ಚೇಳೂರು: ಹೊಸ ಜೈಲು ನಿರ್ಮಾಣ ಕಾಮಗಾರಿ ಶೀಘ್ರದಲ್ಲೇ ಆರಂಭ


Team Udayavani, Feb 11, 2019, 4:49 AM IST

11-february-2.jpg

ಮಹಾನಗರ: ಮುಡಿಪು ಸಮೀಪ ಬಂಟ್ವಾಳ ತಾಲೂಕಿನ ಇರಾ- ಚೇಳೂರು- ಕುರ್ನಾಡು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸುಸಜ್ಜಿತ ಜೈಲು ಕಟ್ಟಡ ನಿರ್ಮಾಣ ಕಾಮಗಾರಿ ಶೀಘ್ರದಲ್ಲಿಯೇ ಆರಂಭವಾಗಲಿದ್ದು, ಕೊನೆಗೂ ನಗರದಿಂದ ಜೈಲನ್ನು ಹೊರ ವಲಯಕ್ಕೆ ಸ್ಥಳಾಂತರಿಸುವ ಕನಸು ನನಸಾಗಲಿದೆ.

ಚೇಳೂರಿನಲ್ಲಿ ಜೈಲು ನಿರ್ಮಾಣಕ್ಕಾಗಿ ಮೀಸಲಿರಿಸಿರುವ 67.87 ಎಕ್ರೆ ಜಮೀನಿಗೆ ಈಗಾಗಲೇ ಲೋಕೋಪಯೋಗಿ ಇಲಾಖೆ ವತಿಯಿಂದ ಆವರಣ ಗೋಡೆಯನ್ನು ನಿರ್ಮಾಣ ಮಾಡಿ ನಿವೇಶನವನ್ನು ಭದ್ರ ಪಡಿಸಲಾಗಿದೆ. ವಾರದ ಹಿಂದೆ ರಾಜ್ಯ ಬಂಧೀಖಾನೆ ಇಲಾಖೆಯ ಡಿಜಿಪಿ ಎನ್‌.ಎಸ್‌. ಮೇಘರಿಕ್‌ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಶೀಘ್ರದಲ್ಲಿಯೇ ಆರಂಭಿಸುವಂತೆ ಸೂಚಿಸಿದ್ದರು.

ನಗರದಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ, ಆಧುನಿಕ ಹಾಗೂ ಮಾದರಿ ಜೈಲು ನಿರ್ಮಾಣ ಮಾಡಲಾಗುವುದು ಎಂದು ಎರಡು ವರ್ಷಗಳ ಹಿಂದೆ 2017ರ ಮೇ 3ರಂದು ಕೊಡಿಯಾಲಬೈಲ್‌ನಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿದ್ದ ಆಗಿನ ಬಂದೀಖಾನೆ ಇಲಾಖೆಯ ಡಿಜಿಪಿ ಎಚ್.ಎನ್‌. ಸತ್ಯನಾರಾಯಣ ಅವರು ಘೋಷಿಸಿದ್ದರು. ಇದಕ್ಕಾಗಿ 2017ರ ಬಜೆಟ್‌ನಲ್ಲಿ 7.5 ಕೋಟಿ ರೂ. ಒದಗಿಸಿರುವುದಾಗಿಯೂ ತಿಳಿಸಿದ್ದರು. ಅನಂತರ ಎರಡು ವರ್ಷಗಳ ಅವಧಿಯಲ್ಲಿ ಚೇಳೂರಿನಲ್ಲಿರುವ ನಿವೇಶನಕ್ಕೆ ಆವರಣ ಗೋಡೆಯನ್ನು ನಿರ್ಮಿಸಿ ನಿಗದಿತ ಜಾಗ ಇನ್ನೊಬ್ಬರ ವಶವಾಗದಂತೆ ಭದ್ರ ಪಡಿಸಲಾಗಿದೆ.

ಅಂದಾಜು ವೆಚ್ಚ ಏರಿಕೆ ಸಾಧ್ಯತೆ
ಅಖಿಲ ಭಾರತ ಕಾರಾಗೃಹ ಕೈಪಿಡಿಯಲ್ಲಿರುವ ಮಾರ್ಗಸೂಚಿ ಪ್ರಕಾರ ನೂತನ ಜೈಲಿನ ಯೋಜನೆಯನ್ನು ತಯಾರಿಸಲಾಗಿದೆ.

