Belthangady; ದ.ಕನ್ನಡ ಜಿಲ್ಲೆಯ ದಲಿತ ಚಳವಳಿಯ ಮುಂಚೂಣಿ ನಾಯಕ ಚಂದು ಎಲ್ ನಿಧನ


Team Udayavani, Jun 20, 2024, 8:09 AM IST

Belthangady; ದ.ಕನ್ನಡ ಜಿಲ್ಲೆಯ ದಲಿತ ಚಳವಳಿಯ ಮುಂಚೂಣಿ ನಾಯಕ ಚಂದು ಎಲ್ ನಿಧನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ದಲಿತ ಚಳವಳಿಯ ಮುಂಚೂಣಿ ನಾಯಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ (52) ಅವರು ಅಲ್ಪ ಕಾಲದ‌ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಜೂ.19 ರಂದು ರಾತ್ರಿ ನಿಧನರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಲಿತ ಚಳವಳಿಯನ್ನು ಕಟ್ಟಿ ಬೆಳೆಸುವಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸಿದ್ದ ಚಂದು ಎಲ್. ಅವರು ಬೆಳ್ತಂಗಡಿ ತಾ.ಪಂ.ಉಪಾಧ್ಯಕ್ಷರಾಗಿ, ಗೇರು ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.

ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಬುಧವಾರ ರಾತ್ರಿ ನಿಧನರಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನಲ್ಲಿ ಡಿ.ಸಿ. ಮನ್ನಾ ಜಮೀನಿಗಾಗಿನ ಹೋರಾಟ, ನಿಡ್ಲೆ ದೈವಸ್ಥಾನದ ಸಾರ್ವಜನಿಕ ಊಟದ ಪಂಕ್ತಿಯಿಂದ ದಲಿತ ಯುವತಿಯನ್ನು ಬಲಾತ್ಕಾರವಾಗಿ ಎಬ್ಬಿಸಿದ ಘಟನೆ ಮುಂದಿಟ್ಟು ನಡೆದ ಹೋರಾಟಗಳ ನೇತೃತ್ವವನ್ನು ವಹಿಸಿದ್ದರು. ಜತೆಗೆ ತಾಲೂಕಿನಲ್ಲಿ ಹಾಗೂ ಜಿಲ್ಲೆಯಲ್ಲಿ ನೂರಾರು ದಲಿತ, ಸಾಮಾಜಿಕ ಹೋರಾಟಗಳಿಗೆ ಮುಂಚೂಣಿ ನಾಯಕತ್ವ ವಹಿಸಿದ್ದರು.

ತಾಲೂಕಿನಲ್ಲಿ ಬಿ.ಎಸ್.ಪಿ ಪಕ್ಷವನ್ನು ಕಟ್ಟಿ ಬೆಳೆಸಿದ ಚಂದು ಎಲ್. ಅವರು ವಿಧಾನಸಭಾ ಚುನಾವಣೆಗೂ ಸ್ಪರ್ಧಿಸಿದ್ದರು. ಲಾಯಿಲ ಗ್ರಾ.ಪಂ. ಸದಸ್ಯರಾಗಿಯೂ ಸೇವೆ ಸಲ್ಲಿಸಿದರು. ಜನತಾದಳ ಪಕ್ಷದಿಂದ ಬೆಳ್ತಂಗಡಿ ತಾ.ಪಂ. ನ ಸದಸ್ಯರಾಗಿ ಆಯ್ಕೆಯಾದ ಅವರು ತಾ.ಪಂ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಅವರು 2013 ರಿಂದ 2018 ರ ತನಕ ಕರ್ನಾಟಕ ರಾಜ್ಯ ಸರಕಾರದ ಗೇರು ಅಭಿವೃದ್ಧಿ ನಿಗಮದ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಮಾಜಿ ಶಾಸಕ ವಸಂತ ಬಂಗೇರ ಅವರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಬಂದ ಚಂದು ಎಲ್. ಅವರು ಕಳೆದ ಎರಡು ದಶಕದಲ್ಲಿ ಕಾಂಗ್ರೆಸ್ ಪಕ್ಷದಲ್ಲಿಯೂ ಹಲವು ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು.

