ತಾಲೂಕಿನ 6 ಕಡೆಗಳಲ್ಲಿ ಚೆಕ್‌ ಡ್ಯಾಮ್‌ ನಿರ್ಮಾಣ

ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಜಲ ಯಜ್ಞ

Team Udayavani, Jan 4, 2021, 1:09 PM IST

ತಾಲೂಕಿನ 6 ಕಡೆಗಳಲ್ಲಿ ಚೆಕ್‌ ಡ್ಯಾಮ್‌ ನಿರ್ಮಾಣ

ಬೆಳ್ತಂಗಡಿ, ಜ. 3: ಬೇಸಗೆಯಲ್ಲಿ ಜಲಕ್ಷಾಮ ತಲೆದೋರುವುದನ್ನ ತಪ್ಪಿಸುವ ಸಲುವಾಗಿ ಹಲವು ಯೋಜನೆಗಳೊಂದಿಗೆ ಮುನ್ನಡೆಯುತ್ತಿರುವ ಬೆಳ್ತಂಗಡಿ ರೋಟರಿ ಕ್ಲಬ್‌ ಈ ಬಾರಿ ಸ್ಥಳೀಯ ವಿದ್ಯಾರ್ಥಿ ಗಳೊಂದಿಗೆ ಚೆಕ್‌ ಡ್ಯಾಮ್‌ ನಿರ್ಮಿಸುವ ಮೂಲಕ ಅಂತರ್ಜಲ ವೃದ್ಧಿಗೆ ತಯಾರಿ ನಡೆಸಿದೆ.

ಈಗಾಗಲೇ ಈ ಯೋಜನೆಗೆ ಚಾಲನೆ ನೀಡಲಾಗಿದ್ದು, ಚಾರ್ಮಾಡಿ, ಕಕ್ಕಿಂಜೆ ಮೊದಲಾದ ಭಾಗಗಳಲ್ಲಿ 6 ಕಟ್ಟಗಳನ್ನು ಪೂರ್ಣಗೊಳಿಸಲಾಗಿದೆ. ಈಗಾಗಲೇ ತಾಲೂಕಿನಲ್ಲಿರುವ 40ಕ್ಕೂ ಅಧಿಕ ಕಿಂಡಿ ಅಣೆಕಟ್ಟುಗಳಿಗೆ  ಸಣ್ಣ   ನೀರಾವರಿ ಇಲಾಖೆಯಿಂದ ಹಲಗೆ ಜೋಡನೆ ಪ್ರಕ್ರಿಯೆ ಭಾಗಶಃ ಪೂರ್ಣಗೊಂಡಿದ್ದು ನೀರು ಸಂಗ್ರಹವಾಗುತ್ತಿದೆ.

ಯೋಜನೆಗೆ ಉತ್ತಮ ಪ್ರತಿಕ್ರಿಯೆ :

ಕೃಷಿ ಹಾಗೂ ದಿನಬಳಕೆ ನೀರಿಗೆ ಕೊರತೆ ಉಂಟಾಗಬಾರದು ಎಂಬ ಉದ್ದೇಶದಿಂದ ಕೃಷಿ ತೋಟಗಳ ಆಸುಪಾಸು ಹರಿಯುವ ತೋಡು, ಹಳ್ಳ, ತೊರೆಗಳಿಗೆ ಕಟ್ಟಗಳನ್ನು ಕಟ್ಟಿ ನೀರನ್ನು ಸಂಗ್ರಹಿಸಲಾಗುತ್ತಿದೆ. ಸಂಗ್ರಹ ಗೊಂಡ ನೀರು ಕೃಷಿ ಚಟು ವಟಿಕೆಗಳಿಗೆ ಉಪಯೋಗಿಸುವ ನೂತನ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸ್ಥಳೀಯರು ಹಾಗೂ ಸಂಘ ಸಂಸ್ಥೆಗಳ ಸಹಕಾರದಲ್ಲಿ ನಡೆಯುವ ಈ ಯೋಜನೆಗೆ ಕಟ್ಟಗಳನ್ನು ಕಟ್ಟಲು ಬೇಕಾಗುವ ಗೋಣಿ ಚೀಲ, ಟಾರ್ಪಾಲ್‌ ಇತ್ಯಾದಿಗಳನ್ನು ರೋಟರಿ ಕ್ಲಬ್‌ನಿಂದ ಉಚಿತವಾಗಿ ನೀಡಲಾಗುತ್ತದೆ. ಪ್ರಾಕೃತಿಕವಾಗಿ ಲಭ್ಯವಿರುವ ಕಲ್ಲು, ಮಣ್ಣು, ಸೊಪ್ಪು, ಸದೆ ಇತ್ಯಾದಿಗಳನ್ನು ಬಳಸಿ ರೋಟರಿ ಕ್ಲಬ್‌ನ ಸದಸ್ಯರು ಸ್ಥಳೀಯರೊಂದಿಗೆ ಕಟ್ಟಗಳನ್ನು ನಿರ್ಮಿಸಿ ಕೊಡುತ್ತಾರೆ.

