ಪೇಜಾವರ ಶ್ರೀ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
Team Udayavani, Mar 24, 2018, 9:00 AM IST
ಉಡುಪಿ/ ಹೂವಿನಹಡಗಲಿ: ತಾಂತ್ರಿಕ ದೋಷ ಕಂಡುಬಂದಿದ್ದರಿಂದ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಶುಕ್ರವಾರ ದಿಢೀರ್ ಭೂಸ್ಪರ್ಶ ಮಾಡಿದೆ. ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹೊಳಲು ಗ್ರಾಮದ ಸಾಧನಾ ಶಾಲೆಯ ಮೈದಾನದಲ್ಲಿ ಶುಕ್ರವಾರ ಸಂಜೆ ಹೆಲಿಕಾಪ್ಟರ್ ದಿಢೀರ್ ಭೂಸ್ಪರ್ಶ ಮಾಡಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ.
ಹೊಸಪೇಟೆಯ ಕೊಟ್ಟೂರೇಶ್ವರ ಮಠದ ಡಾ| ಸಂಗನ ಬಸವ ಸ್ವಾಮೀಜಿಗಳು ಆಯೋಜಿಸಿದ್ದ ಸರ್ವಧರ್ಮ ರಥೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪೇಜಾವರ ಶ್ರೀಗಳು ಶುಕ್ರವಾರ ಬೆಳಗ್ಗೆ ಹೊಸಪೇಟೆಗೆ ಆಗಮಿಸಿದ್ದರು. ಪೇಜಾವರ ಶ್ರೀಗಳ ಅನಾರೋಗ್ಯದ ಹಿನ್ನೆಲೆಯಲ್ಲಿ ಉಡುಪಿಯಿಂದ ಇಲ್ಲಿಗೆ ಆಗಮಿಸಲು ವಿಜಯನಗರದ ಮಾಜಿ ಶಾಸಕ ಆನಂದ್ ಸಿಂಗ್ ಹೆಲಿಕಾಪ್ಟರ್ ವ್ಯವಸ್ಥೆ ಮಾಡಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಶ್ರೀಗಳು ವಾಪಸ್ ಉಡುಪಿಗೆ ತೆರಳಲು ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸುತ್ತಿದ್ದರು. ಸ್ವಲ್ಪ ದೂರ ಸಾಗಿ ಹೊಳಲು ಗ್ರಾಮ ಸಮೀಪಿಸುತ್ತಿದ್ದಂತೆ ಕಾಪ್ಟರ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಇದನ್ನು ಅರಿತ ಪೈಲಟ್ ಕೂಡಲೇ ಹತ್ತಿರದ ಸಾಧನಾ ಸನಿವಾಸ ಶಾಲೆಯ ಮೈದಾನದಲ್ಲಿ ಕಾಪ್ಟರ್ ಇಳಿಸುವ ಮೂಲಕ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿಸಿದ್ದಾರೆ. ಶಾಲಾ ಮೈದಾನದಲ್ಲಿ ಹೆಲಿಕಾಪ್ಟರ್ ದಿಢೀರ್ ಇಳಿಯುತ್ತಿದ್ದಂತೆ ಶಾಲಾ ಮುಖ್ಯಸ್ಥರು ಹಾಗೂ ಸಿಬಂದಿ ಮೈದಾನದತ್ತ ಆಗಮಿಸಿದ್ದಾರೆ. ಕಾಪ್ಟರ್ ನಲ್ಲಿ ಶ್ರೀಗಳು ಇರುವುದನ್ನು ಕಂಡು ಯೋಗಕ್ಷೇಮ ವಿಚಾರಿಸಿದರು.
ಒಂದು ಗಂಟೆಗೂ ಹೆಚ್ಚು ಸಮಯ ಮೈದಾನದಲ್ಲಿ ಇದ್ದ ಶ್ರೀಗಳು ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದರು. ‘ಇದು ಅನಿರೀಕ್ಷಿತ ಘಟನೆ. ಇದರಿಂದ ಯಾರೂ ಭಯಭೀತರಾಗಬಾರದು. ನಾವು ಆರೋಗ್ಯವಾಗಿದ್ದೇವೆ’ ಎಂದು ಪೇಜಾವರ ಶ್ರೀಗಳು ತಿಳಿಸಿದರು. ಕಾಪ್ಟರ್ನಲ್ಲಿ ಕಾಣಿಸಿಕೊಂಡ ದೋಷವನ್ನು ಸರಿಪಡಿಸಿದ ಅನಂತರ ಶ್ರೀಗಳು ಉಡುಪಿಗೆ ಪ್ರಯಾಣ ಬೆಳೆಸಿದರು ಮತ್ತು ರಾತ್ರಿ ಬಪ್ಪನಾಡು ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್