ಬಿಪಿಎಲ್‌ಗೆ ಸ್ವಯಂಘೋಷಣೆ ಸಾಕು: ಖಾದರ್‌


Team Udayavani, Apr 11, 2017, 1:07 PM IST

khadar-1.jpg

ಮಂಗಳೂರು: ಬಿಪಿಎಲ್‌ ಪಡಿತರ ಚೀಟಿಗೆ ನಿಗದಿಪಡಿಸಿರುವ 4 ಮಾನದಂಡಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಂದ ದೃಢಪತ್ರಗಳನ್ನು ನೀಡುವ ಬದಲು ಅರ್ಜಿದಾರರೇ ಸ್ವಯಂಘೋಷಣೆ ಮಾಡಿದರೆ ಸಾಕು ಎಂಬುದಾಗಿ ಸರಕಾರ ರೂಪಿಸಿರುವ ನಿಯಮ ಎ. 1ರಿಂದಲೇ ಜಾರಿಗೆ ಬಂದಿದ್ದು ಇತರ ದೃಢಪತ್ರಗಳನ್ನು ಪಡೆಯುವ ಅಗತ್ಯವಿಲ್ಲ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಗ್ರಾ.ಪಂ.ಗಳು, ನಗರಾಡಳಿತ ಸಂಸ್ಥೆಗಳಲ್ಲಿ ಅರ್ಜಿದಾರರಿಂದ ದೃಢಪತ್ರಗಳನ್ನು ಕೇಳುತ್ತಿರುವುದಾಗಿ ದೂರುಗಳು ಬಂದಿವೆ. ಅಧಿಕಾರಿಗಳು ಸ್ವಯಂಘೋಷಣೆ ಅಧಾರದಲ್ಲೇ ಅವರಿಗೆ ಬಿಪಿಎಲ್‌ ಪಡಿತರ ಚೀಟಿಗಳನ್ನು ನೀಡಬೇಕು ಎಂದು ಸಚಿವರು ತಿಳಿಸಿದರು.

ಅರ್ಜಿದಾರರು ಸರಕಾರ ನಿಗದಿಪಡಿಸಿರುವ ಮಾನದಂಡಗಳಂತೆ ಸ್ವಯಂಘೋಷಣೆ ಮಾಡಿರುತ್ತಾರೆ. ಕುಟುಂಬದ ವಾರ್ಷಿಕ ಆದಾಯವು 1.20 ಲಕ್ಷ ರೂ. ಒಳಗಡೆ ಇರುವ ಕುರಿತು ಕಂದಾಯ ಇಲಾಖೆ ನೀಡುತ್ತಿರುವ ಆದಾಯ ದೃಢೀಕರಣ ಪತ್ರದ ಆಧಾರದಲ್ಲಿ ನಿರ್ಧರಿಸಲಾಗುವುದು. ಅರ್ಜಿದಾರರು ಆಹಾರ ಇಲಾಖೆಗೆ ಸಲ್ಲಿಸಿರುವ ಮಾಹಿತಿಯ ಆಧಾರದ ಮೇಲೆ ಆದಾಯ ಪ್ರಮಾಣಪತ್ರವನ್ನು ತಂತ್ರಾಂಶದ ಮೂಲಕ ಕಂದಾಯ ಇಲಾಖೆಯಿಂದ ಪಡೆದುಕೊಳ್ಳಲಾಗುವುದು. ಅದಕ್ಕಾಗಿ ಅರ್ಜಿದಾರರು ಪ್ರತ್ಯೇಕ ವಿವರ ಸಲ್ಲಿಸುವ ಅಗತ್ಯವೂ ಇರುವುಲ್ಲ. ಕಂದಾಯ ಇಲಾಖೆಯಿಂದ ಆದಾಯ ಪ್ರಮಾಣಪತ್ರ ನೀಡುವಾಗ ಅರ್ಜಿದಾರರ ಕುಟುಂಬದ ವಿಳಾಸ ಹಾಗೂ ಕುಟುಂಬದ ಮುಖ್ಯಸ್ಥರೊಂದಿಗೆ ಕುಟುಂಬದ ಇತರ ಸದಸ್ಯರ ಸಂಬಂಧವೂ ಕೂಡ ದೃಢೀಕರಣಗೊಳ್ಳುವುದು.