ವಾಟರ್‌ ಬ್ಯಾಂಕ್‌ ಯೋಜನೆ :

ಈ ಬಾರಿ ಮಳೆಗಾಲದಿಂದಲೇ ನೀರನ್ನು ಉಳಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿರುವ ರೋಟರಿ ಕ್ಲಬ್‌ ಬೆಳೆ ಇರುವ ಹಾಗೂ ಹಡಿಲು ಗದ್ದೆಗಳಲ್ಲಿ ಹರಿಯುವ ನೀರನ್ನು ಅಡ್ಡಗಟ್ಟಿ ನೀರುಳಿಸುವ ಅಭಿಯಾನವನ್ನು  ಆರಂಭಿಸಿದೆ. ಅಲ್ಲದೆ ಗದ್ದೆಯಲ್ಲಿ ಭತ್ತ ಬೆಳೆಯುವ ಆಯ್ದ ರೈತರಿಗೆ ಧನಸಹಾಯವನ್ನು ಒದಗಿಸಿದೆ. ಜತೆಗೆ ಕೆರೆ, ಬಾವಿಗಳಿಗೆ, ಗುಡ್ಡಗಳಲ್ಲಿ ಇಂಗು ಗುಂಡಿ ನಿರ್ಮಿಸಿ ಮಳೆಕೊಯ್ಲು ಮಾಡಿ ವಾಟರ್‌ ಬ್ಯಾಂಕ್‌ ಯೋಜನೆಯನ್ನು ಅನುಷ್ಠಾನಗೊಳಿಸಿದೆ.

ಸಹಭಾಗಿತ್ವ  : ರೋಟರಿ ಕ್ಲಬ್‌ನ ಕಾರ್ಯಕ್ರಮದಲ್ಲಿ ಇದರ ಅಂಗ ಸಂಸ್ಥೆಗಳಾದ ಆನ್ಸ್‌ ಕ್ಲಬ್‌, ರೋಟರಿ ಸಮುದಾಯ ದಳ ಮುಂಡಾಜೆ, ಚಾರ್ಮಾಡಿ-ಕಕ್ಕಿಂಜೆ, ನೆರಿಯ ವಿಭಾಗಗಳು ಸಹಭಾಗಿತ್ವವನ್ನು ಪಡೆದಿದ್ದು, ಸದಸ್ಯರು ನೀರುಳಿಸುವ ಯೋಜನೆಗಳಲ್ಲಿ ಕೈಜೋಡಿಸುತ್ತಿದ್ದಾರೆ.

ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದಲ್ಲಿ ತಾಲೂಕಿನಾದ್ಯಂತ 50 ಕಟ್ಟಗಳನ್ನು ನಿರ್ಮಿಸುವ ಯೋಜನೆ ಹಾಕಿಕೊಳ್ಳಲಾಗಿದೆ. ಈ ಬಗ್ಗೆ ಜನರಿಂದ ಉತ್ತಮ ಸ್ಪಂದನೆ ದೊರೆತಿದ್ದು, ಆವಶ್ಯಕತೆಯಿರುವವರಿಗೆ ಕಟ್ಟೆಗಳನ್ನು ನಮ್ಮ ಸಂಸ್ಥೆಯ ಮೂಲಕ ನಿರ್ಮಿಸಿ ಕೊಡಲಾಗುವುದು. -ಬಿ.ಕೆ.ಧನಂಜಯ ರಾವ್‌,ಅಧ್ಯಕ್ಷರು, ರೋಟರಿ ಕ್ಲಬ್‌, ಬೆಳ್ತಂಗಡಿ

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.