4 ತಿಂಗಳಿನಿಂದ ಹೊರಗುಳಿದಿದ್ದ ಮಕ್ಕಳು ಮರಳಿ ಶಾಲೆಗೆ

ಶಿಕ್ಷಕರು, ಅಧಿಕಾರಿಗಳ ಪ್ರಯತ್ನದ ಫ‌ಲ

Team Udayavani, Nov 7, 2019, 4:48 AM IST

qq-37

ಈಶ್ವರಮಂಗಲ: ಅಧಿಕಾರಿಗಳು ಮತ್ತು ಶಿಕ್ಷಕರ ತಂಡ ಭೇಟಿ ನೀಡಿ ಹೆತ್ತವರು, ಮಕ್ಕಳ ಮನವೊಲಿಸಿತು.

ಈಶ್ವರಮಂಗಲ: ನಾಲ್ಕು ತಿಂಗಳಿನಿಂದ ಶಾಲೆಯಿಂದ ಹೊರಗುಳಿದಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳನ್ನು ಮರಳಿ ಶಾಲೆಗೆ ಸೇರ್ಪಡೆಗೊಳಿಸಿದ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರು ಶಾಲೆಯಲ್ಲಿ ನಡೆದಿದೆ.

ಬಡಗನ್ನೂರು ಗ್ರಾ.ಪಂ. ಸಮೀಪದ ನಿವಾಸಿ ಗಳಾದ ಸುಂದರ – ಪ್ರೇಮಾ ದಂಪತಿಗೆ ಆರು ಜನ ಮಕ್ಕಳು. ಸುಂದರ ಅವರ ತಾಯಿಯೂ ಜತೆಗಿದ್ದಾರೆ. ದಂಪತಿ ಈಶ್ವರಮಂಗಲದ ಸಾರ್ವಜನಿಕ ಶೌಚಾಲಯದ ಶುಚಿತ್ವದ ಕೆಲಸವನ್ನು ನಿರ್ವಹಿಸುತ್ತಿದ್ದಾರೆ.

ಹಿರಿಯ ಪುತ್ರ ದುಡಿಯುತ್ತಿದ್ದರೆ ಕೊನೆಯ ಪುತ್ರ ಅಂಗನವಾಡಿಗೆ ಹೋಗದೆ ಅಜ್ಜಿಯ ಜತೆಗೆ ಸಮಯ ಕಳೆಯುತ್ತಿದ್ದ. ಇನ್ನೊಬ್ಬಳು ಸುಳ್ಯಪದವು ಸರ್ವೋದಯ ಪ್ರೌಢ ಶಾಲೆಯಲ್ಲಿ 9ನೇ ತರಗತಿ ಕಲಿಯುತ್ತಿದ್ದು, ಆಕೆಯೂ ಆಗಾಗ ಶಾಲೆಗೆ ಗೈರು ಹಾಜರಾಗುತ್ತಾಳೆ. ಬಡಗನ್ನೂರು ಸರಕಾರಿ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಾಗಿರುವ ಜಯಶ್ರೀ (7ನೇ), ಯತೀಶ್‌ (5ನೇ) ಮತ್ತು ಸಂತೋಷ (1ನೇ) ಆಗಸ್ಟ್‌ನಿಂದ ಶಾಲೆಯತ್ತ ಮುಖ ಮಾಡಿರಲಿಲ್ಲ. ಶಿಕ್ಷಣದ ಬಗ್ಗೆ ಹೆತ್ತವರಲ್ಲಿರುವ ನಿರ್ಲಕ್ಷ ದ ಪರಿಣಾಮವಾಗಿ ಮಕ್ಕಳಲ್ಲಿ ಶಾಲೆಗೆ ಹೋಗದಿದ್ದರೂ ನಡೆಯುತ್ತದೆ ಎಂಬ ಮನೋಭಾವ ಮಕ್ಕಳಲ್ಲಿ ಬೆಳೆದಿತ್ತು.

