ಅವ್ಯವಸ್ಥಿತ ವಿದ್ಯುತ್ ಕಂಬಗಳ ಬದಲಾವಣೆ
Team Udayavani, Jul 23, 2018, 11:58 AM IST
ನಗರ: ನಗರದಲ್ಲಿ ಹಾದು ಹೋಗಿರುವ ವಿದ್ಯುತ್ ವ್ಯವಸ್ಥೆಯ ಅವ್ಯವಸ್ಥಿತ, ಅಪಾಯಕಾರಿ ವಿದ್ಯುತ್ ಕಂಬಗಳನ್ನು ಬದಲಾಯಿಸುವ ಕಾರ್ಯವನ್ನು ಮೆಸ್ಕಾಂ ಇಲಾಖೆ ರವಿವಾರ ನಡೆಸಿತು. ನಗರದ ಕೋರ್ಟು ರಸ್ತೆಯ ಗ್ರಾಮ ಚಾವಡಿ ಬಳಿ ವಿದ್ಯುತ್ ಕಂಬ ಮುರಿದು ಅಪಾಯಕಾರಿಯಾಗಿರುವ ಕುರಿತು ಉದಯವಾಣಿ ಸುದಿನದಲ್ಲಿ ಜು. 16 ರಂದು ಸಚಿತ್ರ ವರದಿ ಪ್ರಕಟಿಸಲಾಗಿತ್ತು. ಸಂಚಾರ ನಿಬಿಡ ಇರುವ ಕಾರಣ ರವಿವಾರ ಕಾಮಗಾರಿ ನಡೆಸುವುದಾಗಿ ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದರು. ರವಿವಾರ ಕಾರ್ಮಿಕರ ಮೂಲಕ ಆ ಕಂಬವನ್ನು ಬದಲಾಯಿಸುವ ಕಾರ್ಯವನ್ನು ನಡೆಸಿದರು.
ಇದರ ಜತೆಗೆ ನಗರದ ಇತರ ಕಡೆಗಳಲ್ಲಿ ಅಪಾಯಕಾರಿಯಾಗಿದ್ದ ವಿದ್ಯುತ್ ಕಂಬಗಳನ್ನು ಬದಲಾವಣೆ ಮಾಡಲಾಯಿತು. ಈ ಹಿನ್ನೆಲೆಯಲ್ಲಿ ಪುತ್ತೂರು ನಗರದಲ್ಲಿ ರವಿವಾರ ಹಲವು ಸಮಯಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.
ಮತ್ತೆ ರಸ್ತೆಯಲ್ಲಿ ಕಂಬ
ನಗರದ ಮುಖ್ಯರಸ್ತೆಯ ಬದಿ ಹಳೆಯ ವಿದ್ಯುತ್ ಕಂಬಗಳು ರಸ್ತೆಗೆ ಹೊಂದಿಕೊಂಡಂತೆ ಇದ್ದು, ಬದಲಾವಣೆ ಮಾಡುವ ಸಂದರ್ಭದಲ್ಲೂ ಅದನ್ನು ಸ್ಥಳಾಂತರಿಸದೆ ಮತ್ತೆ ರಸ್ತೆಯ ಬದಿಗೆ ಅಳವಡಿಸುತ್ತಿರುವ ಕುರಿತು ಸಾರ್ವಜನಿಕರ ಕಡೆಯಿಂದ ಆಕ್ಷೇಪ ವ್ಯಕ್ತವಾಗುತ್ತಿರುವುದು ಕಂಡುಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