ಸ್ಥಳ ತನಿಖೆ ಅನಗತ್ಯ
ಆಹಾರ ನಿರೀಕ್ಷಕರು ತಂತ್ರಾಂಶದಲ್ಲಿ ಸ್ವೀಕರಿಸಿದ ಆದಾಯ ದೃಢೀಕರಣ ಪತ್ರದ ಮಾಹಿತಿಯಂತೆ ಕುಟುಂಬದ ವಾರ್ಷಿಕ ಆದಾಯವೂ 1.20 ಲಕ್ಷ ರೂ. ಒಳಗಿದ್ದರೆ ಅರ್ಜಿಯನ್ನು ತಂತ್ರಾಂಶದಲ್ಲೇ ಅನುಮೋದಿಸುವುದು. ಆದುದರಿಂದ ಆಹಾರ ನಿರೀಕ್ಷಕರು ಪಡಿತರ ಚೀಟಿ ಮಂಜೂರು ಮಾಡಲು ಸ್ಥಳ ತನಿಖೆ ಮಾಡುವ ಆವಶ್ಯಕತೆ ಇರುವುದಿಲ್ಲ ಎಂದು ಸಚಿವ ಖಾದರ್‌ ತಿಳಿಸಿದರು.

ತೊಗರಿಬೇಳೆ ವಿತರಣೆ ಸ್ಥಗಿತ
ಗುತ್ತಿಗೆದಾರರು ಸಮರ್ಪಕವಾಗಿ ಪೂರೈಕೆ ಮಾಡದಿರುವ ಹಿನ್ನೆಲೆಯಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ತೊಗರಿ ಬೇಳೆ ವಿತರಿಸುವಲ್ಲಿ ಸಮಸ್ಯೆ ತಲೆದೋರಿದ್ದು ಪರಿಹರಿಸುವಲ್ಲಿ ಇಲಾಖೆ ಕಾರ್ಯೋನ್ಮುಖವಾಗಿದೆ ಎಂದು ಸಚಿವ ಖಾದರ್‌ ಹೇಳಿದರು.

ಬಿಪಿಎಲ್‌ ಪಡಿತರ ಚೀಟಿದಾರರಿಗೆ 1 ಕಿಲೋ ತೊಗರಿಬೇಳೆಯನ್ನು ವಿತರಿಸಲಾಗುತ್ತಿದೆ. ಆದರೆ ಟೆಂಡರ್‌ ವಹಿಸಿಕೊಂಡವರು ಸರಬರಾಜು ಮಾಡದಿರುವ ಹಿನ್ನೆಲೆಯಲ್ಲಿ ಎಪ್ರಿಲ್‌ನಲ್ಲಿ ನ್ಯಾಯಬೆಲೆ ಅಂಗಡಿಗಳಿಗೆ ಪೂರೈಕೆಯಾಗಿಲ್ಲ. ದರದಲ್ಲಿ ಏರಿಕೆಯಾಗಿರುವುದರಿಂದ ನಿಗದಿತ ದರದಲ್ಲಿ ಪೂರೈಕೆ ಮಾಡಲು ನಮಗೆ ಸಾಧ್ಯವಾಗುತ್ತಿಲ್ಲ ಎಂದು ಗುತ್ತಿಗೆದಾರರು ಸಬೂಬು ನೀಡುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ವಿವಿಧ ಜಿಲ್ಲೆಗಳಿಗೆ ತೊಗರಿಬೇಳೆ ಸರಬರಾಜು ಮಾಡಲು 15 ಮಂದಿ ಗುತ್ತಿಗೆ ವಹಿಸಿಕೊಂಡಿದ್ದಾರೆ. ಇದರಲ್ಲಿ 10 ಮಂದಿ ಸರಬರಾಜು ಮಾಡಿಲ್ಲ. ದಕ್ಷಿಣ ಕನ್ನಡಕ್ಕೆ ಬೆಳಗಾವಿಯ ವ್ಯಕ್ತಿಯೋರ್ವರು ಗುತ್ತಿಗೆ ಪಡೆದುಕೊಂಡಿದ್ದಾರೆ. ಕರಾರಿನಂತೆ ಅವರು ತಿಂಗಳ 25ನೇ ತಾರೀಕಿನೊಳಗೆ ಗೋದಾಮುಗಳಿಗೆ ಪೂರ್ಣ ಪ್ರಮಾಣದಲ್ಲಿ ಸರಬರಾಜು ಮಾಡಬೇಕು. ಈ ಕುರಿತು ಈಗಾಗಲೇ ಗುತ್ತಿಗೆದಾರರಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಎ. 15ರ ವರೆಗೆ ಕಾಯಲಾಗುವುದು. ಬಳಿಕ ಸರಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದವರು ವಿವರಿಸಿದರು.

