Champa Shashti ಕರಾವಳಿಯಾದ್ಯಂತ ಷಷ್ಠಿ ಮಹೋತ್ಸವ ಸಂಭ್ರಮ


Team Udayavani, Dec 19, 2023, 12:09 AM IST

Champa Shashti ಕರಾವಳಿಯಾದ್ಯಂತ ಷಷ್ಠಿ ಮಹೋತ್ಸವ ಸಂಭ್ರಮ

ಮಂಗಳೂರು/ ಉಡುಪಿ: ಕರಾವಳಿಯ ವಿವಿಧ ಸುಬ್ರಹ್ಮಣ್ಯ ದೇವಾಲಯಗಳಲ್ಲಿ, ನಾಗ ಸಾನ್ನಿಧ್ಯವಿರುವ ದೇಗುಲಗಳಲ್ಲಿ ಷಷ್ಠಿ ಮಹೋತ್ಸವ ಸೋಮವಾರ ನಡೆಯಿತು.

ದೇವರಿಗೆ ವಿಶೇಷ ಪೂಜೆ, ಬಲಿ ಉತ್ಸವ, ರಥೋತ್ಸವ, ಅನ್ನಸಂತರ್ಪಣೆ ಇತ್ಯಾದಿ ನೆರವೇರಿತು. ನಾಗಾರಾಧನ ಕ್ಷೇತ್ರಗಳಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ, ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನ ಸಹಿತ ವಿವಿಧ ದೇವಸ್ಥಾನಗಳಲ್ಲಿ ಷಷ್ಠಿ ಬ್ರಹ್ಮರಥೋತ್ಸವ ವಿಜೃಂಭಣೆ ಯಿಂದ ನೆರವೇರಿತು.

ಕುಡುಪು ಕ್ಷೇತ್ರದಲ್ಲಿ ಭಕ್ತರಿಂದ ಶ್ರೀ ದೇವರಿಗೆ 23 ಸಾವಿರ ತಂಬಿಲ ಹಾಗೂ 8 ಸಾವಿರ ಪಂಚಾಮೃತ ಅಭಿಷೇಕ ಸೇವೆಗಳು ನಡೆದವು. 25 ಸಾವಿರಕ್ಕೂ ಅಧಿಕ ಮಂದಿ ಅನ್ನಪ್ರಸಾದ ಸ್ವೀಕರಿಸಿದರು.

ಉಡುಪಿಯಲ್ಲಿ ಷಷ್ಠಿ ಮಹೋತ್ಸವ
ಉಡುಪಿ ಶ್ರೀಕೃಷ್ಣ ಮಠ ಸಹಿತ ತಾಂಗೋಡು, ಮಾಂಗೋಡು, ಅರಿತೋಡು, ಮುಚ್ಚಲಕೋಡು ನಾಗಾಲಯಗಳು, ನೀಲಾವರದ ಪಂಚಮಿಕಾನ, ಮಂದಾರ್ತಿಯ ನಾಗ ಸನ್ನಿಧಿ, ಕಲ್ಲಂಗಳ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನ, ಸಗ್ರಿ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನ, ಬಡಗುಪೇಟೆ ಅನಂತ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನ, ಬೊಮ್ಮರಬೆಟ್ಟು ಮತ್ತೂರು ಕೊಂಡಾಡಿ ಶ್ರೀ ಅನಂತಶೇಷ ಕಾಳಿಂಗ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನ, ಮಣಿಪಾಲದ ನಾಗಬ್ರಹ್ಮಸ್ಥಾನ, ದೊಡ್ಡಣಗುಡ್ಡೆಯ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ದೇವಸ್ಥಾನ, ಪಾದೆಬೆಟ್ಟು ಸುಬ್ರಹ್ಮಣ್ಯ ದೇವಸ್ಥಾನ, ನಿಂಜೂರು ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನ, ಕಾಳಾವರ, ಕಂದಾವರ ಸುಬ್ರಹ್ಮಣ್ಯ ದೇವಸ್ಥಾನ, ಗುಡ್ಡೆಮ್ಮಾಡಿ ಸುಬ್ರಹ್ಮಣ್ಯ ದೇವಸ್ಥಾನ ಸಹಿತ ಸಹಿತ ವಿವಿಧ ನಾಗಾಲಯಗಳಲ್ಲಿ ವಿಶೇಷ ಪೂಜೆ ನಡೆಯಿತು.

ಕುಟುಂಬ ನಾಗಬನ, ಸಾರ್ವಜನಿಕ ನಾಗಕ್ಷೇತ್ರ, ದೇವಸ್ಥಾನಗಳಲ್ಲಿನ ನಾಗಬನಗಳಲ್ಲಿ ವಿಶೇಷ ಪೂಜೆಗಳು ನಡೆದಿದ್ದು, ಎಲ್ಲ ನಾಗಕ್ಷೇತ್ರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದರು. ವಿವಿಧೆಡೆ ನಾಗಕ್ಷೇತ್ರಗಳಲ್ಲಿ ಸಾರ್ವಜನಿಕ ಅನ್ನಸಂತರ್ಪಣೆ ಆಯೋಜಿಸಲಾಗಿತ್ತು. ಸಾವಿರಾರು ಮಂದಿ ಭಕ್ತರು ಅನ್ನ ಪ್ರಸಾದ ಸ್ವೀಕರಿಸಿದರು.

ಮಂಜೇಶ್ವರದಲ್ಲಿ
ಷಷ್ಠಿ ಬ್ರಹ್ಮರಥೋತ್ಸವ
ಮಂಗಳೂರು: ಹದಿನೆಂಟು ಪೇಟೆಯ ದೇವಸ್ಥಾನ ಖ್ಯಾತಿಯ ಮಂಜೇಶ್ವರದ ಶ್ರೀಮದನಂತೇಶ್ವರ ದೇವಸ್ಥಾನ ದಲ್ಲಿ ಚಂಪಾಷಷ್ಠಿ ಉತ್ಸವ ಸಂಪನ್ನಗೊಂಡಿತು. ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಭದ್ರ ನರಸಿಂಹ ಹಾಗೂ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಿತು.

 

ಟಾಪ್ ನ್ಯೂಸ್

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.