2 ಲಕ್ಷ ರೂ.ಗಳ ವರೆಗೆ ಬಹುಮಾನ ಗೆಲ್ಲಲು ಅವಕಾಶ


Team Udayavani, May 25, 2018, 5:05 AM IST

swachh-bharat-600.jpg

ಮಹಾನಗರ: ಭಾರತ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರೂ ಯುವ ಕೇಂದ್ರ ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯದ ಸಹಯೋಗದೊಂದಿಗೆ ಪ್ರಧಾನ ಮಂತ್ರಿಗಳ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಸ್ವಚ್ಛ ಭಾರತ ಬೇಸಗೆ ಪ್ರಾಯೋಜಿತ ಸ್ವಚ್ಛತಾ ಕಾರ್ಯಕ್ರಮವನ್ನು ಯುವಜನರ ಮೂಲಕ ಮಾಡಿಸಲು ಸರಕಾರ ನಿರ್ಧರಿಸಿದೆ. ಕಾರ್ಯಕ್ರಮವು ಮೇ1ರಿಂದ ಆರಂಭಗೊಂಡಿದ್ದು, ಜು. 31ರ ವರೆಗೆ ದಿನವೊಂದಕ್ಕೆ 1 ಗಂಟೆಯಂತೆ 100 ಗಂಟೆಗಳ ಕಾಲ ನಡೆಯಲಿದ್ದು, ನೆಹರೂ ಯುವ ಕೇಂದ್ರದಲ್ಲಿ ಸಂಯೋಜನೆಗೊಂಡಿರುವ ಯುವ ಮಂಡಳಿ ಸದಸ್ಯರು ಪಾಲ್ಗೊಳಬಹುದಾಗಿದೆ. ಭಾಗವಹಿಸುವವರು ಜೂ. 15ರ ಒಳಗಾಗಿ ನೋಂದಣಿ ಮಾಡಿಕೊಳ್ಳಬಹುದು. 

