ಜನಪ್ರತಿನಿಧಿಗಳಿಗೆ ಸವಾಲಾಗಿರುವ ನೀರಿನ ಯೋಜನೆ 


Team Udayavani, Mar 14, 2018, 2:27 PM IST

14-March-6.jpg

ಕಿನ್ನಿಗೋಳಿ: ಮೆನ್ನಬೆಟ್ಟು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಹಲವು ಭಾಗಗಳಿಗೆ ಕಿನ್ನಿಗೋಳಿ ಬಹುಗ್ರಾಮ ನೀರಿನ ಯೋಜನೆ ಸಮರ್ಪಕವಾಗಿ ಬಂದರೆ ನೀರಿನ ಸಮಸ್ಯೆಯೇ ಇರುವುದಿಲ್ಲ . ಉಲ್ಲಂಜೆ ಹಾಗೂ ಕೆಮ್ಮಡೆ ಪರಿಸರದಲ್ಲಿ ಎರಡುವರೆ ಸೆಂಟ್ಸ್‌ ಸೈಟ್‌ ಮನೆಗಳಿದ್ದು, ಈ ಪ್ರದೇಶದಲ್ಲಿ ನೀರಿನ ಸಮಸ್ಯೆ ಇದೆ. ಈ ಸಮಸ್ಯೆ ನಿವಾರಣೆಗೆ ಉಲ್ಲಂಜೆ ಪ್ರದೇಶದಲ್ಲಿ ಕಳೆದ ವರ್ಷ ತೆರೆದ ಬಾವಿ ತೋಡಿದ್ದು ಅದಕ್ಕೆ ಈ ವರ್ಷ ಪಂಪ್‌ ಅಳವಡಿಕೆಯಾಗಲಿದೆ. ಕೆಮ್ಮಡೆಯಲ್ಲಿ ಕೊಳವೆ ಬಾವಿ ಮಾಡಿದ್ದು ಅದಕ್ಕೂ ಪಂಪ್‌ ಅಳವಡಿಸುವ ಕಾರ್ಯ ನಡೆಯಲಿದೆ.

ಇನ್ನೂ ಆರಂಭವಾಗದ ಯೋಜನೆ
ಮೆನ್ನಬೆಟ್ಟು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಶ್ರೀರಾಮ ಮಂದಿರ, ಕನ್ಸೆಟ್ಟಾ ಆಸ್ಪತ್ರೆ, ಜಲ್ಲಿಗುಡ್ಡೆ ಸಹಿತ 3ಓವರ್‌ ಹೆಡ್‌ ಟ್ಯಾಂಕ್‌ಗಳಿಗೆ ಕಳೆದ ವರ್ಷ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ನೀರು ಬರುತ್ತಿತ್ತು. ಇದರಿಂದ ಸಮಸ್ಯೆ ತಕ್ಕ ಮಟ್ಟಿಗೆ ಪರಿಹಾರವಾಗಿತ್ತು. ಆದರೇ ಈ ವರ್ಷ ಬಹುಗ್ರಾಮ ಕುಡಿಯುವ ನೀರು ಯೋಜನೆ ಇನ್ನೂ ಆರಂಭವಾಗಿಲ್ಲ . ಗ್ರಾಮ ಪಂಚಾಯತ್‌ ಉಳಿದ ಟ್ಯಾಂಕ್‌ಗಳಿಗೆ ಪಂಚಾಯತ್‌ ಕೊಳವೆ ಬಾವಿ ಹಾಗೂ 2 ತೆರೆದ ಬಾವಿ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಮೆನ್ನಬೆಟ್ಟು ಗ್ರಾಮ ಪಂಚಾಯತ್‌ನಲ್ಲಿ ನಂದಿನಿ ನದಿಯು ಸ್ವಲ್ಪ ಭಾಗ ಹರಿಯುತ್ತಿದ್ದರೂ ಕುಡಿಯುವ ನೀರಿನ ಯೋಜನೆಗೆ ಬಳಸಿಕೊಳ್ಳಲು ಯೋಜನೆ ಸಿದ್ಧಪಡಿಸಿಕೊಳ್ಳಬೇಕಾಗಿದೆ.

 ಮೆನ್ನಬೆಟ್ಟು ಗ್ರಾ. ಪಂ. ವ್ಯಾಪ್ತಿಯ ಉಲ್ಲಂಜೆ, ಕೆಮ್ಮಡೆ, ನೇಕಾರ ಕಾಲನಿಯಲ್ಲಿ 400ಕ್ಕೂ ಮಿಕ್ಕ ಎರಡೂವರೆ ಸೆಂಟ್ಸ್‌ ಮನೆ ನಿವೇಶನಗಳಿದ್ದು, ಅಲ್ಲಿನ ಮನೆಗಳನ್ನು ಸೇರಿಸಿ 965 ಕುಡಿಯುವ ನೀರಿನ ಸಂಪರ್ಕ ಇದೆ. 5 ಕೊಳವೆ ಬಾವಿ ಮೂಲಕ ನೀರು ಸರಬರಾಜು ನಡೆಯುತ್ತಿದೆ.

