ದಲಿತ ಹೋರಾಟಗಾರ ಡೀಕಯ್ಯ ಸಾವು ಪ್ರಕರಣ: ತನಿಖೆ ಚುರುಕುಗೊಳಿಸಿದ ಸಿಐಡಿ
Team Udayavani, Dec 24, 2022, 6:15 AM IST
ಬೆಳ್ತಂಗಡಿ: ಮೂಲತಃ ಕಣಿಯೂರು ಗ್ರಾಮದ ಪೊಯ್ಯ ನಿವಾಸಿ, ಕೊಳಲಪಲ್ಕೆ ಗರ್ಡಾಡಿಯಲ್ಲಿ ನೆಲೆಸಿದ್ದ ಬಹುಜನ ಚಳವಳಿಯ ಹಿರಿಯ ನಾಯಕ ಪಿ.ಡೀಕಯ್ಯ (63) ಅವರ ಸಾವಿನ ತನಿಖೆ ಆರಂಭಿಸಿರುವ ಸಿಐಡಿ ಅಧಿಕಾರಿಗಳು ಬೆಳ್ತಂಗಡಿ ಪೊಲೀಸ್ ಠಾಣೆಗೆ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ.
ಸಿಐಡಿ ಉಪನಿರೀಕ್ಷಕ ಶಿವರಾಜ್ ನೇತೃತ್ವದಲ್ಲಿ ಡಿ. 22ರಂದು ಬೆಳ್ತಂಗಡಿಗೆ ಬಂದಿರುವ ತಂಡವು ಡೀಕಯ್ಯ ಅವರ ಮನೆಗೆ ತೆರಳಿ ಸ್ಥಳ ಮಹಜರು ನಡೆಸಿದೆ. ಬಳಿಕ ಪತ್ನಿಯಿಂದ ಮಾಹಿತಿ ಪಡೆದಿದೆ ಎನ್ನಲಾಗಿದೆ.
ಡೀಕಯ್ಯ ಅವರು ಜುಲೈ 6ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಕುಸಿದು ಬಿದ್ದು ಗಾಯಗೊಂಡಿದ್ದು, ಜುಲೈ 8ರಂದು ಮಣಿಪಾಲದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇವರ ಅಂತ್ಯಸಂಸ್ಕಾರವು ಪದು¾ಂಜದ ಮನೆಯಲ್ಲಿ ನಡೆದಿತ್ತು.
ಬಳಿಕ ಡೀಕಯ್ಯ ಅವರ ಸಹೋದರಿ ಯರು ಹಾಗೂ ಮನೆಯವರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಜು. 15ರಂದು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಜು. 18ರಂದು ಅವರ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ಈ ನಡುವೆ ಮನೆ ಯವರು ಸಿಐಡಿ ತನಿಖೆಗೆ ಆಗ್ರಹಿಸಿ ಮನವಿ ಸಲ್ಲಿಸಿದ್ದರಿಂದ ಸರಕಾರವು ತನಿಖೆಯನ್ನು ಸಿಐಡಿಗೆ ವಹಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