ಪ್ರಸ್ತಾವಿತ ಜೈಲು ಪ್ರಾರಂಭಿಕ ಹಂತದಲ್ಲಿ 1,000 ಮಂದಿ ಕೈದಿಗಳನ್ನು ಇರಿಸುವ ಸಾಮರ್ಥ್ಯ ಹೊಂದಲಿದ್ದು, ಕ್ರಮೇಣ ಅದನ್ನು 1,400 ಕ್ಕೆ ವಿಸ್ತರಿಸುವ ಉದ್ದೇಶ ಹೊಂದಲಾಗಿದೆ.

ಗರಿಷ್ಠ ಭದ್ರತೆಯ ಬೇಲಿ, ದ್ವಾರದಲ್ಲಿ ಮೊಳೆ ಜೋಡಣೆ, ಆಸ್ಪತ್ರೆ, ಗ್ರಂಥಾಲಯ, ಹೆಲಿಪ್ಯಾಡ್‌, ಕೈದಿಗಳಿಗೆ ಕೆಲಸ ಮಾಡಲು ಉದ್ಯಮ ಘಟಕ, ಸಾಕಷ್ಟು ಸಿಬಂದಿ ನೇಮಕ ಮತ್ತು ಸಿಬಂದಿ ವಸತಿ ಗೃಹ, ವೀಡಿಯೋ ಕಾನ್ಫರೆನ್ಸಿಂಗ್‌ ಸೌಲಭ್ಯಗಳನ್ನು ಹೊಂದಿರುತ್ತದೆ.

ಎರಡು ವರ್ಷಗಳ ಹಿಂದೆ 200 ಕೋಟಿ ರೂ. ಇದ್ದ ಅಂದಾಜು ವೆಚ್ಚ ಈಗ 250ರಿಂದ 280 ಕೋಟಿ ರೂ. ಗೇರುವ ಸಾಧ್ಯತೆ ಇದೆ ಎಂದು ಬಂದೀಖಾನೆ ಇಲಾಖೆ ಲೆಕ್ಕ ಹಾಕಿದೆ.

ಸಾಮರ್ಥ್ಯ 210; ಇರುವ ಕೈದಿಗಳು 362
ಕೊಡಿಯಾಲಬೈಲ್‌ನಲ್ಲಿರುವ ಜೈಲು ಕೈದಿಗಳಿಂದ ತುಂಬಿದೆ. ಜೈಲಿನ ಸಾಮರ್ಥ್ಯ 210. ಆದರೆ ಈಗ 351 ಪುರುಷರು, 7 ಮಂದಿ ಮಹಿಳೆಯರು ಮತ್ತು ನಾಲ್ವರು ಮಕ್ಕಳು (1 ಹೆಣ್ಣು ಮತ್ತು 3 ಗಂಡು) ಸಹಿತ ಒಟ್ಟು 362 ಮಂದಿ ವಿಚಾರಣಾಧೀನ ಕೈದಿಗಳಿದ್ದಾರೆ. ಅವರಲ್ಲಿ ಸುಮಾರು 50 ಮಂದಿ ಹಳೆ ಜೈಲಿನಲ್ಲಿ ಹಾಗೂ ಉಳಿದವರು ಹೊಸ ಜೈಲಿನಲ್ಲಿದ್ದಾರೆ. ಎರಡು ವರ್ಷಗಳ ಹಿಂದೆ ಒಂದು ಬಾರಿ ಇಲ್ಲಿನ ಕೈದಿಗಳ ಸಂಖ್ಯೆ 489ರ ವರೆಗೂ ತಲುಪಿತ್ತು. ಇದಲ್ಲದೆ ಭದ್ರತೆ ಮತ್ತು ಸುರಕ್ಷೆಯ ಕಾರಣದಿಂದ ಬೇರೆ ಜೈಲುಗಳಿಗೆ ವರ್ಗಾವಣೆಗೊಂಡಿರುವ ಕೆಲವು ಮಂದಿ ಕೈದಿಗಳಿದ್ದಾರೆ.

