Checkbounce case: ಆರೋಪಿ ಮಹಿಳೆ ಖುಲಾಸೆ
Team Udayavani, Mar 28, 2024, 7:46 PM IST
ಮಂಗಳೂರು: ಚೆಕ್ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಮಹಿಳೆಯನ್ನು ಖುಲಾಸೆಗೊಳಿಸಿ ಕಾಸರಗೋಡು ಸಿಜೆಎಂ ನ್ಯಾಯಾಲಯ ಆದೇಶ ನೀಡಿದೆ.
ಕಾಸರಗೋಡು ತಾಲೂಕಿನ ಬೇಕಲ ಅಂಚೆ, ತಿರುವಕೋಳಿ ಎಂಬಲ್ಲಿನ ನಿವಾಸಿ ವಿವೇಕ್ ಬೇಕಲ್ (42) ಅವರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಚೀಫ್ ಜ್ಯುಡಿಶಿಯಲ್ ಫಸ್ಟ್ ಕ್ಲಾಸ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದ್ವಿತೀಯ ದರ್ಜೆ ಕ್ಲಾರ್ಕ್ ಆಗಿ ಕೆಲಸ ನಿರ್ವಹಿಸುತ್ತಿರುವ ರಾಜೇಂದ್ರ ಪ್ರಸಾದ್ ಎನ್ನುವವರ ಪತ್ನಿ ಸುರೇಖಾ ಗುಣಗಿ ಎಂಬವರಿಗೆ ಪರಿಚಯದ ನೆಲೆಯಲ್ಲಿ ಒಟ್ಟು 12,45,000 ರೂ. ಸಾಲವನ್ನು ವಿವಿಧ ಸಂದರ್ಭಗಳಲ್ಲಿ ನೀಡಿದ್ದರು. ಇದಕ್ಕೆ ಪ್ರತಿಯಾಗಿ 6,20,000 ರೂ. ಮತ್ತು 6,25,000 ರೂ. ಮೌಲ್ಯದ ಎರಡು ಚೆಕ್ ಪಡೆದಿದ್ದರು. ಚೆಕ್ಗಳು ಬ್ಯಾಂಕ್ನಲ್ಲಿ ಬೌನ್ಸ್ ಆಗಿದ್ದು, ಹಣ ವಾಪಾಸು ನೀಡುವಂತೆ ಲಾಯರ್ ನೋಟಿಸ್ ಕಳುಹಿಸಿದ್ದರೂ ವಾಪಾಸು ನೀಡಿರಲಿಲ್ಲ. ಹಾಗಾಗಿ ಕಾಸರಗೋಡು ಸಿಜೆಎಂ ನ್ಯಾಯಾಲಯದಲ್ಲಿ 2 ಚೆಕ್ ಬೌನ್ಸ್ ಕೇಸ್ಗಳನ್ನು ದಾಖಲಿಸಿದ್ದರು.
ವಾದ- ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರಾದ ಎಂ.ಸಿ.ಆಂತೋನಿ ಅವರು ದೂರುದಾರರು ನ್ಯಾಯಯುತವಾಗಿ ಸಾಲವನ್ನು ದೃಢೀಕರಿಸಲು ವಿಫಲವಾಗಿದ್ದಾರೆ ಎಂದು ತೀರ್ಮಾನಿಸಿ ಆರೋಪಿಯನ್ನು ಖುಲಾಸೆಗೊಳಿಸಿ ಆದೇಶ ನೀಡಿದ್ದಾರೆ. ಆರೋಪಿ ಪರವಾಗಿ ಮಂಗಳೂರಿನ ನ್ಯಾಯವಾದಿ ತಲೆಕಾನ ರಾಧಾಕೃಷ್ಣ ಶೆಟ್ಟಿ ಅವರು ವಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ
Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ
MUST WATCH
ಹೊಸ ಸೇರ್ಪಡೆ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.