ರೈತರಿಂದ ನೇರ ಖರೀದಿಸಿ ವಿತರಣೆಗೆ ಚಿಂತನೆ
ಗುತ್ತಿಗೆದಾರರು ವಿಫಲರಾದರೆ ಸರಕಾರವೇ ರೈತರಿಂದ ನೇರವಾಗಿ ಖರೀದಿಸಿ ವಿತರಿಸಲು ಚಿಂತನೆ ನಡೆಸಿದೆ. ಸರಕಾರ ಈಗಾಗಲೇ ರೈತರಿಗೆ ತೊಗರಿ ಬೇಳೆಗೆ 5,500 ರೂ. ಬೆಂಬಲ ಬೆಲೆ ನೀಡುತ್ತಾ ಇದೆ. ರೈತರಿಂದ ಖರೀದಿಸಿ ಅದನ್ನು ಕರ್ನಾಟಕ ಆಹಾರ ನಿಗಮದ ಮೂಲಕ ಪ್ಯಾಕ್‌ ಮಾಡಿ ನ್ಯಾಯಬೆಲೆ ಅಂಗಡಿಗಳಿಗೆ ಪೂರೈಕೆ ಮಾಡುವುದು ಇದರಲ್ಲಿ ಒಳಗೊಂಡಿದೆ ಎಂದು ಸಚಿವ ಖಾದರ್‌ ತಿಳಿಸಿದರು.

ವಂಚಿಸಿದರೆ ಕ್ರಿಮಿನಲ್‌ ಮೊಕದ್ದಮೆ
ಮಾನದಂಡಗಳ ಕುರಿತಾಗಿ ಅರ್ಜಿದಾರರ ಸ್ವಯಂ ಘೋಷಣೆ ಮೇರೆಗೆ ವಿತರಿಸಿದ ಪಡಿತರ ಚೀಟಿಗಳನ್ನು  ಅನಂತರ 1 ವರ್ಷದೊಳಗಾಗಿ ಆಹಾರ ನಿರೀಕ್ಷಕರು ರ್‍ಯಾಂಡಮ್‌ ಚೆಕ್‌ ವಿಧದಂತೆ ಸಂಪೂರ್ಣವಾಗಿ ಪರಿಶೀಲನೆ ಮಾಡುತ್ತಾರೆ. ತಪ್ಪು ಮಾಹಿತಿ ನೀಡಿ ಅನರ್ಹ ಕುಟುಂಬಗಳು ಪಡಿತರ ಚೀಟಿ ಪಡೆದಿರುವುದು ಕಂಡುಬಂದಲ್ಲಿ ಅವರ ಮೇಲೆ ಸೂಕ್ತ ಕ್ರಿಮಿನಲ್‌ ಮೊಕದ್ದಮೆ ಹೂಡಲಾಗುವುದು. ಈ ಕುರಿತು ತಂತ್ರಾಂಶದ ಮುಖಾಂತರ ಪಡಿತರ ಚೀಟಿಗಳನ್ನು ರ್‍ಯಾಂಡಮ್‌ ಚೆಕ್‌ ಮಾಡಲು ಸಂಬಂಧಪಟ್ಟಂತಹ ಆಹಾರ ನಿರೀಕ್ಷರ ಲಾಗಿನ್‌ನಲ್ಲಿ ಕಳುಹಿಸಲಾಗುವುದು ಎಂದು ಸಚಿವ ಯು.ಟಿ. ಖಾದರ್‌ ತಿಳಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.