ಆದರೆ ಎರಡು ಕೊಳವೆ ಬಾವಿಗಳು ನಿರುಪಯೋಗವಾಗಿದೆ. ಮೆನ್ನಬೆಟ್ಟು ಗ್ರಾಮ ಪಂಚಾಯತ್‌ ನಲ್ಲಿ 4,374 ಜನಸಂಖ್ಯೆ ಹೊಂದಿದೆ. ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಿನ್ನಿಗೋಳಿ ಪೇಟೆ ಹಾಗೂ ರುದ್ರಭೂಮಿ ಪರಿಸರ, ಕಂಗುತೋಟ ವ್ಯಾಪ್ತಿಯಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಉಲ್ಲಂಜೆ ಪರಿಸರದಲ್ಲಿ ಎನ್‌ಆರ್‌ಇಜಿ ಯೋಜನೆಯಲ್ಲಿ 2017-18 ರ ಸಾಲಿನಲ್ಲಿ ತೆರೆದ ಬಾವಿ ತೋಡಿದ್ದು ಅಲ್ಲಿ ಪಂಪು ಅಳವಡಿಸುವ ಕೆಲಸ ಪ್ರಗತಿಯಲ್ಲಿದೆ.

ಒಡೆದು ಹೋದ ನೀರಿನ ಪೈಪ್‌
ಮೂರುಕಾವೇರಿ-ಕಿನ್ನಿಗೋಳಿ -ಕಾರ್ನಾಡ್‌ ರಾಜ್ಯ ಹೆದ್ದಾರಿ ರಸ್ತೆ ವಿಸ್ತರಿಸುವ ಕಾಮಗಾರಿಯಿಂದ ಕಿನ್ನಿಗೋಳಿ ಪೇಟೆ ಹಾಗೂ ಸೈಂಟ್‌ ಮೇರಿಸ್‌ ಶಾಲೆಯಿಂದ ಕುಡಿಯುವ ನೀರಿನ ಪೈಪ್‌ಲೈನ್‌ ಒಡೆದು ಹಾಳಾಗಿದ್ದು ಸಮಸ್ಯೆ ಇನ್ನಷ್ಟು ಬಿಗಡಾಯಿಸಿದೆ. ಹೊಸ ಪೈಪ್‌ ಲೈನ್‌ಗೆ ಜಿಲ್ಲಾ ಪಂಚಾಯತ್‌ನಿಂದ ಯೋಜನೆ ಪಟ್ಟಿ ತಯಾರಿಸಲಾಗಿದೆ.

ಟ್ಯಾಂಕರ್‌ ಮೂಲಕ ನೀರು
ಮೆನ್ನಬೆಟ್ಟು ವ್ಯಾಪಿಯಲ್ಲಿ ಎರಡು ಕೊಳವೆ ಬಾವಿಗಳಲ್ಲಿ ನೀರು ಕಡಿಮೆ ಇರುವುದರಿಂದ ಸಮಸ್ಯೆ ಇನ್ನಷ್ಟು ಬಿಗಡಾಯಿಸಿದೆ. ಈ ನಿಟ್ಟಿನಲ್ಲಿ ಸೈಂಟ್‌ ಮೇರಿಸ್‌ ಶಾಲೆಯ ಹತ್ತಿರದ ದೊಡ್ಡ ಟ್ಯಾಂಕ್‌ಗೆ ಟ್ಯಾಂಕರ್‌ ಮೂಲಕ ತುಂಬಿಸಿ ನೀರು ಸರಬರಾಜು ಮಾಡಲಾಗುತ್ತಿದೆ.
– ರಮ್ಯಾ ಕೆ., ಪಿಡಿಒ
ಮೆನ್ನಬೆಟ್ಟು ಗ್ರಾ.ಪಂ.

ದೊಡ್ಡ ಹಿನ್ನಡೆ
ಕಳೆದ ವರ್ಷವೂ ನಾವು ನೀರಿನ ಸಮಸ್ಯೆ ಮನಗಂಡು ಟ್ಯಾಂಕರ್‌ ಮೂಲಕ ಉಲ್ಲಂಜೆ, ನೇಕಾರ ಕಾಲನಿ ಪ್ರದೇಶದಲ್ಲಿ ನೀರನ್ನು ನೀಡಲಾಗಿದೆ. ಈ ವರ್ಷವು ಸರಿಯಾದ ನೀರಿನ ಮೂಲ ಇಲ್ಲದೆ ಸಮಸ್ಯೆ ಉಂಟಾಗಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಈ ವರ್ಷ ಬಂದಿಲ್ಲ. ಇದು ನಮಗೆ ದೊಡ್ಡ ಹಿನ್ನಡೆಯಾಗಿದೆ.
– ಸರೋಜಿನಿ ಗುಜರನ್‌,
ಅಧ್ಯಕ್ಷೆ, ಮೆನ್ನಬೆಟ್ಟು ಗ್ರಾ.ಪಂ.

‌ರಘುನಾಥ ಕಾಮತ್‌, ಕೆಂಚನಕೆರೆ

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.