ಭ್ರಷ್ಟಾಚಾರದ ವಿರುದ್ಧ ನಾಗರಿಕ ಜಾಗೃತಿ

ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಅಧಿಕಾರಿಗಳು; ದೂರು ಸಂಖ್ಯೆಯೂ ಹೆಚ್ಚಳ

Team Udayavani, Oct 20, 2019, 5:04 AM IST

c-48

ಸಾಂದರ್ಭಿಕ ಚಿತ್ರ

ಪುತ್ತೂರು: ಪುತ್ತೂರು, ಸುಳ್ಯ ತಾಲೂಕುಗಳ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಸರಕಾರಿ ಇಲಾಖೆಗಳ ದೊಡ್ಡ ಕುಳಗಳೇ ಸಿಕ್ಕಿ ಬೀಳುತ್ತಿರುವುದು ಪಾರದರ್ಶಕ ಆಡಳಿತ ವ್ಯವಸ್ಥೆ ಆಶಯಕ್ಕೆ ಋಣಾತ್ಮಕ ವಿಚಾರ ವಾದರೂ ಸಾರ್ವಜನಿಕ ಜಾಗೃತಿ ಪ್ರಜ್ಞೆ ಚುರುಕಾಗಿರುವ ಧನಾತ್ಮಕ ಬೆಳವಣಿಗೆಯನ್ನು ಸೂಚಿಸುತ್ತಿದೆ.

ನಾಲ್ಕು ತಿಂಗಳ ಅವಧಿಯಲ್ಲಿ ಪುತ್ತೂರು ತಾಲೂಕು ವ್ಯಾಪ್ತಿಯಲ್ಲಿ ಲಂಚ ಸ್ವೀಕರಿಸುವ ಸಂದರ್ಭ ರೆಡ್‌ ಹ್ಯಾಂಡ್‌ ಆಗಿ ಕಂದಾಯ ಇಲಾಖೆಯ ಪ್ರಮುಖ ಅಧಿಕಾರಿಗಳೇ ಸಿಕ್ಕಿ ಬಿದ್ದಿದ್ದಾರೆ. ಚುನಾವಣ ಕರ್ತವ್ಯದ ಸಂದರ್ಭದಲ್ಲಿ ಕೇಟರಿಂಗ್‌ ವ್ಯವಸ್ಥೆ ಮಾಡಿದವರಿಂದ ದೊಡ್ಡ ಮೊತ್ತದ ಲಂಚ ಸ್ವೀಕರಿಸುತ್ತಿದ್ದ ಪುತ್ತೂರು ತಹಶೀಲ್ದಾರ್‌ ಡಾ| ಪ್ರದೀಪ್‌ ಕುಮಾರ್‌ ಎಸಿಬಿ ಬಲೆಗೆ ಬಿದ್ದಿದ್ದರು. ಅ. 4ರಂದು ಪುತ್ತೂರು ಸರ್ವೇಯರ್‌ ಶಿವಕುಮಾರ್‌ ಉಪ್ಪಿನಂಗಡಿಯಲ್ಲಿ ಲಂಚ ಸ್ವೀಕರಿಸುವಾಗ, ಅ. 10ರಂದು ಕಡಬ ತಾಲೂಕಿನ ರಾಮಕುಂಜ ಮತ್ತು ಹಳೆನೇರಂಕಿ ಗ್ರಾಮದ ಗ್ರಾಮಕರಣಿಕ ದುರ್ಗಪ್ಪ ಲಂಚ ಸ್ವೀಕರಿಸುವಾಗ ಬಂಧನಕ್ಕೆ ಒಳಗಾಗಿದ್ದರು.

