Ammembala ಸಾಹಿತ್ಯ ಪ್ರಶಸ್ತಿಗೆ ಆಯ್ಕೆ; ಜನವರಿ 24ರಂದು ಮಂಗಳೂರು ವಿ.ವಿ.ಯಲ್ಲಿ ಪ್ರದಾನ
Team Udayavani, Jan 21, 2024, 11:51 PM IST
ಮಂಗಳೂರು: ಹಿರಿಯ ನವೋದಯ ಕವಿ, ಸಂಸ್ಕೃತ-ಕನ್ನಡ ಭಾಷಾ ಪಂಡಿತರಾದ ವಿದ್ವಾನ್ ಅಮ್ಮೆಂಬಳ ಶಂಕರನಾರಾಯಣ ನಾವಡ ಸಾಹಿತ್ಯ ಪ್ರತಿಷ್ಠಾನ ವತಿಯಿಂದ 2020, 2021, 2022 ಹಾಗೂ 2023ನೇ ಸಾಲಿನ ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ ಪ್ರಕಟಿಸಲಾಗಿದೆ.
ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ, ಜಾನಪದ ತಜ್ಞ, ಸಂಶೋಧಕ ಡಾ| ಹಿ.ಚಿ. ಬೋರಲಿಂಗಯ್ಯ (2020), ಬೆಂಗಳೂರು ವಿ.ವಿ. ವಿಶ್ರಾಂತ ಪ್ರಾಧ್ಯಾಪಕ, ವಿಮರ್ಶಕ ಡಾ| ಬಸವರಾಜ ಕಲ್ಗುಡಿ, (2021), ಹಿರಿಯ ಸಂಶೋಧಕ, ನಿವೃತ್ತ ಪ್ರಾಂಶುಪಾಲ ಡಾ| ಪಾದೇಕಲ್ಲು ವಿಷ್ಣು ಭಟ್ಟ (2022) ಹಾಗೂ ಹಿರಿಯ ಸಂಶೋಧಕ ಹಾಗೂ ನಿವೃತ್ತ ಪ್ರಾಂಶುಪಾಲ ಡಾ| ಬಿ. ಜನಾರ್ದನ ಭಟ್ (2023) ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಶಸ್ತಿಯು 10 ಸಾವಿರ ರೂ. ನಗದು, ಫಲಕ ಸಂಪುಟವನ್ನು ಒಳಗೊಂಡಿದೆ.
ಮಂಗಳೂರು ವಿ.ವಿ.ಯ ಪ್ರೊ| ಎಸ್.ವಿ. ಪರಮೇಶ್ವರ ಭಟ್ಟ ಕನ್ನಡ ಅಧ್ಯಯನ ಕೇಂದ್ರದಲ್ಲಿ ಜ. 24ರಂದು ಬೆಳಗ್ಗೆ 10.30 ಪ್ರಶಸ್ತಿ ಪ್ರದಾನ ನಡೆಯಲಿದೆ.
ಕಸಾಪ ಮಾಜಿ ಅಧ್ಯಕ್ಷ ಡಾ| ಹರಿಕೃಷ್ಣ ಪುನರೂರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ವಿ.ವಿ. ಕುಲಪತಿ ಡಾ| ಜಯರಾಜ್ಅಮೀನ್ ಅಧ್ಯಕ್ಷತೆ ವಹಿಸಲಿದ್ದು, ಕರ್ಣಾಟಕ ಬ್ಯಾಂಕ್ ಮಾಜಿ ಎಂಡಿ ಡಾ| ಮಹಾಬಲೇಶ್ವರ ಎಂ.ಎಸ್. ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ| ಅಜಕ್ಕಳ ಗಿರೀಶ್ ಭಟ್ ಅಭಿನಂದನ ಭಾಷಣ ಮಾಡುವರು ಎಂದು ಪ್ರತಿಷ್ಠಾನದ ಅಧ್ಯಕ್ಷ, ಹಂಪಿ ಕನ್ನಡ ವಿ.ವಿ. ನಿವೃತ್ತ ಪ್ರಾಧ್ಯಾಪಕ ಪ್ರೊ| ಎ.ವಿ. ನಾವಡ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!