ಮಂಗಳೂರು: ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಚಿನ್ನದ ಸರ ಸುಲಿಗೆ
Team Udayavani, Feb 25, 2023, 4:50 AM IST
ಮಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಸುಲಿಗೆ ಮಾಡಿದ ಘಟನೆ ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಿರ್ಮಲಾ ಡಿ. ಅವರು ಗಾಂಧಿನಗರದ ನರ್ಸಿಂಗ್ ಹೋಮ್ಗೆ ಹೋಗಿ ಬೆಳಗ್ಗೆ 11.40ರ ಸುಮಾರಿಗೆ ಮಠದ ಕಣಿ ಮುಖ್ಯರಸ್ತೆಯಲ್ಲಿ ಒಬ್ಬರೇ ನಡೆದುಕೊಂಡು ಮನೆ ಕಡೆಗೆ ಬರುತ್ತಿದ್ದಾಗ ಹಿಂದಿನಿಂದ ಬೈಕ್ನಲ್ಲಿ ಬಂದ ವ್ಯಕ್ತಿಯೋರ್ವ ಕುತ್ತಿಗೆಗೆ ಕೈ ಹಾಕಿ ಸುಮಾರು 40 ಗ್ರಾಂ ತೂಕದ ಅಂದಾಜು 1.60 ಲ.ರೂ. ಮೌಲ್ಯದ ಚಿನ್ನದ ಸರ ಸುಲಿಗೆ ಮಾಡಿ ಪರಾರಿಯಾಗಿದ್ದಾನೆ. ಬರ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