ಗ್ರಾಮೀಣ ಜನರಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ತರಬೇತಿಗಳನ್ನು ಹಮ್ಮಿಕೊಳ್ಳಲಾಗುವುದು. ಆರೋಗ್ಯದ ದೃಷ್ಟಿಯಿಂದ ತೆಗೆದುಕೊಳ್ಳಬಹುದಾದ ಮುನ್ನೆಚ್ಚರಿಗೆ ಬಗ್ಗೆ ಮಾಹಿತಿ ನೀಡುವುದು, ಸ್ವಚ್ಛತೆ ಅರಿವು ಮೂಡಿಸುವ ಬೀದಿ ನಾಟಕ, ರ್ಯಾಲಿ, ಸಾಂಸ್ಕೃತಿಕ ಕಾರ್ಯಕ್ರಮ, ನೈರ್ಮಲ್ಯ ಸಂಬಂಧಿತ ಸಮಸ್ಯೆಗಳ ಬಗ್ಗೆ ಜನರಲ್ಲಿ ಜಾಗೃತಿ ಹೆಚ್ಚಿಸುವ ಶೌಚಾಲಯ, ಕೈ ತೊಳೆಯುವಿಕೆ, ನೈರ್ಮಲ್ಯದ ಅರಿವು ಇತ್ಯಾದಿಗಳನ್ನು ಬಳಸಿಕೊಂಡು ಉತ್ತಮ ನೈರ್ಮಲ್ಯ ಪದ್ಧತಿಗಳ ಬಗ್ಗೆ ಜಾಗೃತಿ ಮೂಡಿಸುವುದು, ನೈರ್ಮಲ್ಯದ ಬಗ್ಗೆ ಮನೆ ಮನೆಗೆ ತೆರಳಿ ತಿಳುವಳಿಕೆ ಮೂಡಿಸುವುದು, ಘನ ತ್ಯಾಜ್ಯ ನಿರ್ವಹಣೆ ಸಂಬಂಧಿತ ಚಟುವಟಿಕೆಗಳು, ತ್ಯಾಜ್ಯ ಸಂಗ್ರಹಣೆ- ಪ್ರತ್ಯೇಕತೆ-ವಿಲೇವಾರಿ ಮತ್ತು ಮುಕ್ತ ಸ್ವಚ್ಛ ವಾತಾವರಣದ ಜಾಗೃತಿ ಮೂಡಿಸುವ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದು, ಹಳ್ಳಿಗಳಲ್ಲಿ ಬಯಲು ಮಲ ವಿಸರ್ಜನೆ ನಿಲ್ಲಿಸಲು ನಿಗಾ ಸಮಿತಿಗಳನ್ನು ರಚಿಸುವುದು, ಶೌಚಾಲಯ ನಿರ್ಮಿಸುವುದು ಅಥವಾ ನಿರ್ಮಿಸುವಲ್ಲಿ ಸಹಾಯ ಮಾಡುವುದು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನಡೆಸಬೇಕು. ಮೇ 1ರಿಂದ ಜುಲೈ 31ರ ವರೆಗೆ 100 ಗಂಟೆಗಳ ಕಾರ್ಯಕ್ರಮ ಮಾಡಿ, ಅದಕ್ಕೆ ಸಂಬಂಧಪಟ್ಟಂತೆ ಇರುವ ಕಾರ್ಯ ಕ್ರಮಗಳ ವರದಿ, ಫೋಟೋ, ಪೇಪರ್‌ ಕಟ್ಟಿಂಗ್‌, ವೀಡಿಯೋ, ಕ್ಲಿಪಿಂಗ್‌ಗಳನ್ನು sbsi.mygov.in ವೆಬ್‌ ಸೈಟ್‌ ನಲ್ಲಿ ಲಾಗ್‌ ಇನ್‌ ಆಗಿ  ಆಯಾ ದಿನದ ಕಾರ್ಯಕ್ರಮಗಳ ವರದಿಯನ್ನು ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ನೆಹರೂ ಯುವ ಕೇಂದ್ರ, ಕಂದಾಯ ಭವನ, ಜಿಲ್ಲಾಧಿಕಾರಿ ಕಚೇರಿ ಅವರಣ ಸಂಪರ್ಕಿಸಬಹುದು.

ಬಹುಮಾನ
ಉತ್ತಮ ಕೆಲಸ ನಿರ್ವಹಿಸಿದವರಿಗೆ ಸ್ವಚ್ಛ ಭಾರತ ಬೇಸಗೆ ಪ್ರಾಯೋಜಿತ ಕಾರ್ಯಕ್ರಮದ ಪ್ರಮಾಣ ಪತ್ರಗಳನ್ನು ನೀಡಲಾಗುವುದು. ಅಲ್ಲದೆ ಜಿಲ್ಲಾ ಮಟ್ಟದಲ್ಲಿ 30,000  ರೂ. (ಪ್ರ), 20,000 ರೂ. (ದ್ವಿ.), 10,000 ರೂ. (ತೃ.) ಬಹುಮಾನಗಳನ್ನು ನೀಡಲಾಗುವುದು. ರಾಜ್ಯ ಮಟ್ಟಕ್ಕೆ 50,000 ರೂ. (ಪ್ರ.), 30,000 ರೂ. (ದ್ವಿ.), 20,000 ರೂ. (ತೃ.) ಬಹಮಾನ, ರಾಷ್ಟ್ರ ಮಟ್ಟಕ್ಕೆ 2,00,000 ರೂ. (ಪ್ರ.), 1,00,000 ರೂ. (ದ್ವಿ.) 50,000 ರೂ. (ತೃ.) ಬಹುಮಾನಗಳನ್ನು ನೀಡಲಾಗುವುದು ಎಂದು  ನೆಹರೂ ಯುವಕೇಂದ್ರದ ಜಿಲ್ಲಾ ಯುವ ಸಮನ್ವಯ ಅಧಿಕಾರಿ ತಿಳಿಸಿದ್ದಾರೆ. 

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.