪರ್ಧೆ, ವಿನೋದಾವಳಿಗಳು ನಡೆದವು. ಮೊಕ್ತೇಸರ ನಾರಾಯಣ ಎನ್‌. ಪೂಜಾರಿ, ಜ್ಯೋತಿ ನಾರಾಯಣ ಪೂಜಾರಿ, ವಿನೋಧರ ಪೂಜಾರಿ, ಸುಕೇಶ್‌ ಮಾಣಾೖ, ಹರೀಶ್‌ ಪೈ, ಕತ್ತಲ್ ಸಾರ್‌, ತಿಮ್ಮ್ಮಪ್ಪ ಗುಜರನ್‌, ಹರೀಶ್‌ ಶೆಟ್ಟಿ, ಬೂಬ ಪೂಜಾರಿ ಮೊದಲಾದವರಿದ್ದರು.

ಕಟೀಲು: ಇಲ್ಲಿನ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮೊಸರು ಕುಡಿಕೆ ಉತ್ಸವ ಜರಗಿತು (ಚಿತ್ರ1), ಮೂಲ್ಕಿ : ಇಲ್ಲಿನ ಶ್ರೀ ವೆಂಕಟರಮಣ ದೇಗುಲದಲ್ಲಿ ಶನಿವಾರ ಮೊಸರು ಕುಡಿಕೆ ಉತ್ಸವ ಸಂಭ್ರಮದಿಂದ ನಡೆಯಿತು.

ಮೂಲ್ಕಿ: 26 ವರ್ಷಗಳಿಂದ ನಡೆಸಲಾಗುತ್ತಿರುವ ಮೂಲ್ಕಿ ಕಾರ್ನಾಡು ಸದಾಶಿವ ನಗರದ ಮೊಸರು ಕುಡಿಕೆ ಉತ್ಸವ ಈ ಬಾರಿಯೂ ಸಹಸ್ರಾರು ಜನರ ಭಾಗವಹಿಸುವಿಕೆಯಲ್ಲಿ ಸಂಪನ್ನಗೊಂಡಿತು. ಇಲ್ಲಿಯ ಮೊಸರು ಕುಡಿಕೆ ಉತ್ಸವದಲ್ಲಿ ಸುಮಾರು ನೂರಕ್ಕೂ ಮಿಕ್ಕಿದ ಸ್ಪರ್ಧಾಳುಗಳು ನಡೆದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದರು. ಸಂಜೆಯ ವೇಳೆಗೆ ಕೆಇಬಿಯ ಬಳಿಯಿಂದ ಮೆರವಣಿಗೆಯಲ್ಲಿ ಮಡಿಕೆಯನ್ನು ಒಡೆಯುವ ಮೂಲಕ ಸಾಗಿ ಬಂದ ಮೆರವಣಿಗೆಯು ಸರಕಾರಿ ಶಾಲಾ ವಠಾರದಲ್ಲಿ ಸಂಪನ್ನಗೊಂಡು ವಿವಿಧ ಸ್ಪರ್ಧೆಗಳು ರಾತ್ರಿಯ ತನಕವೂ ಮುಂದುವರಿದವು.

ಮೂಡುಬಿದಿರೆ: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಯಕ್ಷಗಾನೀಯ ಮೊಸರು ಕುಡಿಕೆ ಉತ್ಸವದಲ್ಲಿ ಮಳಲಿಯ ಚಂದ್ರಶೇಖರ ಕುಲಾಲ್ ಅವರು ತೂಗುಹಾಕಲಾದ ಮೊಸರ ಕುಡಿಕೆಗಳನ್ನು ಒಡೆಯುವ ಧಾರ್ಮಿಕ ಕಲಾ ಸೇವೆಯನ್ನು ನಡೆಸಿಕೊಟ್ಟರು.

ಕಾರ್ನಾಡು ಸದಾಶಿವ ನಗರ: ಮೊಸರು ಕುಡಿಕೆ ಸಂಪನ್ನ

ಮೂಲ್ಕಿ: 26 ವರ್ಷಗಳಿಂದ ನಡೆಸಲಾಗುತ್ತಿರುವ ಮೂಲ್ಕಿ ಕಾರ್ನಾಡು ಸದಾಶಿವ ನಗರದ ಮೊಸರು ಕುಡಿಕೆ ಉತ್ಸವ ಈ ಬಾರಿಯೂ ಸಹಸ್ರಾರು ಜನರ ಭಾಗವಹಿಸುವಿಕೆಯಲ್ಲಿ ಸಂಪನ್ನಗೊಂಡಿತು. ಇಲ್ಲಿಯ ಮೊಸರು ಕುಡಿಕೆ ಉತ್ಸವದಲ್ಲಿ ಸುಮಾರು ನೂರಕ್ಕೂ ಮಿಕ್ಕಿದ ಸ್ಪರ್ಧಾಳುಗಳು ನಡೆದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದರು. ಸಂಜೆಯ ವೇಳೆಗೆ ಕೆಇಬಿಯ ಬಳಿಯಿಂದ ಮೆರವಣಿಗೆಯಲ್ಲಿ ಮಡಿಕೆಯನ್ನು ಒಡೆಯುವ ಮೂಲಕ ಸಾಗಿ ಬಂದ ಮೆರವಣಿಗೆಯು ಸರಕಾರಿ ಶಾಲಾ ವಠಾರದಲ್ಲಿ ಸಂಪನ್ನಗೊಂಡು ವಿವಿಧ ಸ್ಪರ್ಧೆಗಳು ರಾತ್ರಿಯ ತನಕವೂ ಮುಂದುವರಿದವು.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.