ದಲಿತ ಸಂಘರ್ಷ ಸಮಿತಿಯ ವಿವಿಧ ಪದಾಧಿಕಾರಿಗಳ ಜವಾಬ್ದಾರಿ ವಹಿಸಿದ್ದ ಅವರು ಬಳಿಕ ಮಾವಳ್ಳಿ ಶಂಕರ್ ನೇತೃತ್ವದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ದ ಜೊತೆಗೆ ಗುರುತಿಸಿಕೊಂಡು ಬೆಳ್ತಂಗಡಿ ತಾಲೂಕು ಘಟಕದ ಸಂಚಾಲಕರಾಗಿ, ಜಿಲ್ಲಾ ಸಂಚಾಲಕರಾಗಿ, ಮೈಸೂರು ವಿಭಾಗದ ಸಂಘಟನಾ ಸಂಚಾಲಕರಾಗಿ, ಪ್ರಸ್ತುತ ರಾಜ್ಯ ಸಂಘಟನಾ ಸಂಚಾಲಕರಾಗಿದ್ದರು.

Ad

ಟಾಪ್ ನ್ಯೂಸ್

ಹೃದಯಾಘಾತ: ಸುರತ್ಕಲ್‌ ಪರಿಸರದ ಇಬ್ಬರ ಸಾವು

ಹೃದಯಾಘಾತ: ಸುರತ್ಕಲ್‌ ಪರಿಸರದ ಇಬ್ಬರ ಸಾವು

ಸುಜೀರು: ಭಗ್ನ ಪ್ರೇಮಿಯಿಂದ ಚೂರಿ ಇರಿತಕ್ಕೊಳಗಾದ ಯುವತಿ ಚೇತರಿಕೆ

ಸುಜೀರು: ಭಗ್ನ ಪ್ರೇಮಿಯಿಂದ ಚೂರಿ ಇರಿತಕ್ಕೊಳಗಾದ ಯುವತಿ ಚೇತರಿಕೆ

Madikeri: 2 ದನ, ಎಮ್ಮೆ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

Madikeri: 2 ದನ, ಎಮ್ಮೆ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

Belthangady: ಹೊಸಂಗಡಿ, ಗರ್ಡಾಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ

Belthangady: ಹೊಸಂಗಡಿ, ಗರ್ಡಾಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ

Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ

SAvsZIM: South Africa innings victory

SAvsZIM: ದಕ್ಷಿಣ ಆಫ್ರಿಕಾ ಇನ್ನಿಂಗ್ಸ್‌ ಜಯಭೇರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಜೀರು: ಭಗ್ನ ಪ್ರೇಮಿಯಿಂದ ಚೂರಿ ಇರಿತಕ್ಕೊಳಗಾದ ಯುವತಿ ಚೇತರಿಕೆ

ಸುಜೀರು: ಭಗ್ನ ಪ್ರೇಮಿಯಿಂದ ಚೂರಿ ಇರಿತಕ್ಕೊಳಗಾದ ಯುವತಿ ಚೇತರಿಕೆ

Belthangady: ಹೊಸಂಗಡಿ, ಗರ್ಡಾಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ

Belthangady: ಹೊಸಂಗಡಿ, ಗರ್ಡಾಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ

death

Bantwal: ಪಾಣೆಮಂಗಳೂರು; ಮಹಿಳೆ ಆತ್ಮಹ*ತ್ಯೆ

POlice

Punjalkatte: ಸಿದ್ದಕಟ್ಟೆ; ಅಂಗಡಿಯಲ್ಲಿ ಮದ್ಯ ಅಕ್ರಮ ಮಾರಾಟ

23

Belthangady: ಮೇಯಲು ಬಿಟ್ಟಿದ್ದ ದನಕ್ಕೆ ವಿಷವಿಕ್ಕಿದ ದುಷ್ಕರ್ಮಿಗಳು

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಹೃದಯಾಘಾತ: ಸುರತ್ಕಲ್‌ ಪರಿಸರದ ಇಬ್ಬರ ಸಾವು

ಹೃದಯಾಘಾತ: ಸುರತ್ಕಲ್‌ ಪರಿಸರದ ಇಬ್ಬರ ಸಾವು

ಸುಜೀರು: ಭಗ್ನ ಪ್ರೇಮಿಯಿಂದ ಚೂರಿ ಇರಿತಕ್ಕೊಳಗಾದ ಯುವತಿ ಚೇತರಿಕೆ

ಸುಜೀರು: ಭಗ್ನ ಪ್ರೇಮಿಯಿಂದ ಚೂರಿ ಇರಿತಕ್ಕೊಳಗಾದ ಯುವತಿ ಚೇತರಿಕೆ

Madikeri: 2 ದನ, ಎಮ್ಮೆ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

Madikeri: 2 ದನ, ಎಮ್ಮೆ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

Belthangady: ಹೊಸಂಗಡಿ, ಗರ್ಡಾಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ

Belthangady: ಹೊಸಂಗಡಿ, ಗರ್ಡಾಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ

ಕೊಚ್ಚಿ ಹೋಗುವ ಪರಿಸ್ಥಿತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ..!

ಕೊಚ್ಚಿ ಹೋಗುವ ಪರಿಸ್ಥಿತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.