ಭಾರೀ ಮಳೆಗೆ ಭಾರ ತಾಳುವುದೇ ಚಾರ್ಮಾಡಿ? ಅಲ್ಲಲ್ಲಿ ಭೂಕುಸಿತ ಆರಂಭ

ಶಿರಾಡಿ ಸಂಚಾರ ನಿಷೇಧದಿಂದಾಗಿ ಹೆಚ್ಚಿದೆ ಒತ್ತಡ

Team Udayavani, Jul 18, 2022, 6:20 AM IST

ಭಾರೀ ಮಳೆಗೆ ಭಾರ ತಾಳುವುದೇ ಚಾರ್ಮಾಡಿ? ಅಲ್ಲಲ್ಲಿ ಭೂಕುಸಿತ ಆರಂಭ

ಬೆಳ್ತಂಗಡಿ: ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಸಹಿತ ಸುತ್ತಮುತ್ತ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದು ಒಂದೆಡೆಯಾದರೆ ಸುಳ್ಯ, ಮಡಿಕೇರಿ ಭಾಗದಲ್ಲಿ ಭೂಕಂಪನದಿಂದ 2019ರ ಪ್ರವಾಹದ ನೆನಪನ್ನು ಮರುಕಳಿಸುವಂತೆ ಮಾಡಿದೆ. ಕಾರಣ ಬೆಂಗಳೂರು-ಮಂಗಳೂರು ನಗರಕ್ಕೆ ಪ್ರಮುಖ ಸಂಪರ್ಕ ಬೆಸುಗೆಯಾಗಿರುವ ಶಿರಾಡಿ ಹಾಗೂ ಚಾರ್ಮಾಡಿ ಘಾಟಿ ಮತ್ತೆ ಕುಸಿತದ ಮುನ್ಸೂಚನೆ ನೀಡುತ್ತಿದೆ.

2019ರಲ್ಲಿ ಸುರಿದ ಭಾರೀ ಮಳೆಯಿಂದ ಪ್ರವಾಹ ಬಂದಿದ್ದಾಗ ರಾಷ್ಟ್ರೀಯ ಹೆದ್ದಾರಿ ಚಾರ್ಮಾಡಿ ಘಾಟಿ ಪ್ರದೇಶವು ಜರ್ಝರಿತ ಗೊಂಡಿತ್ತು. ಚಿಕ್ಕಮಗಳೂರು-ಮಂಗಳೂರು ಸಂಪರ್ಕವೇ ಕಡಿತಗೊಂಡಿತ್ತು. ರಾಷ್ಟ್ರೀಯ ಹೆದ್ದಾರಿ ಚಿಕ್ಕಮಗಳೂರು ಭಾಗದ 6 ಕಡೆ ಸಂಪೂರ್ಣ ರಸ್ತೆ ಹಾಳಾಗಿತ್ತು. ಇದಾದ ಬಳಿಕ ಕಳೆದ ಮೂರು ವರ್ಷಗಳಲ್ಲಿ ಅರಣ್ಯ ಇಲಾಖೆ ಹಾಗೂ ಹೆದ್ದಾರಿ ಇಲಾಖೆ ಸಮಕ್ಷಮದಲ್ಲಿ ಅನೇಕ ಸುತ್ತಿನ ಸಭೆಗಳು ನಡೆದರೂ ಯಾವುದೇ ಪ್ರಯೋಜನವಾಗಿಲ್ಲ. ಇಂದಿಗೂ ಏಕಮುಖ ಸಂಚಾರವನ್ನೇ ಅವಲಂಬಿಸಿದೆ. ಜತೆಗೆ ಭಾರೀ ವಾಹನ ಅಂದರೆ ರಾಜಹಂಸ ಸಹಿತ 6 ಚಕ್ರದಿಂದ ಮೇಲ್ಪಟ್ಟ ವಾಹನಗಳಿಗೆ ಇಂದಿಗೂ ನಿಷೇಧವಿದೆ.

