ಮೂರು ದಿನಗಳ ಜಿಲ್ಲಾ ಅಕ್ಷರ ಜಾತ್ರೆಗೆ ಸಂಭ್ರಮದ ತೆರೆ 


Team Udayavani, Mar 8, 2018, 11:40 AM IST

8-March-7.jpg

ಸುಬ್ರಹ್ಮಣ್ಯ (ಕೊಳಂಬೆ ಪುಟ್ಟಣ್ಣ ಗೌಡ ವೇದಿಕೆ) : ಅಂಗಡಿಗುಡ್ಡೆಯ ಕೊಳಂಬೆ ಪುಟ್ಟಣ್ಣ ಗೌಡ ವೇದಿಕೆಯಲ್ಲಿ ಮೂರು ದಿನಗಳ ಕಾಲ ನಡೆದ 22ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ ಬುಧವಾರ ಸಮಾರೋಪಗೊಂಡಿತು.

ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆದು, ಹಲವು ಆಯಾಮಗಳಲ್ಲಿ ಸಾಹಿತ್ಯದ ಕಂಪು ಜಿಲ್ಲೆಯ ವಿವಿಧ ಭಾಗಗಳಿಗೆ ಪಸರಿಸಿತ್ತು. ಮೊದಲ ದಿನ ಕನ್ನಡ ಭುವನೇಶ್ವರಿ ದಿಬ್ಬಣ ವೈಭವದೊಂದಿಗೆ ಆರಂಭಗೊಂಡು ಅನಂತರ ಅಕ್ಷರ ಜಾತ್ರೆಯಲ್ಲಿ ವಿವಿಧ ಗೋಷ್ಠಿ, ಚಿಂತನ-ಮಂಥನ, ಸಂವಾದ, ಕವಿಗೋಷ್ಠಿ, ಸಾಂಸ್ಕೃತಿಕ ಸಂಭ್ರಮಗಳು ಸಾಹಿತ್ಯ ಆಸಕ್ತರ ಮನ ಸೆಳೆಯಿತು.

ಸಮಾರೋಪದ ಕ್ಷಣ
ಸಮಾರೋಪದ ದಿನ ಉದಯರಾಗದೊಂದಿಗೆ ಆರಂಭಗೊಂಡ ಸಾಹಿತ್ಯ ಸಂಭ್ರಮದಲ್ಲಿ ಸುಳ್ಯದ ಶಿಲ್ಪಿ ಡಾ| ಕುರುಂಜಿ ವೆಂಕಟರಮಣ ಗೌಡ ಅವರಿಗೆ ಸಾಧಕ ನಮನ, ಮಾಧ್ಯಮ ಸಾಮಾಜಿಕ ಜವಾಬ್ದಾರಿ, ಕವಿಗೋಷ್ಠಿ, ಯಕ್ಷಗಾನ ಗೋಷ್ಠಿ, ಸಮ್ಮೇಳನಾಧ್ಯಕ್ಷರ ಸಾಹಿತ್ಯ ಸಮೀಕ್ಷೆ ಸಂವಾದ, ಡಿವಿಜಿ ಕಗ್ಗ ಕಾವ್ಯವಾಚನ, ಬಹಿರಂಗ ಅಧಿವೇಶನ, ಸಾಧಕರಿಗೆ ಸಂಮಾನ, ಹಾಸ್ಯ ಸಮಯ ನಡೆದು ಸಮಾರೋಪ ಸಮಾರಂಭದೊಂದಿಗೆ ತೆರೆ ಎಳೆಯಲಾಯಿತು.

ಅಕ್ಷರ ಮೇಳ
ಮೂರು ದಿನವೂ ನಿರಂತರವಾಗಿ ಸಾಗಿದ ಕಾರ್ಯಕ್ರಮದಲ್ಲಿ ವಿವಿಧ ಗೋಷ್ಠಿ, ಕವಿನಮನ, ಕೃಷಿ ರಂಗದ ಸವಾಲು, ಸಾಹಿತ್ಯ, ಮಾಧ್ಯಮ ರಂಗದ ಜವಾಬ್ದಾರಿ ಕುರಿತಂತೆ ವಿಷಯ ತಜ್ಞರು ವಿಚಾರ ಮಂಡಿಸಿದರು. 200ಕ್ಕೂ ಅಧಿಕ ಮಂದಿ 25ಕ್ಕೂ ಅಧಿಕ ಕಾರ್ಯಕ್ರಮಗಳಲ್ಲಿ ನುಡಿ, ಗಾಯನ, ಅಭಿನಯದ ಮೂಲಕ ಸಾಹಿತ್ಯದ ಕಂಪು ಪಸರಿಸಿದರು.