ಫ‌ಲ ನೀಡಿದ ಪ್ರಯತ್ನ
ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಪೊಲೀಸ್‌ ಇಲಾಖೆ, ಸಾರ್ವ ಜನಿಕರು ಸತತವಾಗಿ ಪ್ರಯತ್ನ ಮಾಡಿದರೂ ಮಕ್ಕಳನ್ನು ಶಾಲೆಗೆ ಕರೆತರುವ ಯತ್ನ ಫ‌ಲ ನೀಡಿರಲಿಲ್ಲ. ಕೊನೆಗೆ 2 ದಿನಗಳ ಹಿಂದೆ ಮಂಗಳೂರು ಚೈಲ್ಡ್‌ಲೈನ್‌ ಅಧಿಕಾರಿಗಳಾದ ಆಶಾಲತಾ, ಅಸುಂತ, ಕುಂಬ್ರ ಕ್ಲಸ್ಟರ್‌ ಮುಖ್ಯಸ್ಥೆ ಶಶಿಕಲಾ ಮತ್ತು ಪಂ. ಅಧಿಕಾರಿಗಳ ತಂಡವು ಪೋಷಕರು ಮತ್ತು ಹೆತ್ತವರಿಗೆ ಶಿಕ್ಷಣದ ಮಹತ್ವ ವನ್ನು ಮನವರಿಕೆ ಮಾಡಿದರು. ಮಕ್ಕಳನ್ನು ಕಳಿಸದಿದ್ದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಸಿದರು. ಅದರ ಫ‌ಲವಾಗಿ ನ. 6ರಂದು ಮೂವರು ಮಕ್ಕಳೂ ಶಾಲೆಗೆ ಹಾಜರಾದರು. ಶಾಲೆಗೆ ಹೋಗದ ಮಕ್ಕಳಿಬ್ಬರನ್ನು ಪೊಲೀಸ್‌ ಸಿಬಂದಿ ಮನವೊಲಿಸಿ ಶಾಲೆಗೆ ಕಳುಹಿಸಿದ ಘಟನೆ ಮಂಗಳವಾರ ವಿಟ್ಲದಿಂದ ವರದಿಯಾಗಿತ್ತು.

ಕೆಲವು ತಿಂಗಳಿನಿಂದ ಶಾಲೆಗೆ ಬಾರದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದರು. ಹಲವು ಬಾರಿ ಪ್ರಯತ್ನಿಸಿದರೂ ಹೆತ್ತವರು ಸ್ಪಂದಿಸದ ಕಾರಣ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಮಂಗಳೂರಿನ ಚೈಲ್ಡ್‌ ಲೈನ್‌ನವರ ನೆರವಿನೊಂದಿಗೆ ಮಕ್ಕಳನ್ನು ಶಾಲೆಗೆ ಕರೆತರುವಲ್ಲಿ ಸಫಲರಾಗಿದ್ದೇವೆ.
– ಶಶಿಕಲಾ, ಸಿಆರ್‌ಪಿ, ಕುಂಬ್ರ ಕ್ಲಸ್ಟರ್‌ ವಲಯ

ಮಕ್ಕಳು ವಾಸವಾಗಿರುವ ಮನೆ ಸಂಪೂರ್ಣ ಜೀರ್ಣವಾಗಿದ್ದು, ದುರಸ್ತಿಗಾಗಿ ಪಂಚಾಯತ್‌ಗೆ ಅರ್ಜಿ ಕೊಡುವಂತೆ ತಿಳಿಸಿದ್ದೇವೆ. ಡೋರ್‌ ನಂಬರ್‌, ಕುಡಿಯುವ ನೀರಿನ ಸಂಪರ್ಕ ಇದೆ. ಎಲ್ಲ ರೀತಿಯ ಸಹಾಯ ನೀಡಲು ಪಂಚಾಯತ್‌ ಬದ್ಧವಿದೆ.
– ವಸೀಮ್‌ಗಂಧ, ಬಡಗನ್ನೂರು ಗ್ರಾ.ಪಂ. ಪಿಡಿಒ

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.