ಶಿರಾಡಿ ಘಾಟಿ ಸಂಚಾರಕ್ಕೆ ಅಡಚಣೆಯಾದಲ್ಲಿ ಚಾರ್ಮಾಡಿ ರಸ್ತೆಯಾಗಿ ಮಂಗಳೂರು ಇಲ್ಲವೇ ಧರ್ಮಸ್ಥಳಕ್ಕೆ ತೆರಳಲು ಪ್ರಮುಖ ರಸ್ತೆಯಾದರೂ ಅಭಿವೃದ್ಧಿಗೆ ಆದ್ಯತೆ ನೀಡಿಲ್ಲ. ಇತ್ತ ದಿಡುಪೆಯಿಂದ ಎಳನೀರು ಆಗಿ ಸಾಗುವ ಪರ್ಯಾಯ ರಸ್ತೆ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸಿದ್ದು ರಸ್ತೆ ನಿರ್ಮಾಣಕ್ಕೆ ಅಂಕಿತ ದೊರೆತು ಲೋಕೋಪಯೋಗಿ ಇಲಾಖೆ ಸರ್ವೇ ಕಾರ್ಯ ನಡೆಸಿ ವರದಿ ಸಲ್ಲಿಸಿದೆ. ಇದರ ಪ್ರಗತಿ ಕಾರ್ಯವೂ ಇನ್ನಷ್ಟೇ ಚುರುಕು ಗೊಳ್ಳಬೇಕಿದೆ.

17.35 ಕೋ.ರೂ.ಗೆ ಟೆಂಡರ್‌
ರಾ. ಹೆದ್ದಾರಿ ಚಾರ್ಮಾಡಿಯ ಮಂಗಳೂರು ವಿಭಾಗದಲ್ಲಿ ರಸ್ತೆಗಳು ಸದ್ಯ ಉತ್ತಮ ಸ್ಥಿತಿಯಲ್ಲಿವೆ. ಆದರೆ ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಗಂಭೀರವಾಗಿ ಭೂ ಕುಸಿತಗೊಂಡ 3 ಕಡೆ ಏಕಮುಖ ಸಂಚಾರ ವಿದ್ದು ಉಳಿದ ಮೂರು ಕಡೆ ಅಪಾಯ ವಿಲ್ಲದಿದ್ದರೂ ಶಾಶ್ವತ ತಡೆಗೋಡೆ ಅನಿವಾರ್ಯವಿದೆ. ಇದಕ್ಕಾಗಿ ಈಗಾಗಲೇ 17.35 ಕೋ.ರೂ. ಗಳ ಟೆಂಡರ್‌ ಕರೆಯಲಾಗಿದೆ. ಈ ಪೈಕಿ 3 ಕಿ.ಮೀ. ರಸ್ತೆ ಅಂಚಿನ ತಡೆಗೋಡೆ ಕೆಲಸ ಪ್ರಗತಿಯಲ್ಲಿದೆ. ಮಳೆಗಾಲದಲ್ಲೂ ಕಾಮಗಾರಿ ಮುಂದುವರಿದಿದೆ. ಉಳಿದ 6 ಕಡೆ ಶಾಶ್ವತ ತಡೆಗೋಡೆ ಮಳೆಗಾಲದ ಬಳಿಕ ಆರಂಭಿಸಲಾ ಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಾರ್ಮಾಡಿ, ಮಡಿಕೇರಿಗೆ ಒತ್ತಡ
ಶಿರಾಡಿ ಘಾಟಿ ಪ್ರದೇಶದಲ್ಲಿ ಈಗಾಗಲೇ ಭೂ ಕುಸಿತಗೊಂಡಿದ್ದು ಕಾರು ಸಹಿತ ಮಿನಿ ಟೆಂಪೋಗಳಿಗೆ ಅವಕಾಶ ನೀಡಲಾಗಿದೆ. ಆದರೆ ರಾಜಹಂಸ ಸಹಿತ ಸಾರಿಗೆ ಬಸ್‌ಗಳು ಹಾಸನ ಬೇಲೂರಿನಿಂದ ಚಾರ್ಮಾಡಿ ಮಾರ್ಗವಾಗಿ ಸಂಚರಿಸಲು ಸೂಚಿಸಲಾಗಿದೆ. ಆದರೆ ಇತ್ತ ಚಾರ್ಮಾಡಿಯಲ್ಲಿ ಗುರುವಾರದಿಂದ ಭಾರೀ ಮಳೆಯಾದ ಪರಿಣಾಮ ಸಣ್ಣ ಮಟ್ಟಿಗೆ ಕುಸಿತ ಉಂಟಾಗಿದೆ. ತತ್‌ಕ್ಷಣ ಮಣ್ಣು ತೆರವು ಕಾರ್ಯವಾದರೂ ರಾತ್ರಿ ಸಂಚಾರ ಅಪಾಯವೇ ಸರಿ. ಈ ಮಧ್ಯೆ ತುರ್ತು ಸ್ಪಂದನೆಗೆ ನಾಲ್ಕು ಜೆಸಿಬಿಗಳನ್ನು ನಿಯೋಜಿಸಲಾಗಿದೆ.

