ಕರಾವಳಿಯಾದ್ಯಂತ ಶ್ರದ್ಧಾ ಭಕ್ತಿ, ಸಂಭ್ರಮದಿಂದ ಕ್ರಿಸ್ಮಸ್‌ ಆಚರಣೆ


Team Udayavani, Dec 25, 2022, 6:10 AM IST

ಕರಾವಳಿಯಾದ್ಯಂತ ಶ್ರದ್ಧಾ ಭಕ್ತಿ, ಸಂಭ್ರಮದಿಂದ ಕ್ರಿಸ್ಮಸ್‌ ಆಚರಣೆಕರಾವಳಿಯಾದ್ಯಂತ ಶ್ರದ್ಧಾ ಭಕ್ತಿ, ಸಂಭ್ರಮದಿಂದ ಕ್ರಿಸ್ಮಸ್‌ ಆಚರಣೆ

ಮಂಗಳೂರು: ಏಸು ಕ್ರಿಸ್ತರ ಜನ್ಮ ಸ್ಮರಣೆಗಾಗಿ ಆಚರಿಸುವ ಕ್ರಿಸ್ಮಸ್‌ ಹಬ್ಬವನ್ನು ಕ್ರೈಸ್ತ ಬಾಂಧವರು ಕರಾವಳಿಯಾದ್ಯಂತ ಶನಿವಾರ ರಾತ್ರಿ ಭಕ್ತಿ, ಶ್ರದ್ಧೆ, ಸಂಭ್ರಮ ಸಡಗರದಿಂದ ಆಚರಿಸಿದರು.

ದ.ಕ. ಜಿಲ್ಲೆಯ ವಿವಿಧ ಚರ್ಚ್‌ಗಳನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿತ್ತು. ಕ್ರೈಸ್ತರ ಮನೆಗಳಲ್ಲಿ, ವಿವಿಧ ಚರ್ಚ್‌ಗಳ ಆವರಣದಲ್ಲಿ ಗೋದಲಿ ನಿರ್ಮಾಣ ಮಾಡಲಾಗಿತ್ತು. ರಾತ್ರಿ ವೇಳೆ ಚರ್ಚ್‌ಗಳಲ್ಲಿ ಪ್ರಾರ್ಥನೆ ನಡೆದಿದ್ದು, ಅಧಿಕ ಸಂಖ್ಯೆಯಲ್ಲಿ ಕ್ರೆçಸ್ತರು ಭಾಗವಹಿಸಿದ್ದರು. ಕ್ಯಾರಲ್ಸ್‌ ಹಾಡಿ ಏಸು ಕ್ರಿಸ್ತರ ಜನನ ಸ್ಮರಿಸಲಾಯಿತು.

ಮಂಗಳೂರು ಧರ್ಮಪ್ರಾಂತದ ಬಿಷಪ್‌ ರೈ| ರೆ| ಡಾ| ಪೀಟರ್‌ ಪಾವ್ಲ್ ಸಲ್ಡಾನ್ಹಾ ಅವರು ರೊಸಾರಿಯೊ ಕೆಥೆಡ್ರಲ್‌ನಲ್ಲಿ ಕ್ರಿಸ್ಮಸ್‌ ಹಬ್ಬದ ಬಲಿ ಪೂಜೆ ಅರ್ಪಿಸಿ ಸಂದೇಶ ನೀಡಿದರು.