ಬಿಸಿಲಿನ ಝಳ
ಸಮ್ಮೇಳನಕ್ಕೆ ತಟ್ಟಿದ್ದು ಬಿಸಿಲಿನ ಝಳ. ಮಟ-ಮಟ ಮಧ್ಯಾಹ್ನ ಸಾಹಿತ್ಯ ಜಾತ್ರೆಯ ನೆಲದಲ್ಲಿ ನೆತ್ತಿ ಸುಡುತ್ತಿದ್ದ ಬಿಸಿಲಿದ್ದರೂ ಆಸಕ್ತ ಅಕ್ಷರ ಪ್ರೇಮಿಗಳಿಗೆ ಅದು ಭಂಗ ತರಲಿಲ್ಲ. ಕುಲ್ಕುಂದ ಶಿವರಾವ್‌ (ನಿರಂಜನ) ಸಭಾಂಗಣದಲ್ಲಿ ಮೂರು ದಿನವೂ ಸೇರಿ ಆರು ಸಾವಿರಕ್ಕೂ ಅಧಿಕ ಕನ್ನಡ ಪ್ರೇಮಿಗಳು ಪಾಲ್ಗೊಂಡು ಅಕ್ಷರ ಜಾತ್ರೆಗೆ ಸಾಥ್‌ ನೀಡಿದರು. ವೇದಿಕೆ ಮತ್ತು ಸಭಾಂಗಣದಲ್ಲಿ ನೆರೆದು ಮಾತು ಮತ್ತು ಮೌನದಲ್ಲೇ ಅಕ್ಷರ ಸಂಭ್ರಮಕ್ಕೆ ಸಾಕ್ಷಿಯಾದರು.

ಸ್ವಯಂಸೇವಕರ ದಂಡು
ಸಾಹಿತ್ಯ ಸಮ್ಮೇಳನದ ಮೂರು ದಿವಸವೂ ಸಮಿತಿಯ ಜತೆಗೆ ಸ್ವಯಂ ಸೇವಕರಾಗಿ ಸ್ಥಳೀಯ ಕಾಲೇಜು ವಿದ್ಯಾರ್ಥಿಗಳು ಅವಿರತ ಶ್ರಮ ವಹಿಸಿದ್ದರು. ನೂರಾರು ಮಂದಿ ಕಾರ್ಯಕ್ರಮ ಸಾಂಗವಾಗಿ ಸಾಗಲು ಸಹಕಾರ ನೀಡಿದರು.

ಕೊನೆಯ ದಿನದ ಅತಿಥ್ಯ
ನಿತ್ಯ ನಿರಂತರವಾಗಿ ಅನ್ನ ದಾಸೋಹಗೈಯ್ಯುವ ಕುಕ್ಕೆ ಸುಬ್ರಹ್ಮಣ್ಯನ ನೆಲದಲ್ಲಿ, ಸಾಹಿತ್ಯ ಸಂಭ್ರಮದ ಮೂರು ದಿನವೂ ಮೂರು ಹೊತ್ತು ಉಪಾಹಾರ, ಊಟ, ಚಹಾ ತಿಂಡಿ ಸಾಹಿತ್ಯಾಸಕ್ತರ ಉದರ ತುಂಬಿತ್ತು. ಬುಧವಾರ ಬೆಳಗ್ಗೆ 400 ಮಂದಿಗೆ ಹೆಸರು ಕಾಳು, ಅವಲಕ್ಕಿ, ಮೊಸರು ಹಾಗೂ ಚಹಾ ವ್ಯವಸ್ಥೆ ಕಲ್ಪಿಸಲಾಗಿತ್ತು. ಬೆಳಗ್ಗೆ 10ಕ್ಕೆ ಚಹಾ, ತಿಂಡಿ, ಮಧ್ಯಾಹ್ನ 1500 ಮಂದಿಗೆ ಅನ್ನ – ಸಾಂಬಾರು, ಮೆಣಸುಕಾಯಿ, ಬದನೆ, ಅಲೂಗಡ್ಡೆ ಸಾಂಬಾರು, ಮಜ್ಜಿಗೆ ಹುಳಿ, ಶಾವಿಗೆ ಪಾಯಸ, ಜಿಲೇಬಿ, ಮಜ್ಜಿಗೆ ನೀಡಲಾಯಿತು. ಸಾಯಂಕಾಲ ಚಹಾ, ತಿಂಡಿ, ರಾತ್ರಿ 750 ಮಂದಿಗೆ ಅನ್ನ – ಸಾರು, ಸಾಂಬಾರು, ಪಾಯಸ, ಪಲ್ಯ, ಚಟ್ನಿ, ಮಜ್ಜಿಗೆ ನೀಡಲಾಯಿತು.

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.