ಮುಂಜಾಗ್ರತೆ ವಹಿಸಲು ಸೂಚನೆ
ಚಾರ್ಮಾಡಿ ಘಾಟಿ ಸುತ್ತಮುತ್ತ ಭಾರೀ ಮಳೆಯಾಗಿರುವ ಪರಿಣಾಮ ಕೆಲವೆಡೆ ಲಘು ಭೂಕುಸಿತವಾಗಿದೆ. ಚಾರ್ಮಾಡಿ ಘಾಟಿಯಲ್ಲಿ ಕಳೆದ ಹಲವು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಕೆಲವೆಡೆ ರಸ್ತೆ ಜಾರುವಂತಿದೆ. ಶಿರಾಡಿ ಘಾಟಿ ಮೇಲಿನ ನಿರ್ಬಂಧದಿಂದಾಗಿ ವಾಹನ ದಟ್ಟಣೆ ಕೂಡ ಹೆಚ್ಚಾಗಿದೆ. ಪರಿಣಾಮ ಪ್ರಯಾಣಿಕರು ಆದಷ್ಟು ಮುಂಜಾಗ್ರತೆ ವಹಿಸುವಂತೆ ಇಲಾಖಾ ಅಧಿಕಾರಿಗಳು ಸೂಚಿಸಿದ್ದಾರೆ.

ಚಾರ್ಮಾಡಿ ರಸ್ತೆಯ ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಈ ಹಿಂದೆ ಭೂ ಕುಸಿತಗೊಂಡ 6 ಕಡೆ ಕೆಳಭಾಗದಿಂದ ಪಿಲ್ಲರ್‌ ಅಳವಡಿಸಿ ತಡೆಗೋಡೆ ರಚಿಸಲು 17.35 ಕೋ.ರೂ. ವೆಚ್ಚದಲ್ಲಿ ಮಳೆಪೂರ್ಣಗೊಂಡ ಬಳಿಕ ಕಾಮಗಾರಿ ಆರಂಭಿಸಲಾಗುವುದು. ಉಳಿದಂತೆ 3 ಕಿ.ಮೀ. ಗಾರ್ಡ್‌ ವಾಲ್‌ ಬಹುತೇಕ ನಿರ್ಮಾಣವಾಗಿದ್ದು, ಸದ್ಯವೇ ಪೂರ್ಣಗೊಳ್ಳಲಿದೆ.
– ಮುನಿರಾಜ್, ಎಇಇ, ರಾಷ್ಟ್ರೀಯ ಹೆದ್ದಾರಿ-73 ಚಿಕ್ಕಮಗಳೂರು ವಿಭಾಗ

– ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.