ಮಕ್ಕಳ ತಪ್ಪು ತಪ್ಪಲ್ಲ, ಶಿಕ್ಷೆ ಶಿಕ್ಷೆಯಲ್ಲ: ಸಂವಾದದಲ್ಲಿ ಮಕ್ಕಳ ರಕ್ಷಣಾ ಆಯೋಗದ ಶಂಕರಪ್ಪ


Team Udayavani, Jun 18, 2022, 5:00 AM IST

ಮಕ್ಕಳ ತಪ್ಪು ತಪ್ಪಲ್ಲ, ಶಿಕ್ಷೆ ಶಿಕ್ಷೆಯಲ್ಲ: ಸಂವಾದದಲ್ಲಿ ಮಕ್ಕಳ ರಕ್ಷಣಾ ಆಯೋಗದ ಶಂಕರಪ್ಪ

ಮಂಗಳೂರು: ಮಕ್ಕಳ ರಕ್ಷಣೆ ಕಾನೂನಿನ ಪ್ರಕಾರ ಮಕ್ಕಳ ತಪ್ಪು ತಪ್ಪಾಗಿರುವುದಿಲ್ಲ, ಶಿಕ್ಷೆ ಶಿಕ್ಷೆಯಲ್ಲ. ಈ ಎಲ್ಲ ವ್ಯವಸ್ಥೆಗಳೂ ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತವೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಿ. ಶಂಕರಪ್ಪ ಹೇಳಿದರು.

ಮಕ್ಕಳ ಸಮಸ್ಯೆಗಳ ಬಗ್ಗೆ ಅರಿತು ಕೊಳ್ಳಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಅಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಶುಕ್ರವಾರ ಜಿ.ಪಂ. ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಕ್ಕಳೊಂದಿಗೆ ಸಂವಾದದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಕ್ಕಳಿಂದಲೇ ಮಾಹಿತಿ
ಆಯೋಗದ ಬಳ್ಳಾರಿ ವಲಯದ ಸದಸ್ಯ ಎಚ್‌.ಸಿ. ರಾಘವೇಂದ್ರ ಮಾತನಾಡಿ, ಕೋವಿಡ್‌ ಸಂದರ್ಭ ದೇಶದಲ್ಲಿ 3 ಕೋಟಿಗೂ ಅಧಿಕ ಮಕ್ಕಳು ಶಾಲೆ ತೊರೆದಿದ್ದಾರೆ. ವಸತಿ ವಂಚಿತರಾಗಿದ್ದಾರೆ, ಲೈಂಗಿಕ ದೌರ್ಜನ್ಯ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅವರು ಎದುರಿಸುತ್ತಿರುವ ತೊಂದರೆಗಳನ್ನು ಅವರಿಂದಲೇ ಅರಿಯಲು ಸಂವಾದ ಆಯೋಜಿಸಲಾಗಿದೆ ಎಂದರು.

ಪೊಲೀಸರ ಬಗ್ಗೆ ತಪ್ಪು ಕಲ್ಪನೆ ಬೇಡ
ಮಂಗಳೂರು (ಡಿಸಿಪಿ ಅಪರಾಧ ಮತ್ತು ಸಂಚಾರ) ಬಿ.ಪಿ. ದಿನೇಶ್‌ ಕುಮಾರ್‌ ಮಾತನಾಡಿ, ಪೊಲೀಸರೆಂದರೆ ಕೆಟ್ಟವರು ಎಂಬ ಭಾವನೆ ಸರಿಯಲ್ಲ. ಮಕ್ಕಳ ವಿಚಾರಣೆ ಸಂದರ್ಭ ಪೊಲೀಸರು ಸಿವಿಲ್‌ ಡ್ರೆಸ್‌ನಲ್ಲಿ ಇರುತ್ತಾರೆ. ಮಕ್ಕಳು ತಮ್ಮ ಸಮಸ್ಯೆಗಳ ಬಗ್ಗೆ ಮಂಗಳೂರಿನ ಮಹಿಳಾ ಠಾಣೆ ಬಳಿ ಇರುವ ಸಖೀ ವನ್‌ ಸ್ಟಾಪ್‌ ಸೆಂಟರ್‌ಗೆ ಮಾಹಿತಿ ನೀಡಬಹುದು ಎಂದರು.

ಮಕ್ಕಳ ಹಕ್ಕುಗಳನ್ನು ರಕ್ಷಿಸಿ
ದ.ಕ. ಹಿರಿಯ ಸಿವಿಲ್‌ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ. ಉದ್ಘಾಟಿಸಿ ಮಾತನಾಡಿ, ಬಾಲ್ಯದ ನೆನಪುಗಳು ಯಾವತ್ತೂ ಸಿಹಿಯಾಗಿರಬೇಕು. ಜೀವನ, ಶಿಕ್ಷಣ,
ಬೆಳವಣಿಗೆ, ರಕ್ಷಣೆ, ಆಟ, ದುಡಿಮೆ ಯಿಂದ ಹೊರಗಿರುವುದು ಅವರ ಹಕ್ಕುಗಳಾಗಿವೆ. ಈ ಎಲ್ಲ ಹಕ್ಕುಗಳನ್ನು ಖಾತ್ರಿಪಡಿಸಬೇಕು ಎಂದರು.