110 ಕೋಟಿ ರೂ. ಕಾಮಗಾರಿ
ಜೈಲು ಕಟ್ಟಡವನ್ನು 3 ಹಂತಗಳಲ್ಲಿ ನಿರ್ಮಿಸಿ 3- 4 ವರ್ಷಗಳಲ್ಲಿ ಪೂರ್ಣಗೊಳಿಸುವ ಉದ್ದೇಶ ಹೊಂದಲಾಗಿದೆ. ಮೊದಲ ಹಂತದಲ್ಲಿ 110 ಕೋಟಿ ರೂ. ಮೊತ್ತದ ಕಾಮಗಾರಿಗೆ ಟೆಂಡರ್‌ ಸಿದ್ಧಪಡಿಸಲಾಗಿದ್ದು, ಅದನ್ನು ಆಡಳಿತಾತ್ಮಕ ಅನುಮೋದನೆಗಾಗಿ ಕಳುಹಿಸಲಾಗಿದೆ. ಟೆಂಡರ್‌ಗೆ ಶೀಘ್ರ ಆಡಳಿತಾತ್ಮಕಅನುಮೋದನೆ ಲಭಿಸುವ ನಿರೀಕ್ಷೆ ಇದೆ.

ಆಡಳಿತಾತ್ಮಕ ಮಂಜೂರಾತಿ
ಹೊಸ ಜೈಲು ನಿರ್ಮಾಣ ಮಾಡುವ ಜಾಗಕ್ಕೆ ಆವರಣ ಗೋಡೆಯನ್ನು ಈಗಾಗಗಲೇ ಮೊದಲ ಹಂತದಲ್ಲಿ 110 ಕೋಟಿ ರೂ.ಗಳ ಕಾಮಗಾರಿಗೆ ಟೆಂಡರ್‌ ತಯಾರಿಸಿ ಆಡಳಿತಾತ್ಮಕ ಅನುಮೋದನೆಗಾಗಿ ಸರಕಾರಕ್ಕೆ ಕಳುಹಿಸಿ ಕೊಡಲಾಗಿದೆ. ಸರಕಾರದಿಂದ ಶೀಘ್ರ ಆಡಳಿತಾತ್ಮಕ ಮಂಜೂರಾತಿಯನ್ನು ನಿರೀಕ್ಷಿಸಲಾಗಿದೆ. ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡ ಕೂಡಲೇ ಕಾಮಗಾರಿಯನ್ನು ಆರಂಭಿಸಲಾಗುವುದು.
– ಯಶವಂತ್‌,
ಲೋಕೋಪಯೋಗಿ ಇಲಾಖೆ ಎಕ್ಸಿಕ್ಯೂಟಿವ್‌ ಎಂಜಿನಿಯರ್‌

ಹೊಸ ಜೈಲು ನಿರ್ಮಾಣದಿಂದ
ಇತ್ತೀಚೆಗೆ ಡಿಜಿಪಿ ಎನ್‌.ಎಸ್‌. ಮೇಘರಿಕ್‌ ಅವರು ಮುಡಿಪು ಸಮೀಪದ ಚೇಳೂರಿನಲ್ಲಿರುವ ಪ್ರಸ್ತಾವಿತ ಜೈಲು ನಿರ್ಮಾಣದ ನಿವೇಶನವನ್ನು ಮತ್ತು ಯೋಜನೆಯ ನೀಲ ನಕ್ಷೆಯನ್ನು ಪರಿಶೀಲಿಸಿದ್ದಾರೆ. ಹಣ ಬಿಡುಗಡೆ ಆಗಿದ್ದು, ಟೆಂಡರ್‌ ಪ್ರಕ್ರಿಯೆಯನ್ನು ಶೀಘ್ರ ಪೂರ್ತಿಗೊಳಿಸಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ. ಆದಷ್ಟು ಬೇಗ ಹೊಸ ಜೈಲು ನಿರ್ಮಾಣವಾದರೆ ಎಲ್ಲರಿಗೂ ಅನುಕೂಲ. 
– ಟಿ.ಆರ್‌. ಸುರೇಶ್‌,
ಪೊಲೀಸ್‌ ಕಮಿಷನರ್‌, ಮಂಗಳೂರು.

ವಿಶೇಷ ವರದಿ

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.