ಶನಿವಾರ ರಾತ್ರಿ ಜಿಲ್ಲೆಯಾದ್ಯಂತ ಕ್ರಿಸ್ಮಸ್‌ ಹಬ್ಬದ ಆಚರಣೆ ನಡೆದಿದೆ. ನಗರದ ಪ್ರಮುಖ ಚರ್ಚ್‌ಗಳಾದ ರೊಸಾರಿಯೋ ಕೆಥೆಡ್ರಲ್‌, ಮಿಲಾಗ್ರಿಸ್‌, ಉರ್ವ, ಬಿಜೈ, ಬೆಂದೂರ್‌ವೆಲ್‌, ಕುಲಶೇಖರ, ಬಿಕರ್ನಕಟ್ಟೆ, ಕೂಳೂರು, ಅಶೋಕನಗರ, ವಾಮಂಜೂರು ಚರ್ಚ್‌ಗಳು ಸೇರಿದಂತೆ ನಗರದ ಪ್ರಮುಖ ಚರ್ಚ್‌ಗಳಲ್ಲಿ ಭಕ್ತರು ಬಲಿಪೂಜೆಯಲ್ಲಿ ಭಾಗವಹಿಸಿದರು. ರವಿವಾರ ಬೆಳಗ್ಗಿನಿಂದಲೇ ಚರ್ಚ್‌ಗಳಲ್ಲಿ ಹಬ್ಬದ ಬಲಿ ಪೂಜೆ, ಶುಭಾಶಯಗಳ ವಿನಿಮಯ ನಡೆಯುವುದು. ಮನೆಗಳಲ್ಲಿ ಕ್ರಿಸ್ಮಸ್‌ ವಿಶೇಷ ತಿಂಡಿ ತಿನಿಸು “ಕುಸ್ವಾರ್‌’ ವಿನಿಮಯ ಮತ್ತು ಹಬ್ಬದ ಭೋಜನದೊಂದಿಗೆ ಹಬ್ಬದ ಸಂಭ್ರಮ ನೆರವೇರಲಿದೆ.

“ಮಾನವೀಯತೆ, ಶಾಂತಿಯಿಂದ ಭೂಲೋಕ ಸ್ವರ್ಗ’
ಉಡುಪಿ: ಗೌರವ, ಮಾನವೀಯತೆ, ಶಾಂತಿಯ ಕಂಪನ್ನು ಎಲ್ಲೆಡೆ ಪಸರಿಸಿದಾಗ ಜಗತ್ತಿನಲ್ಲಿ ವಿಜೃಂಭಿಸುತ್ತಿರುವ ದುಷ್ಟತನವನ್ನು ಬುಡಸಮೇತ ಕಿತ್ತೂಗೆಯಲು ಸಾಧ್ಯ. ಈ ಮೂರು ಶ್ರೇಷ್ಠ ಕಾಣಿಕೆಗಳಿಗೆ ಈ ಭೂಲೋಕವನ್ನು ಸ್ವರ್ಗಲೋಕವನ್ನಾಗಿಸುವ ಶಕ್ತಿಯಿದೆ ಎಂದು ಧರ್ಮಪ್ರಾಂತದ ಧರ್ಮಾಧ್ಯಕ್ಷ ರೈ| ರೆ| ಡಾ| ಜೆರಾಲ್ಡ್ ಐಸಾಕ್‌ ಲೋಬೋ ಹೇಳಿದರು.

ಶನಿವಾರ ಕ್ರಿಸ್ಮಸ್‌ ಹಬ್ಬದ ವಿಶೇಷ ಬಲಿಪೂಜೆಯನ್ನು ಕಲ್ಯಾಣಪುರ ಮಿಲಾಗ್ರಿಸ್‌ ಕೆಥೆ ಡ್ರ ಲ್‌ನಲ್ಲಿ ಅರ್ಪಿಸಿ ಅವರು ಹಬ್ಬದ ಸಂದೇಶವನ್ನು ನೀಡಿದರು.

ಯೇಸು ಜನಿಸಿದ ಗೋದಲಿಯೊಳಗೆ ಒಮ್ಮೆ ಇಣುಕಿ ನೋಡೋಣ. ಅಲ್ಲಿ ಒಂದು ಕುಟುಂಬವಿದೆ. ನವ ಸಮಾಜದ ನೈಜ ಚಿತ್ರಣವಿದೆ. ದೇವರು-ಮಾನವರ ನಡುವೆ ಸಂಧಾನವಿದೆ. ಗೋದಲಿಯಲ್ಲಿ ಪ್ರೀತಿ-ನೆಮ್ಮದಿಯಿದೆ, ಶಾಂತಿ-ಸಮಾಧಾನ, ಎಲ್ಲರ ನಡುವೆ ಸಹಬಾಳ್ವೆ ಇದೆ. ನಮ್ಮೆಲ್ಲರ ಹೃದಯವೆಂಬ ಗೋದಲಿಯಲ್ಲಿ ಸ್ವಾರ್ಥ, ದುರಹಂಕಾರ, ವಿಭಜನೆ, ದ್ವೇಷ, ಅಸತ್ಯ, ಅಪ್ರಾಮಾಣಿಕತೆ, ಕಲಹ ದೂರವಾಗಿ ಶಾಂತಿ, ಪ್ರೀತಿ, ಸಮಾನತೆ, ಅನುಕಂಪ, ದಯೆ, ನೆಲೆಸಿದಾಗ, ಅಲ್ಲಿ ದೇವರು ನೆಲೆನಿಲ್ಲುತ್ತಾರೆ. ಅದೇ ನಿಜವಾದ ಕ್ರಿಸ್ತಜಯಂತಿ ಎಂದರು.