ದೂರುದಾರರ ಹೆಚ್ಚಳ
ಲೋಕಾಯುಕ್ತ ಸಂಸ್ಥೆ ಮಾತ್ರವಲ್ಲದೆ ಭ್ರಷ್ಟಾಚಾರ ನಿಗ್ರಹ ದಳದಲ್ಲೂ ಪುತ್ತೂರು ಮತ್ತು ಸುಳ್ಯ ತಾಲೂಕು ಗಳ ಗ್ರಾಮಾಂತರ ಭಾಗದಲ್ಲಿ ಸಾಕಷ್ಟು ದೂರುಗಳು ಸಾರ್ವಜನಿಕ ವಲಯದಿಂದ ದಾಖಲಾಗುತ್ತಿವೆ. ಇತ್ತೀಚೆಗೆ ಲೋಕಾಯುಕ್ತ ಸಂಸ್ಥೆ ಪುತ್ತೂರಿನಲ್ಲಿ ನಡೆಸಿದ್ದ ಅದಾಲತ್‌ನಲ್ಲಿ 27 ಪ್ರಕರಣಗಳ ಪರಿಶೀಲನೆ ಮತ್ತು ವಿಚಾರಣೆ ನಡೆದಿತ್ತು. ಸಾರ್ವಜನಿಕರ ಕೆಲಸ ಮಾಡಿಕೊಡಲು ಲಂಚ ಸ್ವೀಕರಿಸುವ ಅಧಿಕಾರಿಗಳ ಕುರಿತು ದೂರು ನೀಡುವವರ ಸಂಖ್ಯೆ ಹೆಚ್ಚಾಗುತ್ತಿದೆ ಎನ್ನುವುದನ್ನು ಎಸಿಬಿ ಅಧಿಕಾರಿಗಳೂ ಒಪ್ಪಿಕೊಳ್ಳುತ್ತಾರೆ.

ಪ್ರಮುಖರು ಹೊಣೆಗಾರರಲ್ಲವೇ?
ಇತ್ತೀಚಿನ ದಿನಗಳಲ್ಲಿ ಪುತ್ತೂರು ಮತ್ತು ಕಡಬ ತಾಲೂಕು ವ್ಯಾಪ್ತಿಯಲ್ಲಿ ಸಾರ್ವಜನಿಕ ಕೆಲಸ ಮಾಡಿಕೊಡಲು ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಮೂವರು ಅಧಿಕಾರಿಗಳೂ ಕಂದಾಯ ಇಲಾಖೆ ವ್ಯಾಪ್ತಿಗೆ ಬರುತ್ತಾರೆ. ಕಂದಾಯ ಇಲಾಖೆಯಡಿಯಲ್ಲಿ ಬರುವ ತಹಶೀಲ್ದಾರ್‌ ಕಚೇರಿ, ತಾಲೂಕು ಕಚೇರಿ, ಭೂ ಮಾಪನ ಕಚೇರಿಯಲ್ಲಿ ಹಣ ನೀಡದೆ ಕೆಲಸ ನಡೆಯುವುದಿಲ್ಲ ಎನ್ನುವ ಆರೋಪ ಇದೆ. ಇವರೆಲ್ಲರ ಮೇಲಧಿಕಾರಿ ಸ್ಥಾನದಲ್ಲಿದ್ದು, ಉಪವಿಭಾಗದ ದಂಡಾಧಿಕಾರಿಯೂ ಆಗಿರುವ ಸಹಾಯಕ ಕಮಿಷನರ್‌ ಇವರನ್ನು ಹದ್ದುಬಸ್ತಿನಲ್ಲಿಡಬೇಕಾದ ಅಗತ್ಯವಿದೆ.

ಸಹಕಾರ ಬೇಕು
ಗ್ರಾಮಾಂತರ ತಾಲೂಕು ವ್ಯಾಪ್ತಿಗಳಲ್ಲಿ ಭ್ರಷ್ಟಾಚಾರ ನಡೆಸುವ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಪ್ರತಿಭಟನೆ ವ್ಯಕ್ತಪಡಿಸಿ ದೂರು ನೀಡುತ್ತಿರುವುದು ಉತ್ತಮ ಬೆಳವಣಿಗೆ. ಭ್ರಷ್ಟಾಚಾರವನ್ನು ಸಂಪೂರ್ಣ ದೂರ ಮಾಡಲು ಸಾರ್ವಜನಿಕ ಸಹಕಾರ, ಬೆಂಬಲ ಅತಿ ಅಗತ್ಯ. ಅವರು ಮುಕ್ತವಾಗಿ ನಿಯಮದ ಪ್ರಕಾರ ದೂರು ನೀಡಬಹುದು.
– ಸುಧೀರ್‌ ಹೆಗ್ಡೆ, ಪ್ರಭಾರ ಎಸ್ಪಿ, ಭ್ರಷ್ಟಾಚಾರ ನಿಗ್ರಹ ದಳ

ಇಲ್ಲಿಗೆ ದೂರು ನೀಡಿ
ಭ್ರಷ್ಟಾಚಾರ ನಿಗ್ರಹ ದಳ ದ.ಕ. ಡಿವೈಎಸ್ಪಿ
– 9480806231
ಪೊಲೀಸ್‌ ಇನ್‌ಸ್ಪೆಕ್ಟರ್‌ – 9480806291
– 9480806292
ಸ್ಥಿರ ದೂರವಾಣಿ – 08242483000

– ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.