ಮಕ್ಕಳ ಸೃಜನಶೀಲತೆಗೆ ಕಾವು ಕೊಟ್ಟ ಚಿಣ್ಣರ ಹಬ್ಬ-2018


Team Udayavani, Apr 21, 2018, 8:40 AM IST

Chinnara-Habba-20-4.jpg

ಕಡಬ: ಇಲ್ಲಿನ ಸೈಂಟ್‌ ಜೋಕಿಮ್ಸ್‌ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಒಂದು ವಾರ ಕಾಲ ಜರಗಿದ ಚಿಣ್ಣರ ಹಬ್ಬ-2018 ಮಕ್ಕಳ ಬೇಸಿಗೆ ಶಿಬಿರವು ಮಕ್ಕಳಲ್ಲಿ ಹುಗುಗಿದ್ದ ಸೃಜನಶೀಲ ಕೌಶಲಗಳಿಗೆ ಕಾವು ಕೊಡುವ ಮೂಲಕ ಗಮನ ಸೆಳೆಯಿತು. ಕಡಬ ಪರಿಸರದ ವಿವಿಧ ಶಾಲೆಗಳಿಂದ ಆಗಮಿಸಿದ್ದ ಸುಮಾರು 200 ಕ್ಕೂ ಹೆಚ್ಚು ಮಕ್ಕಳು ಈ ಶಿಬಿರದಲ್ಲಿ ಭಾಗವಹಿಸಿ ತಮ್ಮ ತಮ್ಮ ಆಸಕ್ತಿಯ ವಿಚಾರಗಳಲ್ಲಿ ಹೆಚ್ಚಿನ ತರಬೇತಿ ಪಡೆದುಕೊಂಡರು. ಕೃಷಿ, ರಂಗಕಲೆ, ಪ್ರಸಾದನ ಕಲೆ, ಕಸದಿಂದ ರಸ, ಚಿತ್ರಕಲೆ, ಸುಲಭ ಗಣಿತ, ಅಭಿನಯ ಗೀತೆ, ಪೇಪರ್‌ ಕ್ರಾಫ್ಟ್‌, ವಿಜ್ಞಾನ ಮಾದರಿ ತಯಾರಿ, ಮೋಜಿನ ಗಣಿತ, ಮಿಮಿಕ್ರಿ, ಶ್ಯಾಡೋ ಪ್ಲೇ, ಗಿಡಗಳಿಗೆ ಕಸಿ ಕಟ್ಟುವುದು ಮುಂತಾದ ವಿಷಯಗಳನ್ನೊಳಗೊಂಡು ವಾರಪೂರ್ತಿ ಜರಗಿದ ಶಿಬಿರವು ಮಕ್ಕಳಿಗೆ ಶೈಕ್ಷಣಿಕ ಸೇರಿದಂತೆ ಎಲ್ಲ ರೀತಿಯ ಕಲಿಕೆ ಮತ್ತು ಅನುಭವಗಳಿಗೆ ತೆರೆದುಕೊಂಡಿತು.


200 ಶಿಬಿರಾರ್ಥಿಗಳು

ಸುಳ್ಯದ ರೋಟರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ಶ್ರೀಹರಿ ಪೈಂದೋಡಿ (ಚಿತ್ರಕಲೆ, ಪೇಪರ್‌ಕಟ್ಟಿಂಗ್‌), ಗ್ರೇಸಿ ಪಿಂಟೋ (ಅಭಿನಯ ಗೀತೆ, ಮೋಜಿನ ಗಣಿತ), ಚಿತ್ರಕಲಾ ಶಿಕ್ಷಕ ಸತೀಶ್‌ ಪಂಜ (ಮೇಕಪ್‌ ಕಲೆ, ಚಿತ್ರಕಲೆ) ಯೋಗ ಶಿಕ್ಷಕಿ ಕುಸುಮಾವತಿ (ಯೋಗ ತರಬೇತಿ), ಪ್ರಸನ್ನ ಐವರ್ನಾಡು (ಚಿತ್ರಕಲೆ), ಜಯಪ್ರಕಾಶ ಮೋಂಟಡ್ಕ (ನಾಟಕ, ರಂಗಕಲೆ) ಶೈಲಿ ಪ್ರಭಾಕರ್‌ (ಪೇಪರ್‌ ಕ್ರಾಫ್ಟ್‌), ಪಿ.ಎನ್‌.ಭಟ್‌ (ಸುಲಭ ಗಣಿತ, ವಿಜ್ಞಾನ ಪ್ರಯೋ), ಪಟ್ಟಾಭಿರಾಮ ಸುಳ್ಯ (ಮಿಮಿಕ್ರಿ, ಶ್ಯಾಡೋ ಪ್ಲೇ), ಪುರುಷೋತ್ತಮ ಎಂ.ಎಸ್‌.(ವಿಜ್ಞಾನ ಮಾದರಿ ತಯಾರಿ), ಜಾನ್‌ವೇಗಸ್‌ (ಕೃಷಿ, ಕಸಿ ಕಟ್ಟುವುದು) ಮುಂತಾದ ಪ್ರತಿಭಾನ್ವಿತರು ಸಂಪನ್ಮೂಲವ್ಯಕ್ತಿಗಳಾಗಿ ಆಗಮಿಸಿ ಶಿಬಿರವನ್ನು ನಡೆಸಿಕೊಟ್ಟರು. ಪರಿಸರದ ವಿವಿಧ ಶಾಲೆಗಳ ಸುಮಾರು 200 ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದರು.

ಇನ್ನು ಪ್ರತಿ ವರ್ಷ
ಶಿಕ್ಷಣ ಎನ್ನುವುದು ಕೇವಲ ತರಗತಿ ಕೊಠಡಿಗಳಿಗಷ್ಟೇ ಸೀಮಿತಗೊಳ್ಳಬಾರದು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪಠ್ಯಪೂರಕ ಚಟುವಟಿಕೆಗಳ ಅತ್ಯಂತ ಅಗತ್ಯ ಎನ್ನುವ ದೃಷ್ಟಿಯಿಂದ ಈ ಶಿಬಿರವನ್ನು ಆಯೋಜಿಸಲಾಗಿತ್ತು. ಪರಿಸರದ ಸುಮಾರು 8 ಶಾಲೆಗಳ ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಬಿರದ ಪ್ರಯೋಜನ ಪಡೆದುಕೊಂಡಿದ್ದಾರೆ. ಮಕ್ಕಳ ಪ್ರತಿಭೆಗಳಿಗೆ ನೀರೆರೆದು ಪೋಷಿಸುವ ಈ ರೀತಿಯ ಶಿಬಿರವನ್ನು ಪ್ರತಿ ವರ್ಷ ಹಮ್ಮಿಕೊಳ್ಳುವ ಉದ್ದೇಶ ಇದೆ.
– ವಂ| ವಂ|ರೋನಾಲ್ಡ್‌ ಲೋಬೋ, ಸಂಚಾಲಕರು, ಸೈಂಟ್‌ ಜೋಕಿಮ್ಸ್‌ ಸಮೂಹ ಶಿಕ್ಷಣ ಸಂಸ್ಥೆಗಳು, ಕಡಬ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.