ಸಂಭ್ರಮದ ಆಚರಣೆ
ಏಸುಕ್ರಿಸ್ತರ ಜನ್ಮದಿನ ಕ್ರಿಸ್ಮಸ್‌ ಹಬ್ಬವನ್ನು ಜಿಲ್ಲೆಯಾದ್ಯಂತ ಶನಿವಾರ ರಾತ್ರಿ ಭಕ್ತಿ, ಶ್ರದ್ಧೆ, ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಕಲ್ಯಾಣಪುರ ಮಿಲಾಗ್ರಿಸ್‌ ಕೆಥೆಡ್ರಲ್‌ನಲ್ಲಿ ಯೇಸುವಿನ ಜನನದ ವೃತ್ತಾಂತವನ್ನು ಪರಿಚಯಿಸುವ ಗೀತ ಗಾಯನ ನಟನೆಯ ಮೂಲಕ ಪ್ರದರ್ಶಿಸಲಾಯಿತು.

ಚರ್ಚ್‌ನ ಪ್ರಧಾನ ಧರ್ಮಗುರು ವಂ| ವಲೇರಿಯನ್‌ ಮೆಂಡೊನ್ಸಾ, ಸಹಾಯಕ ಧರ್ಮಗುರು ವಂ| ಜೋಯ್‌ ಅಂದ್ರಾದೆ, ಅತಿಥಿ ಧರ್ಮಗುರುಗಳು ಉಪಸ್ಥಿತರಿದ್ದರು.

ಶಿರ್ವ ಆರೋಗ್ಯ ಮಾತೆ ಚರ್ಚ್‌ ನಲ್ಲಿ ಧರ್ಮಗುರು ವಂ| ಲೆಸ್ಲಿ ಡಿ’ಸೋಜಾ, ಉಡುಪಿ ಶೋಕಮಾತಾ ಇಗರ್ಜಿಯಲ್ಲಿ ಧರ್ಮಗುರು ವಂ| ಚಾಲ್ಸ್ ಮಿನೇಜಸ್‌, ಕುಂದಾಪುರ ಹೊಲಿ ರೋಸರಿ ಚರ್ಚಿನಲ್ಲಿ ವಂ| ಸ್ಟ್ಯಾನಿ ತಾವ್ರೋ, ಕಾರ್ಕಳದ ಅತ್ತೂರು ಸಂತ ಲಾರೆನ್ಸ್‌ ಬಸಿಲಿಕಾದಲ್ಲಿ ವಂ| ಆಲ್ಬನ್‌ ಡಿ’ಸೋಜಾ, ತೊಟ್ಟಂ ಅನ್ನಮ್ಮ ದೇವಾಲಯದಲ್ಲಿ ವಂ| ಡೆನಿಸ್‌ ಡೆಸಾ, ಕಲ್ಮಾಡಿ ಸ್ಟೆಲ್ಲಾ ಮಾರಿಸ್‌ ಚರ್ಚಿನಲ್ಲಿ ವಂ| ಬ್ಯಾಪ್ಪಿಸ್ಟ್‌ ಮಿನೇಜಸ್‌ ನೇತೃತ್ವದಲ್ಲಿ ಬಲಿಪೂಜೆಗಳು ನಡೆದವು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.