ಆಯೋಗದ ಸದಸ್ಯ ಪರಶುರಾಮ್‌, ಡಿಡಿಪಿಐ ಸುಧಾಕರ್‌, ಡಿಎಚ್‌ಒ ಡಾ| ಕಿಶೋರ್‌ ಕುಮಾರ್‌, ಎಂಡೋಸಲ್ಫಾ ನ್‌ ಪೀಡಿತರ ಪುನರ್ವಸತಿ ನೋಡಲ್‌ ಅಧಿ ಕಾರಿ ಡಾ| ನವೀನ್‌ಚಂದ್ರ ಕುಲಾಲ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಾಪ ಬೋವಿ, ಪುತ್ತೂರು ಡಿವೈಎಸ್‌ಪಿ ಗಾನಾ ಪಿ. ಕುಮಾರ್‌, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೆನ್ನಿ ಡಿ’ಸೋಜಾ, ಮೈಸೂರು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಕೆ.ವಿ., ಶಾಂತಿ ಸಂದೇಶ ಟ್ರಸ್ಟ್‌ ನಿರ್ದೇಶಕಿ ದುಲ್ಸಿನ್‌, ಜಿಲ್ಲಾ ಮಕ್ಕಳ ರಕ್ಷಣಾಧಿ ಕಾರಿ ಯಮುನಾ ಉಪಸ್ಥಿತರಿದ್ದರು.

ಸ್ಯಾನಿಟರಿ ಪ್ಯಾಡ್‌,
ಕಬ್ಬಿಣಾಂಶ ಮಾತ್ರೆ ಬರುತ್ತಿಲ್ಲ
ಸಂವಾದದ ವೇಳೆ ವಸತಿ ಶಾಲೆಯ ಹೆಣ್ಣುಮಕ್ಕಳಿಗೆ “ಶುಚಿ’ ಸ್ಯಾನಿಟರಿ ಪ್ಯಾಡ್‌ ಲಭ್ಯವಾಗದೆ ತಿಂಗಳಾಗಿದೆ ಎಂಬ ಮಾಹಿತಿ ಬಹಿರಂಗಗೊಂಡಿತು. ಈ ಕುರಿತು ಗಮನ ಹರಿಸಬೇಕು, ಸರಕಾರದ ಮಟ್ಟದಲ್ಲಿ ತಾನೂ ಮಾತನಾಡುವುದಾಗಿ ಸದಸ್ಯ ಶಂಕರಪ್ಪ ತಿಳಿಸಿದರು. ಪಠ್ಯಪುಸ್ತಕ ಬಂದಿಲ್ಲ, ಕಬ್ಬಿಣಾಂಶದ ಮಾತ್ರೆ ವಿತರಣೆ ಆಗುತ್ತಿಲ್ಲ, ಶಾಲೆ, ವಸತಿ ನಿಲಯದ ಆವರಣ ಗೋಡೆ ಎತ್ತರಿಸಬೇಕು ಮುಂತಾದ ಸಮಸ್ಯೆಗಳನ್ನು ಮಕ್ಕಳು ಗಮನಕ್ಕೆ ತಂದರು.

ಉಚಿತ ಬಸ್‌ಪಾಸ್‌:
ಕಂಡಕ್ಟರ್‌ಗೆ ಕೋಪ!
ಉಚಿತ ಬಸ್‌ಪಾಸ್‌ ಹಿಡಿದು ಬಸ್‌ ಹತ್ತಿದರೆ ನಿರ್ವಾಹಕರು ನಿಂದಿಸುತ್ತಾರೆ, ಕೆಲವೊಮ್ಮೆ ಬಸ್‌ನಿಂದ ಇಳಿಸುತ್ತಾರೆ ಎಂದು ಕುತ್ತಾರು ಬಾಲಸಂರಕ್ಷಣ ಕೇಂದ್ರದ ಬಾಲಕಿ ಹೇಳಿದರು. ಮುಂದೆ ಹೀಗಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಪಿ ತಿಳಿಸಿದರು.

ಆನ್‌ಲೈನ್‌ ಶಿಕ್ಷಣದಿಂದ ಮಕ್ಕಳು ಮೊಬೈಲ್‌ ಗೇಮ್ಸ್‌ ಚಟಕ್ಕೆ ಒಳಗಾಗಿದ್ದಾರೆ. ಅದರಿಂದ ಹೊರತರಲು ಕ್ರಮ ಕೈಗೊಳ್ಳಬೇಕು ಎಂದು ಸುಳ್ಯದ ವಿದ್ಯಾರ್ಥಿಯೊಬ್ಬರು ಗಮನ ಸೆಳೆದರು. ಜಿಲ್ಲೆಯಲ್ಲಿ ಮೊಬೈಲ್‌ ಡಿ ಅಡಿಕ್ಷನ್‌ ಸೆಂಟರ್‌ ಆರಂಭ ಸಹಿತ, ಮಕ್ಕಳ ಕುರಿತಾದ ಎಲ್ಲ ಬೇಡಿಕೆಗಳ ಪಟ್ಟಿಯನ್ನು ಆಯೋಗಕ್ಕೆ ಸಲ್ಲಿಸುವಂತೆ ಆಯೋಗದ ಸದಸ್ಯ ಶಂಕರಪ್ಪ ಅವರು ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಿಗೆ ಸೂಚಿಸಿದರು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.