ನೋ ಬ್ಯಾಗ್‌ ಡೇ : ವಿದ್ಯಾರ್ಥಿಗಳಿಗೆ ಅನ್ನದ ಬಟ್ಟಲ ಪಾಠ


Team Udayavani, Jul 29, 2018, 11:25 AM IST

29-july-8.jpg

ಸವಣೂರು : ಪಾಲ್ತಾಡಿ ಗ್ರಾಮದ ಚೆನ್ನಾವರ ಶಾಲಾ ಮಕ್ಕಳಿಗೆ ಶನಿವಾರ ನೋ ಬ್ಯಾಗ್‌ ಡೇ ಅಂಗವಾಗಿ ಅನ್ನದ ಮಹತ್ವ ಅರಿಯುವ ಸಲುವಾಗಿ ಭತ್ತದ ಗದ್ದೆಯಲ್ಲಿ ಪ್ರಾತ್ಯಕ್ಷಿಕೆ ಹಾಗೂ ಭತ್ತದಿಂದ ಅಕ್ಕಿಯನ್ನು ಬೇರ್ಪಡಿಸುವ ಕುರಿತು ಮಾಹಿತಿ ನೀಡಲಾಯಿತು.

ಚೆನ್ನಾವರ ಪಟ್ಟೆ ಲಕ್ಷ್ಮೀ ರೈ ಅವರ ಭತ್ತದ ಗದ್ದೆಯಲ್ಲಿ ಪ್ರಾತ್ಯಕ್ಷಿಕೆ ನಡೆಯಿತು. ನಮ್ಮ ಆಹಾರ ಬೆಳೆಯಾದ ಭತ್ತದ ಉತ್ಪಾದನೆ ಯಾವ ರೀತಿ ಆಗುತ್ತದೆ ಎಂಬ ಮಾಹಿತಿ ಹೆಚ್ಚಿನ ಮಕ್ಕಳಿಗೆ ಇರುವುದಿಲ್ಲ. ಈಗ ಗದ್ದೆ ಕಾಣುವುದೇ ವಿರಳ. ಹೀಗಾಗಿ, ಭತ್ತ ಬೆಳೆಯುವುದು ಹೇಗೆ? ಬಿತ್ತನೆ, ನಾಟಿ ಮೊದಲಾದ ವಿಚಾರ ತಿಳಿಸಿಕೊಡುವ ನಿಟ್ಟಿನಲ್ಲಿ ಹಾಗೂ ಕೃಷಿಯಲ್ಲಿ ಆಸಕ್ತಿ ಮೂಡಿಸುವ ಸಲುವಾಗಿ ಗದ್ದೆಯಲ್ಲಿ ಭತ್ತದ ಕೃಷಿಯ ಕುರಿತು ತಿಳಿಹೇಳಲಾಯಿತು.

ಆಸಕ್ತಿಯಿಂದ ಗದ್ದೆಗಿಳಿದ ವಿದ್ಯಾರ್ಥಿಗಳಿಗೆ ಪರಿಣತರಿಂದ ಮಾಹಿತಿ ನೀಡಲಾಯಿತು. ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದವರ ಬಾಯಿಯಿಂದ ಕೇಳಿಬರುತ್ತಿದ್ದ ಓ ಬೇಲೇ – ಓ ಬೇಲೆ… ಹಾಡುಗಳನ್ನು ಮಕ್ಕಳೂ ಹಾಡಿದರು. ಕೃಷಿಯ ನಂಟನ್ನು ಬಿಡದೆ ನೇಜಿ ನಾಟಿ ಮಾಡುವ ಸಮಯದಲ್ಲಿ ತಮ್ಮನ್ನು ತಾವೇ ಹುರಿದುಂಬಿಸಿಕೊಳ್ಳಲು ಹಾಡುತ್ತಿದ್ದ ಜಾನಪದ ಹಾಡು, ಪಾಡ್ದನಗಳನ್ನು ಮಕ್ಕಳೂ ಹಾಡಿ ಸಂಭ್ರಮಿಸಿದರು.

ಭತ್ತದ ಕೃಷಿಯಿಂದ ದೂರ ಸರಿಯುವ ಕಾಲದಲ್ಲಿ ವಿದ್ಯಾರ್ಥಿಗಳು, ಯುವಜನತೆ ಈ ಕೃಷಿಯ ಬಗ್ಗೆ ನೈಜವಾಗಿ ತಿಳಿವಳಿಕೆ ಪಡೆಯುವುದು ಸ್ವತಃ ಗದ್ದೆಗಿಳಿದರೆ ಮಾತ್ರ ಎಂಬುದನ್ನು ಮನಗಂಡ ಶಿಕ್ಷಕರು, ಈ ಪ್ರಯತ್ನ ಮಾಡಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶಾಂತಾ ಕುಮಾರಿ ಎನ್‌., ಶಿಕ್ಷಕಿಯರಾದ ಶ್ವೇತಾ, ರಂಝೀನಾ, ಅಕ್ಷರ ದಾಸೋಹ ವಿಭಾಗದ ಪವಿತ್ರವೇಣಿ, ಪದ್ಮಾವತಿ, ಚೆನ್ನಾವರ ಅಭ್ಯುದಯ ಯುವಕ ಮಂಡಲದ ಜತೆ ಕಾರ್ಯದರ್ಶಿ ಕೃತೇಶ್‌ ರೈ, ಹರೀಶ್‌ ರೈ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.